<p><strong>ಹರಪನಹಳ್ಳಿ:</strong> ‘ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಇತರೆ ಯಾವುದೇ ಅಹಿತಕರ ಘಟನೆಗಳು ನಡೆದಾಗ ತಕ್ಷಣ 112 ನಂಬರಿಗೆ ಕರೆ ಮಾಡಿ’ ಎಂದು ಪಿಎಸ್ಐ ವಿಜಯಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಅರಸೀಕೆರೆ ಹೋಬಳಿ ತೌಡೂರು ಗ್ರಾಮದ ಎ.ಎಂ.ಕೆ.ವಿ.ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>112ಗೆ ಮಾಹಿತಿ ಕೊಟ್ಟವರ ಹೆಸರು ಬಹಿರಂಗ ಪಡಿಸುವುದಿಲ್ಲ. ವಿದ್ಯಾರ್ಥಿಗಳು ಸೈಬರ್ ಅಪರಾಧ, ಬಾಲ್ಯ ವಿವಾಹ, ರಸ್ತೆ ಅಪಘಾತ, ಪೋಕ್ಸೊ ಕಾಯ್ದೆಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು. ಇದನ್ನು ತಮ್ಮ ಪೋಷಕರಿಗೂ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.</p>.<p>ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಜಿ.ಮನೋಹರ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು, ಪುಸ್ತಕ ಪ್ರೀತಿಸುವುದನ್ನು ಕಲಿಯಿರಿ ಎಂದರು.</p>.<p>ಮುಖ್ಯಶಿಕ್ಷಕಿ ಸೈಯದ್ ಮುಬಿನಾ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ ಎಂದು ಹೇಳಿದರು.</p>.<p>ಪ್ರಾಚಾರ್ಯ ಪಿ.ದುರ್ಗೇಶ್ ಮಾತನಾಡಿ, ‘ತಪ್ಪು ಮಾಡಿದವರಿಗೆ ಶಿಕ್ಷೆ ತಪ್ಪಿದ್ದಲ್ಲ, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಿ. ಮೊಬೈಲ್ ದುರ್ಬಳಕೆ ಮಾಡಿಕೊಳ್ಳದಿರಿ’ ಎಂದರು.</p>.<p>ಶಿಕ್ಷಕರಾದ ಬಸವರಾಜ್, ಬಾಬು ರಾಜೇಂದ್ರ, ಶ್ರೀಕಾಂತ್, ಸಿದ್ದೇಶ್, ಕೂಳಹಳ್ಳಿ ಕೊಟ್ರೇಶ್, ಉಪನ್ಯಾಸಕರಾದ ಚಂದ್ರಪ್ಪ, ನಾಗರಾಜ್, ವಿನಾಯಕ್, ಪ್ರಭಾಕರ್ , ಈಶಪ್ಪ, ಎ.ಎಚ್.ವಸಂತ್, ಹರೀಶ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಪರುಶುರಾಮ್, ಈಡಿಗರ ಅಜ್ಜಯ್ಯ ಹಾಗೂ ಶಾಲಾ ವಿದ್ಯಾರ್ಥಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ‘ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಇತರೆ ಯಾವುದೇ ಅಹಿತಕರ ಘಟನೆಗಳು ನಡೆದಾಗ ತಕ್ಷಣ 112 ನಂಬರಿಗೆ ಕರೆ ಮಾಡಿ’ ಎಂದು ಪಿಎಸ್ಐ ವಿಜಯಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಅರಸೀಕೆರೆ ಹೋಬಳಿ ತೌಡೂರು ಗ್ರಾಮದ ಎ.ಎಂ.ಕೆ.ವಿ.ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>112ಗೆ ಮಾಹಿತಿ ಕೊಟ್ಟವರ ಹೆಸರು ಬಹಿರಂಗ ಪಡಿಸುವುದಿಲ್ಲ. ವಿದ್ಯಾರ್ಥಿಗಳು ಸೈಬರ್ ಅಪರಾಧ, ಬಾಲ್ಯ ವಿವಾಹ, ರಸ್ತೆ ಅಪಘಾತ, ಪೋಕ್ಸೊ ಕಾಯ್ದೆಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು. ಇದನ್ನು ತಮ್ಮ ಪೋಷಕರಿಗೂ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.</p>.<p>ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಜಿ.ಮನೋಹರ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು, ಪುಸ್ತಕ ಪ್ರೀತಿಸುವುದನ್ನು ಕಲಿಯಿರಿ ಎಂದರು.</p>.<p>ಮುಖ್ಯಶಿಕ್ಷಕಿ ಸೈಯದ್ ಮುಬಿನಾ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ ಎಂದು ಹೇಳಿದರು.</p>.<p>ಪ್ರಾಚಾರ್ಯ ಪಿ.ದುರ್ಗೇಶ್ ಮಾತನಾಡಿ, ‘ತಪ್ಪು ಮಾಡಿದವರಿಗೆ ಶಿಕ್ಷೆ ತಪ್ಪಿದ್ದಲ್ಲ, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಿ. ಮೊಬೈಲ್ ದುರ್ಬಳಕೆ ಮಾಡಿಕೊಳ್ಳದಿರಿ’ ಎಂದರು.</p>.<p>ಶಿಕ್ಷಕರಾದ ಬಸವರಾಜ್, ಬಾಬು ರಾಜೇಂದ್ರ, ಶ್ರೀಕಾಂತ್, ಸಿದ್ದೇಶ್, ಕೂಳಹಳ್ಳಿ ಕೊಟ್ರೇಶ್, ಉಪನ್ಯಾಸಕರಾದ ಚಂದ್ರಪ್ಪ, ನಾಗರಾಜ್, ವಿನಾಯಕ್, ಪ್ರಭಾಕರ್ , ಈಶಪ್ಪ, ಎ.ಎಚ್.ವಸಂತ್, ಹರೀಶ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಪರುಶುರಾಮ್, ಈಡಿಗರ ಅಜ್ಜಯ್ಯ ಹಾಗೂ ಶಾಲಾ ವಿದ್ಯಾರ್ಥಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>