<p><strong>ಬಳ್ಳಾರಿ</strong>: ‘ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಇರುವ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತುತ್ತೇನೆ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸಲು ಶ್ರಮಿಸುತ್ತೇನೆ’ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಹೇಳಿದರು. </p>.<p>ಚುನಾವಣೆಗೆ ಸಂಬಂಧಿಸಿದ ಕಾರ್ಯಚಟುವಟಿಕೆಗಳಿಗಾಗಿ ಮಂಗಳವಾರ ಪಕ್ಷದ ಜಿಲ್ಲಾ ಘಟಕದ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುವುದು. ಹಾಗಾಗಿ ನನ್ನ ಗುರುತಿಗೆ ಒಂದು ಗೆರೆ ಎಳೆಯುವುದರ ಮೂಲಕ ನನ್ನನ್ನು ಶಾಸನಸಭೆಗೆ ಕಳುಹಿಸಿ ಕೊಡಬೇಕು‘ ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಜಿಲ್ಲಾ ಅಧ್ಯಕ್ಷ ಅನೀಲ್ ಕುಮಾರ್ ಮೋಕ, ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಮಹಿಪಾಲ್, ಮಹೇಶ್ವರ ಸ್ವಾಮಿ, ಮುರಹರ ಗೌಡ, ಗುರುಲಿಂಗನ ಗೌಡ ಸೇರಿದಂತೆ ಹಲವರು ಇದ್ದರು. </p>.<p>ಕಾಲೇಜುಗಳಲ್ಲಿ ಮತಯಾಚನೆ: ಅಮರನಾಥ ಪಾಟೀಲ ಅವರು ನಗರದ ರಾವ್ ಬಹದ್ದೂರ್ ಇಂಜಿನಿಯರಿಂಗ್ ಕಾಲೇಜು ಮತ್ತು ಬಿಐಟಿಎಂಗಳಲ್ಲಿ ಮಂಗಳವಾರ ಮತಯಾಚಿಸಿದರು. ಅವರೊಂದಿಗೆ ಜಿಲ್ಲೆಯ ಹಲವು ಮುಖಂಡರು ಭಾಗಿಯಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಇರುವ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತುತ್ತೇನೆ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸಲು ಶ್ರಮಿಸುತ್ತೇನೆ’ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಹೇಳಿದರು. </p>.<p>ಚುನಾವಣೆಗೆ ಸಂಬಂಧಿಸಿದ ಕಾರ್ಯಚಟುವಟಿಕೆಗಳಿಗಾಗಿ ಮಂಗಳವಾರ ಪಕ್ಷದ ಜಿಲ್ಲಾ ಘಟಕದ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುವುದು. ಹಾಗಾಗಿ ನನ್ನ ಗುರುತಿಗೆ ಒಂದು ಗೆರೆ ಎಳೆಯುವುದರ ಮೂಲಕ ನನ್ನನ್ನು ಶಾಸನಸಭೆಗೆ ಕಳುಹಿಸಿ ಕೊಡಬೇಕು‘ ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಜಿಲ್ಲಾ ಅಧ್ಯಕ್ಷ ಅನೀಲ್ ಕುಮಾರ್ ಮೋಕ, ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಮಹಿಪಾಲ್, ಮಹೇಶ್ವರ ಸ್ವಾಮಿ, ಮುರಹರ ಗೌಡ, ಗುರುಲಿಂಗನ ಗೌಡ ಸೇರಿದಂತೆ ಹಲವರು ಇದ್ದರು. </p>.<p>ಕಾಲೇಜುಗಳಲ್ಲಿ ಮತಯಾಚನೆ: ಅಮರನಾಥ ಪಾಟೀಲ ಅವರು ನಗರದ ರಾವ್ ಬಹದ್ದೂರ್ ಇಂಜಿನಿಯರಿಂಗ್ ಕಾಲೇಜು ಮತ್ತು ಬಿಐಟಿಎಂಗಳಲ್ಲಿ ಮಂಗಳವಾರ ಮತಯಾಚಿಸಿದರು. ಅವರೊಂದಿಗೆ ಜಿಲ್ಲೆಯ ಹಲವು ಮುಖಂಡರು ಭಾಗಿಯಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>