<p><strong>ಬಳ್ಳಾರಿ</strong>: ಕೃಷಿ ಇಲಾಖೆಯಿಂದ 2024-25ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬಳ್ಳಾರಿ ಜಿಲ್ಲೆಯ 5,401 ರೈತರ ಖಾತೆಗಳಿಗೆ ಒಟ್ಟು ₹9.12 ಕೋಟಿ ಮೊತ್ತದ ಬೆಳೆ ವಿಮೆ ಪಾವತಿಯಾಗಿದೆ.</p>.<p>ಪ್ರಸ್ತಕ ಸಾಲಿನಲ್ಲಿಯೂ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಮನವಿ ಮಾಡಿದ್ದಾರೆ. </p>.<p>ತಾಲ್ಲೂಕುವಾರು ಮಾಹಿತಿ: ಬಳ್ಳಾರಿ ತಾಲ್ಲೂಕಿನ 1,077 ರೈತರಿಗೆ ₹2.52 ಕೋಟಿ, ಕುರುಗೋಡು ತಾಲ್ಲೂಕಿನ 404 ರೈತರಿಗೆ ₹62 ಲಕ್ಷ, ಕಂಪ್ಲಿ ತಾಲ್ಲೂಕಿನ 1,854 ರೈತರಿಗೆ ₹3.58 ಕೋಟಿ, ಸಂಡೂರಿನ 689 ರೈತರಿಗೆ ₹16 ಲಕ್ಷ, ಸಿರುಗುಪ್ಪ ತಾಲೂಕಿನ 1,377 ರೈತರಿಗೆ ₹2.24 ಕೋಟಿ ಪಾವತಿಯಾಗಿದೆ. </p>.<p>ಹೊಸ ಬೆಳೆವಿಮೆಗೆ ಕೊನೆ ದಿನ: ಸೂರ್ಯಕಾಂತಿ, ತೊಗರಿ, ಹತ್ತಿ, ಈರುಳ್ಳಿ, ಕೆಂಪು ಮೆಣಿಸಿನಕಾಯಿ, ಜೋಳ ಹಾಗೂ ಮೆಕ್ಕೆಜೋಳ ಬೆಳೆಗಳಿಗೆ ಜುಲೈ 31 ಹಾಗೂ ಇನ್ನಿತರೆ ಬೆಳೆಗಳಾದ ನವಣೆ, ಶೇಂಗಾ, ಭತ್ತ, ರಾಗಿ, ಹುರಳಿ ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ.</p>.<p>ಜಿಲ್ಲೆಯ ಎಲ್ಲಾ ರೈತರು ಬೆಳೆ ವಿಮೆ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ ಹಾಗೂ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು.</p>.<p>ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಕೃಷಿ ಇಲಾಖೆಯಿಂದ 2024-25ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬಳ್ಳಾರಿ ಜಿಲ್ಲೆಯ 5,401 ರೈತರ ಖಾತೆಗಳಿಗೆ ಒಟ್ಟು ₹9.12 ಕೋಟಿ ಮೊತ್ತದ ಬೆಳೆ ವಿಮೆ ಪಾವತಿಯಾಗಿದೆ.</p>.<p>ಪ್ರಸ್ತಕ ಸಾಲಿನಲ್ಲಿಯೂ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಮನವಿ ಮಾಡಿದ್ದಾರೆ. </p>.<p>ತಾಲ್ಲೂಕುವಾರು ಮಾಹಿತಿ: ಬಳ್ಳಾರಿ ತಾಲ್ಲೂಕಿನ 1,077 ರೈತರಿಗೆ ₹2.52 ಕೋಟಿ, ಕುರುಗೋಡು ತಾಲ್ಲೂಕಿನ 404 ರೈತರಿಗೆ ₹62 ಲಕ್ಷ, ಕಂಪ್ಲಿ ತಾಲ್ಲೂಕಿನ 1,854 ರೈತರಿಗೆ ₹3.58 ಕೋಟಿ, ಸಂಡೂರಿನ 689 ರೈತರಿಗೆ ₹16 ಲಕ್ಷ, ಸಿರುಗುಪ್ಪ ತಾಲೂಕಿನ 1,377 ರೈತರಿಗೆ ₹2.24 ಕೋಟಿ ಪಾವತಿಯಾಗಿದೆ. </p>.<p>ಹೊಸ ಬೆಳೆವಿಮೆಗೆ ಕೊನೆ ದಿನ: ಸೂರ್ಯಕಾಂತಿ, ತೊಗರಿ, ಹತ್ತಿ, ಈರುಳ್ಳಿ, ಕೆಂಪು ಮೆಣಿಸಿನಕಾಯಿ, ಜೋಳ ಹಾಗೂ ಮೆಕ್ಕೆಜೋಳ ಬೆಳೆಗಳಿಗೆ ಜುಲೈ 31 ಹಾಗೂ ಇನ್ನಿತರೆ ಬೆಳೆಗಳಾದ ನವಣೆ, ಶೇಂಗಾ, ಭತ್ತ, ರಾಗಿ, ಹುರಳಿ ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ.</p>.<p>ಜಿಲ್ಲೆಯ ಎಲ್ಲಾ ರೈತರು ಬೆಳೆ ವಿಮೆ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ ಹಾಗೂ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು.</p>.<p>ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>