ಬಳ್ಳಾರಿ: ’ಕೊರೊನಾ ಸೋಂಕು ನಿಯಂತ್ರಿಸಲು ಹಂಪಿಯಲ್ಲಿ ಮಾರ್ಚ್ 15ರಿಂದ ಒಂದು ವಾರ ಪ್ರವಾಸಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಪ್ರವಾಸಿ ಸ್ಥಳಗಳಲ್ಲಿ ಟಿಕೆಟ್ ವಿತರಣೆ ಸಹ ಇರುವುದಿಲ್ಲ’ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.
‘ವಿದೇಶಿಗರಿಂದಲೇ ಸೋಂಕು ಹಬ್ಬುವ ಸಾಧ್ಯತೆ ಹೆಚ್ಚಿರುವುದರಿಂದ ಹಂಪಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಜಿಲ್ಲೆಗೆ ಬಂದಿರುವ ಫ್ರಾನ್ಸ್ ದೇಶದ 7 ಮಂದಿ, ಜರ್ಮನಿಯ 9 ಮಂದಿ ಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಲಾಗಿದೆ. ಅವರು ತಮ್ಮ ದೇಶಕ್ಕೆ ತೆರಳುವುದಾಗಿ ಮನವಿ ಮಾಡಿದ್ದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಅನುಮತಿ ನೀಡಿದ್ದಾರೆ’ ಎಂದರು.