<p><strong>ಬಳ್ಳಾರಿ:</strong> 'ವೀರಶೈವ ವಿದ್ಯಾವರ್ಧಕ ಸಂಘದ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕಾಗಿ ಫೆ.4, 5, 6 ರಂದು ಮೂರು ದಿನಗಳ ಕಾಲ ಸಾಂಸ್ಕೃತಿಕ ಉತ್ಸವ -2020 ಹಮ್ಮಿಕೊಳ್ಳಲಾಗಿದೆ' ಎಂದು ಸಂಘದ ಅಧ್ಯಕ್ಷ ಉಡೇದ ಬಸವರಾಜ ಮತ್ತು ಕಾರ್ಯದರ್ಶಿ ಚೋರನೂರು ಟಿ.ಕೊಟ್ರಪ್ಪ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಫೆ. 4ರಂದು ಬೆಳಿಗ್ಗೆ 9ಕ್ಕೆ ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಿಂದ ನಡೆಯಲಿರುವ ಮೆರವಣಿಗೆಯಲ್ಲಿ ಕಲಾ ತಂಡಗಳೊಂದಿಗೆ ವಿದ್ಯಾರ್ಥಿಗಳು ಸೇರಿ 3 ಸಾವಿರ ಮಂದಿ ಭಾಗವಹಿಸುವರು. ನಗರ ಉಪವಿಭಾಗದ ಡಿವೈಎಸ್ಪಿ ಕೆ.ರಾಮರಾವ್ ಚಾಲನೆ ನೀಡುವರು’ ಎಂದು ತಿಳಿಸಿದರು.</p>.<p>‘ಉತ್ಸವಕ್ಕೆ ಫೆ. 5ರಂದು ಸಂಜೆ 6ಕ್ಕೆ ಇಲ್ಲಿನ ಶೆಟ್ರಗುರುಶಾಂತಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಉದ್ಘಾಟಿಸಲಿದ್ದು, ಎಮ್ಮಿಗನೂರು ಹಂಪಿಸಾವಿರ ದೇವರ ಮಠದ ವಾಮದೇವ ಶಿವಾಚಾರ್ಯ ಸ್ವಾಮಿ ಸಾನಿಧ್ಯ ವಹಿಸುವರು’ ಎಂದರು.</p>.<p>‘6ರಂದು ಸಂಜೆ 6ಕ್ಕೆ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದು ಪಿ.ಅಲಗೂರು ಸಮಾರೋಪ ಭಾಷಣ ಮಾಡುವರು. ಉತ್ಸವದ ಅಂಗವಾಗಿ ಕರಕುಶ ಕಲಾ ಸ್ಪರ್ಧೆ, ಸ್ವರಚಿತ ಕವನವಾಚನ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಎರಡು ದಿನಗಳ ಕಾಲ 40 ಕಲಾ ತಂಡಗಳ 300 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ’ ಎಂದರು.</p>.<p>ಸಂಘದ ಉಪಾಧ್ಯಕ್ಷ ವೀರಭದ್ರಶರ್ಮ, ಕೋಳೂರು ಮಲ್ಲಿಕಾರ್ಜುನಗೌಡ, ರಾಮುಗೌಡ, ವೀರುಪಾಕ್ಷ, ಶರಣನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> 'ವೀರಶೈವ ವಿದ್ಯಾವರ್ಧಕ ಸಂಘದ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕಾಗಿ ಫೆ.4, 5, 6 ರಂದು ಮೂರು ದಿನಗಳ ಕಾಲ ಸಾಂಸ್ಕೃತಿಕ ಉತ್ಸವ -2020 ಹಮ್ಮಿಕೊಳ್ಳಲಾಗಿದೆ' ಎಂದು ಸಂಘದ ಅಧ್ಯಕ್ಷ ಉಡೇದ ಬಸವರಾಜ ಮತ್ತು ಕಾರ್ಯದರ್ಶಿ ಚೋರನೂರು ಟಿ.ಕೊಟ್ರಪ್ಪ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಫೆ. 4ರಂದು ಬೆಳಿಗ್ಗೆ 9ಕ್ಕೆ ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಿಂದ ನಡೆಯಲಿರುವ ಮೆರವಣಿಗೆಯಲ್ಲಿ ಕಲಾ ತಂಡಗಳೊಂದಿಗೆ ವಿದ್ಯಾರ್ಥಿಗಳು ಸೇರಿ 3 ಸಾವಿರ ಮಂದಿ ಭಾಗವಹಿಸುವರು. ನಗರ ಉಪವಿಭಾಗದ ಡಿವೈಎಸ್ಪಿ ಕೆ.ರಾಮರಾವ್ ಚಾಲನೆ ನೀಡುವರು’ ಎಂದು ತಿಳಿಸಿದರು.</p>.<p>‘ಉತ್ಸವಕ್ಕೆ ಫೆ. 5ರಂದು ಸಂಜೆ 6ಕ್ಕೆ ಇಲ್ಲಿನ ಶೆಟ್ರಗುರುಶಾಂತಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಉದ್ಘಾಟಿಸಲಿದ್ದು, ಎಮ್ಮಿಗನೂರು ಹಂಪಿಸಾವಿರ ದೇವರ ಮಠದ ವಾಮದೇವ ಶಿವಾಚಾರ್ಯ ಸ್ವಾಮಿ ಸಾನಿಧ್ಯ ವಹಿಸುವರು’ ಎಂದರು.</p>.<p>‘6ರಂದು ಸಂಜೆ 6ಕ್ಕೆ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದು ಪಿ.ಅಲಗೂರು ಸಮಾರೋಪ ಭಾಷಣ ಮಾಡುವರು. ಉತ್ಸವದ ಅಂಗವಾಗಿ ಕರಕುಶ ಕಲಾ ಸ್ಪರ್ಧೆ, ಸ್ವರಚಿತ ಕವನವಾಚನ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಎರಡು ದಿನಗಳ ಕಾಲ 40 ಕಲಾ ತಂಡಗಳ 300 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ’ ಎಂದರು.</p>.<p>ಸಂಘದ ಉಪಾಧ್ಯಕ್ಷ ವೀರಭದ್ರಶರ್ಮ, ಕೋಳೂರು ಮಲ್ಲಿಕಾರ್ಜುನಗೌಡ, ರಾಮುಗೌಡ, ವೀರುಪಾಕ್ಷ, ಶರಣನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>