<p><strong>ಕುರುಗೋಡು</strong>: ವಿಶ್ವಗುರು ಬಸವಣ್ಣನವರು ತಮ್ಮ ವಚನಗಳ ಮೂಲಕ 12ನೇ ಶತಮಾನದಲ್ಲಿಯೇ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ಅಖಿಲ ಭಾತರ ಶರಣ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಸಿ.ಸೋಮಶೇಖರ್ ಹೇಳಿದರು.</p>.<p>ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಅನ್ನಪೂರ್ಣ ಪ್ರಕಾಶನ ಸಂಸ್ಥೆ ಈಚೆಗೆ ಆಯೋಜಿಸಿದ್ದ ಅನುಭವ ಮಂಟಪ ಒಂದು ಚಿಂತನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವರ್ಣಬೇಧ ಪದ್ಧತಿ ಆಚರಣೆಯಲ್ಲಿದ್ದ ಕಾಲಘಟ್ಟದಲ್ಲಿ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ ಸರ್ಮರ್ಧಮಿಯರಿಗೂ ವಿಷಯ ಹಂಚಿಕೊಳ್ಳಲು ಅವಕಾಶ ನೀಡಿದ್ದರು. ಲಿಂಗತಾರತಮ್ಯವಿಲ್ಲದೆ ಮಹಿಳೆಯರೂ ಭಾಗವಹಿಸಿದ್ದು ಸಮಾನತೆಗೆ ಮತ್ತೊಂದು ನಿರ್ದಶನ ಎಂದರು.</p>.<p>ಅಸ್ಪೃಶ್ಯತೆ ಹೋಗಲಾಡಿಸಿ ಸಮಸಮಾಜ ನಿರ್ಮಾಣ ಮಾಡಿದ ಬಸವಣ್ಣನವರ ಚಿಂತನೆಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ಅನ್ನಪೂರ್ಣ ಪ್ರಕಾಶನದ ಸಿರಿಗೇರಿ ಯರಿಸ್ವಾಮಿ ಕಾರ್ಯಕ್ರಮ ಕುರಿತು ಪ್ರಸ್ತಾವಿಕ ಮಾತನಾಡಿದರು. ಕಗ್ಗಲ್ಲು ಗ್ರಾಮದ ದೊಡ್ಡಬಸವ ಗವಾಯಿ ಮತ್ತು ತಂಡದಿಂದ ಬಸವಣ್ಣನವರ ವಚನಗಳನ್ನು ಸುಶ್ರಾವ್ಯವಾಗಿ ಹಾಡಿ ಜನಮನ ರಂಜಿಸಿದರು.</p>.<p>ಶಂಭುಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಹೂಗಾರ ಬಸವರಾಜ್, ಮುಖ್ಯಶಿಕ್ಷಕ ಎನ್.ಪಂಪಾಪತಿ ಮತ್ತು ಎಚ್.ಎಂ.ಶಶಿಧರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ವಿಶ್ವಗುರು ಬಸವಣ್ಣನವರು ತಮ್ಮ ವಚನಗಳ ಮೂಲಕ 12ನೇ ಶತಮಾನದಲ್ಲಿಯೇ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ಅಖಿಲ ಭಾತರ ಶರಣ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಸಿ.ಸೋಮಶೇಖರ್ ಹೇಳಿದರು.</p>.<p>ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಅನ್ನಪೂರ್ಣ ಪ್ರಕಾಶನ ಸಂಸ್ಥೆ ಈಚೆಗೆ ಆಯೋಜಿಸಿದ್ದ ಅನುಭವ ಮಂಟಪ ಒಂದು ಚಿಂತನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವರ್ಣಬೇಧ ಪದ್ಧತಿ ಆಚರಣೆಯಲ್ಲಿದ್ದ ಕಾಲಘಟ್ಟದಲ್ಲಿ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ ಸರ್ಮರ್ಧಮಿಯರಿಗೂ ವಿಷಯ ಹಂಚಿಕೊಳ್ಳಲು ಅವಕಾಶ ನೀಡಿದ್ದರು. ಲಿಂಗತಾರತಮ್ಯವಿಲ್ಲದೆ ಮಹಿಳೆಯರೂ ಭಾಗವಹಿಸಿದ್ದು ಸಮಾನತೆಗೆ ಮತ್ತೊಂದು ನಿರ್ದಶನ ಎಂದರು.</p>.<p>ಅಸ್ಪೃಶ್ಯತೆ ಹೋಗಲಾಡಿಸಿ ಸಮಸಮಾಜ ನಿರ್ಮಾಣ ಮಾಡಿದ ಬಸವಣ್ಣನವರ ಚಿಂತನೆಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ಅನ್ನಪೂರ್ಣ ಪ್ರಕಾಶನದ ಸಿರಿಗೇರಿ ಯರಿಸ್ವಾಮಿ ಕಾರ್ಯಕ್ರಮ ಕುರಿತು ಪ್ರಸ್ತಾವಿಕ ಮಾತನಾಡಿದರು. ಕಗ್ಗಲ್ಲು ಗ್ರಾಮದ ದೊಡ್ಡಬಸವ ಗವಾಯಿ ಮತ್ತು ತಂಡದಿಂದ ಬಸವಣ್ಣನವರ ವಚನಗಳನ್ನು ಸುಶ್ರಾವ್ಯವಾಗಿ ಹಾಡಿ ಜನಮನ ರಂಜಿಸಿದರು.</p>.<p>ಶಂಭುಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಹೂಗಾರ ಬಸವರಾಜ್, ಮುಖ್ಯಶಿಕ್ಷಕ ಎನ್.ಪಂಪಾಪತಿ ಮತ್ತು ಎಚ್.ಎಂ.ಶಶಿಧರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>