ಇದಕ್ಕೂ ಮುನ್ನ ಮದುವೆಗೆ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಸಂಗನಬಸವ ಸ್ವಾಮೀಜಿ ವಧು–ವರನನ್ನು ಆಶೀರ್ವದಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ. ಮಾಧುಸ್ವಾಮಿ, ಶಾಸಕ ರಾಜುಗೌಡ, ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಮುಖಂಡರಾದ ನೇಮರಾಜ ನಾಯ್ಕ, ಸುರೇಶಬಾಬು ಮದುವೆಯಲ್ಲಿ ಭಾಗವಹಿಸಿದ್ದರು.ಆನಂದ್ ಸಿಂಗ್ಗೆ ಟಿಕೆಟ್ ಕೊಟ್ಟಿರುವುದಕ್ಕೆ ಮುನಿಸಿಕೊಂಡಿರುವ ಬಿಜೆಪಿ ಮುಖಂಡ ಎಚ್.ಆರ್.ಗವಿಯಪ್ಪ ಆ ಕಡೆ ಸುಳಿಯಲಿಲ್ಲ.