<p><strong>ಬಳ್ಳಾರಿ:</strong> ‘ರಾಜ್ಯದ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಅಥವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಎಂಬ ಬಗ್ಗೆ ಗೊಂದಲ ಮೂಡಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. </p>.<p>‘ಸಿದ್ದರಾಮಯ್ಯ ಅವರು ಸುರ್ಜೆವಾಲ ಎದುರು ಮಂಡಿಯೂರಿದ್ದಾರೆ. ಸರ್ಕಾರದ ಆಯಸ್ಸನ್ನು ಅವರೇ ನಿರ್ಧರಿಸುವರು. ಬಿಹಾರ ಚುನಾವಣೆ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಹಿಂದುಳಿದ ವರ್ಗದ ನಾಯಕನಾಗಿ ಬಿಂಬಿಸಲಾಗುತ್ತಿದೆ.ಚುನಾವಣೆ ಬಳಿಕ ಈ ಸರ್ಕಾರವೇ ಇರುವುದಿಲ್ಲ’ ಎಂದು ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ಮತ್ತು ಜನಾರ್ದನ ರೆಡ್ಡಿ ನಡುವೆ ಮನಸ್ತಾಪವಿಲ್ಲ. ಕೇಂದ್ರ ಸಚಿವ ಸೋಮಣ್ಣ ದೆಹಲಿಯಲ್ಲಿ ನಮ್ಮಿಬ್ಬರ ಸಂಧಾನ ಮಾಡುತ್ತಾರೆ ಎಂಬುದು ಸುಳ್ಳು. ನನ್ನನ್ನು ಪಕ್ಷದಲ್ಲಿ ಕಡೆಗಣಿಸಿಲ್ಲ. ನನ್ನನ್ನು ಬಿಟ್ಟು ರಾಜಕಾರಣ ಮಾಡಲು ಆಗದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ರಾಜ್ಯದ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಅಥವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಎಂಬ ಬಗ್ಗೆ ಗೊಂದಲ ಮೂಡಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. </p>.<p>‘ಸಿದ್ದರಾಮಯ್ಯ ಅವರು ಸುರ್ಜೆವಾಲ ಎದುರು ಮಂಡಿಯೂರಿದ್ದಾರೆ. ಸರ್ಕಾರದ ಆಯಸ್ಸನ್ನು ಅವರೇ ನಿರ್ಧರಿಸುವರು. ಬಿಹಾರ ಚುನಾವಣೆ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಹಿಂದುಳಿದ ವರ್ಗದ ನಾಯಕನಾಗಿ ಬಿಂಬಿಸಲಾಗುತ್ತಿದೆ.ಚುನಾವಣೆ ಬಳಿಕ ಈ ಸರ್ಕಾರವೇ ಇರುವುದಿಲ್ಲ’ ಎಂದು ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ಮತ್ತು ಜನಾರ್ದನ ರೆಡ್ಡಿ ನಡುವೆ ಮನಸ್ತಾಪವಿಲ್ಲ. ಕೇಂದ್ರ ಸಚಿವ ಸೋಮಣ್ಣ ದೆಹಲಿಯಲ್ಲಿ ನಮ್ಮಿಬ್ಬರ ಸಂಧಾನ ಮಾಡುತ್ತಾರೆ ಎಂಬುದು ಸುಳ್ಳು. ನನ್ನನ್ನು ಪಕ್ಷದಲ್ಲಿ ಕಡೆಗಣಿಸಿಲ್ಲ. ನನ್ನನ್ನು ಬಿಟ್ಟು ರಾಜಕಾರಣ ಮಾಡಲು ಆಗದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>