ಕೇಂದ್ರ, ರಾಜ್ಯ ಸರ್ಕಾರದ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮಾರ್ಗಸೂಚಿ ಅನುಸಾರ ಎಫ್ಐಡಿ ಹೊಂದಿರುವ ಅರ್ಹ ರೈತರಿಗೆ ಹೆಚ್ಚುವರಿ ಪರಿಹಾರವನ್ನು ಮುಂದಿನ ದಿನಗಳಲ್ಲಿ ಪಾವತಿಸಲಾಗುತ್ತದೆ. ಪರಿಹಾರ ತಂತ್ರಾಂಶದ ಮೂಲಕ ಮೊದಲ ಕಂತಿನ ಬೆಳೆ ಪರಿಹಾರ ವಿತರಿಸುವ ಕಾರ್ಯ ಪ್ರಗತಿಯಲ್ಲಿದ್ದು, ರೈತರು ಹೆಚ್ಚಿನ ಮಾಹಿತಿಗೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಬೇಕು ಎಂದು ತಹಶೀಲ್ದಾರ್ ವಿ. ಕಾರ್ತಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.