<p><strong>ಸಿರುಗುಪ್ಪ</strong>: ‘ಗ್ರಾಮೀಣ ಭಾಗದ ರೈತರ ಆರ್ಥಿಕತೆಯನ್ನು ಸಹಕಾರ ಸಂಸ್ಥೆಗಳು ಬಲಪಡಿಸಿ ಸಾವಿರಾರು ರೈತ ಕುಟುಂಬಗಳ ಸ್ವಾವಲಂಬನೆ ಬದುಕಿಗೆ ಪೂರಕವಾಗಿವೆ’ ಎಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.</p>.<p>ನಗರದ ಬಿಡಿಸಿಸಿ ಬ್ಯಾಂಕಿನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಸಹಕಾರ ಇಲಾಖೆ ಹಾಗೂ ಬಿ.ಎಂ.ಸುಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಮಂಗಳವಾರ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದರು.</p>.<p>ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಚೊಕ್ಕಬಸವನಗೌಡ ಮಾತನಾಡಿ, ‘ದೇಶದ ಅಭಿವೃದ್ದಿಯಲ್ಲಿ ರೈತರ ಹಾಗೂ ಸಹಕಾರ ಸಂಘಗಳ ಪಾತ್ರ ಮುಖ್ಯವಾಗಿದೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಸದುದ್ದೇಶ ಸಹಕಾರಗಳ ಗುರಿಯಾಗಿದೆ’ ಎಂದರು.</p>.<p>ಮಾಜಿ ಶಾಸಕ ಟಿ.ಎಂ.ಚಂದ್ರಶೇಖರಯ್ಯ ಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಚಂದ್ರರೆಡ್ಡಿ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಚೊಕ್ಕ ಪಲಾಕ್ಷ ಗೌಡ, ಬಳ್ಳಾರಿ ಸಹಕಾರ ಸಂಘಗಳ ಉಪ ನಿಬಂಧಕ ಜೆ.ಎಂ.ವೀರಭದ್ರಯ್ಯ ಸ್ವಾಮಿ ಸೇರಿದಂತೆ ತಾಲ್ಲೂಕಿನ ಎಲ್ಲಾ ಸಹಕಾರ ಬ್ಯಾಂಕ್ಗಳ ನಿರ್ದೇಶಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ‘ಗ್ರಾಮೀಣ ಭಾಗದ ರೈತರ ಆರ್ಥಿಕತೆಯನ್ನು ಸಹಕಾರ ಸಂಸ್ಥೆಗಳು ಬಲಪಡಿಸಿ ಸಾವಿರಾರು ರೈತ ಕುಟುಂಬಗಳ ಸ್ವಾವಲಂಬನೆ ಬದುಕಿಗೆ ಪೂರಕವಾಗಿವೆ’ ಎಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.</p>.<p>ನಗರದ ಬಿಡಿಸಿಸಿ ಬ್ಯಾಂಕಿನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಸಹಕಾರ ಇಲಾಖೆ ಹಾಗೂ ಬಿ.ಎಂ.ಸುಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಮಂಗಳವಾರ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದರು.</p>.<p>ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಚೊಕ್ಕಬಸವನಗೌಡ ಮಾತನಾಡಿ, ‘ದೇಶದ ಅಭಿವೃದ್ದಿಯಲ್ಲಿ ರೈತರ ಹಾಗೂ ಸಹಕಾರ ಸಂಘಗಳ ಪಾತ್ರ ಮುಖ್ಯವಾಗಿದೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಸದುದ್ದೇಶ ಸಹಕಾರಗಳ ಗುರಿಯಾಗಿದೆ’ ಎಂದರು.</p>.<p>ಮಾಜಿ ಶಾಸಕ ಟಿ.ಎಂ.ಚಂದ್ರಶೇಖರಯ್ಯ ಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಚಂದ್ರರೆಡ್ಡಿ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಚೊಕ್ಕ ಪಲಾಕ್ಷ ಗೌಡ, ಬಳ್ಳಾರಿ ಸಹಕಾರ ಸಂಘಗಳ ಉಪ ನಿಬಂಧಕ ಜೆ.ಎಂ.ವೀರಭದ್ರಯ್ಯ ಸ್ವಾಮಿ ಸೇರಿದಂತೆ ತಾಲ್ಲೂಕಿನ ಎಲ್ಲಾ ಸಹಕಾರ ಬ್ಯಾಂಕ್ಗಳ ನಿರ್ದೇಶಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>