<p><strong>ತೋರಣಗಲ್ಲು: </strong>ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯನ್ನು ವಿರೋಧಿಸಿ ನಾಡ ಕಾರ್ಯಾಲಯದ ಉಪ ತಹಶೀಲ್ದಾರ್ ಸುಬ್ಬರಾವ್ ದೇಸಾಯಿ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.</p>.<p>ಗ್ರಾಮ ಘಟಕದ ಸಿಪಿಎಂ ಕಾರ್ಯದರ್ಶಿ ಎ. ಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಕನ್ನಡ ಭಾಷೆ ಹಾಗೂ ಕನ್ನಡಿಗರ ಅಭಿವೃದ್ಧಿಗೆ ಮಾರಾಕವಾಗಿದೆ. ಈ ನೀತಿಯ ಜಾರಿಯಿಂದ ದಲಿತ, ಹಿಂದೂಳಿದ ವರ್ಗದ ಬಡ ಜನರು ಮೂಲಶಿಕ್ಷಣ ದಿಂದ ವಂಚಿತರಾಗುತ್ತಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆರ್ಥಿಕ ಲಾಭಕ್ಕಾಗಿ ಈ ನೀತಿ ಜಾರಿಗೆ ಬರುತ್ತಿರುವುದು ದುರಂತದ ವಿಚಾರ. ಶೀಘ್ರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಗ್ರಾಮದ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ದಲಿತ, ಹಿಂದುಳಿದ ವರ್ಗದ ಬಡ ಜನರ ವಿರೋಧಿ ನೀತಿಗಳನ್ನು ಜಾರಿಗೆ ತಂದಿರುವ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.</p>.<p>ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಅರ್ಜನ್, ಸೈಯದ್ ಶರೀಫ್, ಎಚ್. ಸ್ವಾಮಿ, ಎಸ್. ಕಾಲೂಬಾ, ಕೆ.ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋರಣಗಲ್ಲು: </strong>ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯನ್ನು ವಿರೋಧಿಸಿ ನಾಡ ಕಾರ್ಯಾಲಯದ ಉಪ ತಹಶೀಲ್ದಾರ್ ಸುಬ್ಬರಾವ್ ದೇಸಾಯಿ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.</p>.<p>ಗ್ರಾಮ ಘಟಕದ ಸಿಪಿಎಂ ಕಾರ್ಯದರ್ಶಿ ಎ. ಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಕನ್ನಡ ಭಾಷೆ ಹಾಗೂ ಕನ್ನಡಿಗರ ಅಭಿವೃದ್ಧಿಗೆ ಮಾರಾಕವಾಗಿದೆ. ಈ ನೀತಿಯ ಜಾರಿಯಿಂದ ದಲಿತ, ಹಿಂದೂಳಿದ ವರ್ಗದ ಬಡ ಜನರು ಮೂಲಶಿಕ್ಷಣ ದಿಂದ ವಂಚಿತರಾಗುತ್ತಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆರ್ಥಿಕ ಲಾಭಕ್ಕಾಗಿ ಈ ನೀತಿ ಜಾರಿಗೆ ಬರುತ್ತಿರುವುದು ದುರಂತದ ವಿಚಾರ. ಶೀಘ್ರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಗ್ರಾಮದ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ದಲಿತ, ಹಿಂದುಳಿದ ವರ್ಗದ ಬಡ ಜನರ ವಿರೋಧಿ ನೀತಿಗಳನ್ನು ಜಾರಿಗೆ ತಂದಿರುವ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.</p>.<p>ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಅರ್ಜನ್, ಸೈಯದ್ ಶರೀಫ್, ಎಚ್. ಸ್ವಾಮಿ, ಎಸ್. ಕಾಲೂಬಾ, ಕೆ.ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>