ಹೊಸಪೇಟೆ: ಅನಾರೋಗ್ಯದಿಂದ ಮೃತಪಟ್ಟಿರುವ ಸಂಡೂರು ಘಟಕದ ಚಾಲಕ/ನಿರ್ವಾಹಕ ಕೆ. ಬಸವರಾಜ (56) ಅವರ ಪತ್ನಿ ಅಕ್ಕಮಹಾದೇವಿ ಅವರಿಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಅವರು ಶುಕ್ರವಾರ ₹3 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.
‘ಸಂಸ್ಥೆಯ ನಿಯಮದ ಪ್ರಕಾರ, ಸಿಬ್ಬಂದಿ ಮೃತರಾದಲ್ಲಿ ಅವರ ಅವಲಂಬಿತರಿಗೆ ಆಂತರಿಕ ಗುಂಪು ವಿಮಾ ಯೋಜನೆಯ ಅಡಿಯಲ್ಲಿ ₹3 ಲಕ್ಷ ಪರಿಹಾರ ನೀಡಲಾಗುತ್ತದೆ. ಅದರಂತೆ ಬಸವರಾಜ ಅವರ ಪತ್ನಿ ಅಕ್ಕಮಹಾದೇವಿ ಅವರಿಗೆ ಪರಿಹಾರದ ಚೆಕ್ ನೀಡಲಾಗಿದೆ’ ಎಂದು ಶೀನಯ್ಯ ತಿಳಿಸಿದ್ದಾರೆ.
ಸಂಸ್ಥೆಯ ಕಾರ್ಮಿಕ ಕಲ್ಯಾಣ ಅಧಿಕಾರಿ ಎಚ್. ಚಂದ್ರಶೇಖರ ಇದ್ದರು.