<p><strong>ಬಳ್ಳಾರಿ: </strong>ಜೆಎಸ್ಡಬ್ಲ್ಯು ಟೌನ್ಶಿಪ್ ಮತ್ತು ಸುತ್ತಮುತ್ತಲ ಪ್ರದೇಶ ಸೇರಿದಂತೆ ಸಂಡೂರು ತಾಲ್ಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿರುವುದರಿಂದ ಜೆಎಸ್ಡಬ್ಲ್ಯು ಕಂಪನಿಗೆ ಹೊರ ರಾಜ್ಯಗಳಿಂದ ಬರುವ ಹೊರ ಗುತ್ತಿಗೆ ಕಾರ್ಮಿಕರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಸೋಮವಾರ ರಾತ್ರಿ ಆದೇಶ ಹೊರಡಿಸಿದೆ.</p>.<p>ಸಂಡೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ತಕ್ಷಣದಿಂದಲೇ ಜೆಎಸ್ಡಬ್ಲ್ಯು ಆಡಳಿತ ಹೊರ ಗುತ್ತಿಗೆ ಕಾರ್ಮಿಕರ ಪ್ರವೇಶ ನಿಷೇಧಿಸುವಂತೆ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಈ ಆದೇಶದಲ್ಲಿ ತಿಳಿಸಿದ್ದಾರೆ. ಸೋಂಕು ವ್ಯಾಪಕವಾಗಿ ಹರಡಲು ಹೊರ ರಾಜ್ಯಗಳ ಹೊರ ಗುತ್ತಿಗೆ ಕಾರ್ಮಿಕರೇ ಕಾರಣ ಎಂದೂ ಅವರು ಹೇಳಿದ್ದಾರೆ.</p>.<p>ಸದರಿ ಆದೇಶ ಉಲ್ಲಂಘಿಸಿದರೆ ಜೆಎಸ್ಡಬ್ಲ್ಯು ಸ್ಟೀಲ್ ಮ್ಯಾನೇಜ್ಮೆಂಟ್ ಮತ್ತು ಹೊರಗುತ್ತಿಗೆ ನೌಕರರನ್ನು ಕರೆತರುವ ಗುತ್ತಿಗೆದಾರರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತ ದಂಡ ಸಂಹಿತೆ ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.</p>.<p>ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಮಾಲಪಾಟಿ ಸ್ಪಷ್ಟಪಡಿಸಿದ್ದಾರೆ.ತೋರಣಗಲ್ಲು ಸುತ್ತಮುತ್ತ ಒಂದು ವಾರದಲ್ಲಿ ಸುಮಾರು 100 ಕೋವಿಡ್ ಸೋಂಕಿತ ಪ್ರಕರಣಗಳು ಕಂಡುಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಜೆಎಸ್ಡಬ್ಲ್ಯು ಟೌನ್ಶಿಪ್ ಮತ್ತು ಸುತ್ತಮುತ್ತಲ ಪ್ರದೇಶ ಸೇರಿದಂತೆ ಸಂಡೂರು ತಾಲ್ಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿರುವುದರಿಂದ ಜೆಎಸ್ಡಬ್ಲ್ಯು ಕಂಪನಿಗೆ ಹೊರ ರಾಜ್ಯಗಳಿಂದ ಬರುವ ಹೊರ ಗುತ್ತಿಗೆ ಕಾರ್ಮಿಕರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಸೋಮವಾರ ರಾತ್ರಿ ಆದೇಶ ಹೊರಡಿಸಿದೆ.</p>.<p>ಸಂಡೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ತಕ್ಷಣದಿಂದಲೇ ಜೆಎಸ್ಡಬ್ಲ್ಯು ಆಡಳಿತ ಹೊರ ಗುತ್ತಿಗೆ ಕಾರ್ಮಿಕರ ಪ್ರವೇಶ ನಿಷೇಧಿಸುವಂತೆ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಈ ಆದೇಶದಲ್ಲಿ ತಿಳಿಸಿದ್ದಾರೆ. ಸೋಂಕು ವ್ಯಾಪಕವಾಗಿ ಹರಡಲು ಹೊರ ರಾಜ್ಯಗಳ ಹೊರ ಗುತ್ತಿಗೆ ಕಾರ್ಮಿಕರೇ ಕಾರಣ ಎಂದೂ ಅವರು ಹೇಳಿದ್ದಾರೆ.</p>.<p>ಸದರಿ ಆದೇಶ ಉಲ್ಲಂಘಿಸಿದರೆ ಜೆಎಸ್ಡಬ್ಲ್ಯು ಸ್ಟೀಲ್ ಮ್ಯಾನೇಜ್ಮೆಂಟ್ ಮತ್ತು ಹೊರಗುತ್ತಿಗೆ ನೌಕರರನ್ನು ಕರೆತರುವ ಗುತ್ತಿಗೆದಾರರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತ ದಂಡ ಸಂಹಿತೆ ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.</p>.<p>ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಮಾಲಪಾಟಿ ಸ್ಪಷ್ಟಪಡಿಸಿದ್ದಾರೆ.ತೋರಣಗಲ್ಲು ಸುತ್ತಮುತ್ತ ಒಂದು ವಾರದಲ್ಲಿ ಸುಮಾರು 100 ಕೋವಿಡ್ ಸೋಂಕಿತ ಪ್ರಕರಣಗಳು ಕಂಡುಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>