ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ| ಭ್ರಷ್ಟಾಚಾರ ವಿರುದ್ಧ ಬಂದ್‌; ಬೆಂಬಲಕ್ಕೆ ಮನವಿ

Last Updated 7 ಮಾರ್ಚ್ 2023, 10:18 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಮಾ. 9ರಂದು ಕರೆ ಕೊಟ್ಟಿರುವ ರಾಜ್ಯ ಬಂದ್‌ಗೆ ಎಲ್ಲರೂ ಬೆಂಬಲ ಕೊಡಬೇಕೆಂದು ಕಾಂಗ್ರೆಸ್‌ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮಹಮ್ಮದ್‌ ಇಮಾಮ್‌ ನಿಯಾಜಿ ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಮಗ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಇದು 40 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಪೇ ಸಿಎಂ ಸರ್ಕಾರ ಎಂಬ ಕಾಂಗ್ರೆಸ್‌ ಆರೋಪಗಳಿಗೆ ಪುಷ್ಟಿ ನೀಡಿದೆ. ಪಿಎಸ್‌ಐ, ಪ್ರಾಧ್ಯಾಪಕರು, ಬಿಡಿಸಿಸಿ ನೇಮಕಾತಿಯಲ್ಲಿ ಹಗರಣಗಳು ಆಗಿವೆ. ಎಲ್ಲರದಲ್ಲೂ ಭ್ರಷ್ಟಾಚಾರ ಮಿತಿ ಮೀರಿದೆ. ಮುಖ್ಯಮಂತ್ರಿಯವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಭ್ರಷ್ಟ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಬಂದ್‌ಗೆ ಕರೆ ಕೊಟ್ಟಿದೆ. ಎಲ್ಲ ವರ್ತಕರು ಬಂದ್‌ಗೆ ಬೆಂಬಲ ಸೂಚಿಸಿ, ರಾಜ್ಯದಿಂದ ಭ್ರಷ್ಟಾಚಾರ ತೊಲಗಿಸಲು ಸಹಕರಿಸಬೇಕೆಂದು ಕೋರಿದರು. ಮುಖಂಡರಾದ ಬಿ. ಮಾರೆಣ್ಣ, ವೀರಭದ್ರ ನಾಯ್ಕ, ಖಾಜಾ ಹುಸೇನಿ, ಗುಜ್ಜಲ್‌ ನಾಗರಾಜ್, ಸತ್ಯನಾರಾಯಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT