<p><strong>ಕುಡತಿನಿ (ಸಂಡೂರು):</strong> ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಯಾಗಲು ಸಾಧ್ಯ’ ಎಂದು ಹರಗಿನಡೋಣಿ ಬಸವನಗೌಡ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಲ್ಲೇದ ಪ್ರಭು ಹೇಳಿದರು</p>.<p>ಪಟ್ಟಣದ ಹರಗಿನಡೋಣಿ ಬಸವನಗೌಡ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆದ ದಾನಿಗಳ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಸಮಾಜದಲ್ಲಿ ದಾನಿಗಳ ಸಹಕಾರದಿಂದ ಅನುದಾನ ರಹಿತ ಶಾಲೆಗಳ ಸಂಪೂರ್ಣ ಅಭಿವೃದ್ಧಿಗೆ ಸಹಕಾರಿಯಾಗಿದೆ. ಸಮಾಜದಲ್ಲಿನ ಬಡ ಮಕ್ಕಳ ಶೈಕ್ಷಣಿಕ ಕಲಿಕೆಗೆ ದಾನಿಗಳ ಸೇವೆಯು ಅನನ್ಯವಾಗಿದ್ದು ಸಮಾಜದಲ್ಲಿನ ಇತರರಿಗೂ ಮಾದರಿಯಾಗಿದೆ’ ಎಂದರು.</p>.<p>ಶಾಲೆಗೆ ಭೂದಾನ ಮಾಡಿದ ದಾನಿಗಳ ಕುಟುಂಬದವರಾದ ಎಚ್.ಮಲ್ಲಿಕಾರ್ಜುನ ಗೌಡ ಅವರನ್ನು ಶಾಲಾ ಆಡಳಿತ ಮಂಡಳಿಯವತಿಯಿಂದ ಸನ್ಮಾನಿಸಲಾಯಿತು.</p>.<p>ಕಾಲೇಜು ಪ್ರಾಚಾರ್ಯ ಸಿ.ಮಲ್ಲಿಕಾರ್ಜುನ, ಮುಖ್ಯ ಶಿಕ್ಷಕ ಎಸ್.ಎಂ.ಸಿದ್ದೇಶ್ವರ ಸ್ವಾಮಿ, ಆಡಳಿತ ಮಂಡಳಿಯ ಸದಸ್ಯರಾದ ಸುರೇಶಯ್ಯ ಪಡೆವಪ್ಪ, ಸಣ್ಣಜಂಬಣ್ಣ, ಜಿ ವೀರನಗೌಡ ಶಿಕ್ಷಕರು ಮಕ್ಕಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಡತಿನಿ (ಸಂಡೂರು):</strong> ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಯಾಗಲು ಸಾಧ್ಯ’ ಎಂದು ಹರಗಿನಡೋಣಿ ಬಸವನಗೌಡ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಲ್ಲೇದ ಪ್ರಭು ಹೇಳಿದರು</p>.<p>ಪಟ್ಟಣದ ಹರಗಿನಡೋಣಿ ಬಸವನಗೌಡ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆದ ದಾನಿಗಳ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಸಮಾಜದಲ್ಲಿ ದಾನಿಗಳ ಸಹಕಾರದಿಂದ ಅನುದಾನ ರಹಿತ ಶಾಲೆಗಳ ಸಂಪೂರ್ಣ ಅಭಿವೃದ್ಧಿಗೆ ಸಹಕಾರಿಯಾಗಿದೆ. ಸಮಾಜದಲ್ಲಿನ ಬಡ ಮಕ್ಕಳ ಶೈಕ್ಷಣಿಕ ಕಲಿಕೆಗೆ ದಾನಿಗಳ ಸೇವೆಯು ಅನನ್ಯವಾಗಿದ್ದು ಸಮಾಜದಲ್ಲಿನ ಇತರರಿಗೂ ಮಾದರಿಯಾಗಿದೆ’ ಎಂದರು.</p>.<p>ಶಾಲೆಗೆ ಭೂದಾನ ಮಾಡಿದ ದಾನಿಗಳ ಕುಟುಂಬದವರಾದ ಎಚ್.ಮಲ್ಲಿಕಾರ್ಜುನ ಗೌಡ ಅವರನ್ನು ಶಾಲಾ ಆಡಳಿತ ಮಂಡಳಿಯವತಿಯಿಂದ ಸನ್ಮಾನಿಸಲಾಯಿತು.</p>.<p>ಕಾಲೇಜು ಪ್ರಾಚಾರ್ಯ ಸಿ.ಮಲ್ಲಿಕಾರ್ಜುನ, ಮುಖ್ಯ ಶಿಕ್ಷಕ ಎಸ್.ಎಂ.ಸಿದ್ದೇಶ್ವರ ಸ್ವಾಮಿ, ಆಡಳಿತ ಮಂಡಳಿಯ ಸದಸ್ಯರಾದ ಸುರೇಶಯ್ಯ ಪಡೆವಪ್ಪ, ಸಣ್ಣಜಂಬಣ್ಣ, ಜಿ ವೀರನಗೌಡ ಶಿಕ್ಷಕರು ಮಕ್ಕಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>