<p><strong>ಸಿರುಗುಪ್ಪ:</strong> ತಂತ್ರಜ್ಞಾನ ಬಳಸಿಕೊಂಡು ಕಾನೂನುಬಾಹಿರವಾಗಿ ನಡೆಸುವ ಅಪರಾಧಗಳು ಹೆಚ್ಚಾಗಿವೆ. ಸೈಬರ್ ಅಪರಾಧದಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆಗಳು ಅಗತ್ಯ ಎಂದು ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಅಶೋಕ್ ಆರ್.ಎಚ್. ಹೇಳಿದರು.</p>.<p>ನಗರದ ನ್ಯಾಯಾಲಯದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆಯ ವತಿಯಿಂದ ಗುರುವಾರ ಹಮ್ಮಿಕೊಂಡ ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೊಬ ಮಾತನಾಡಿ, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಅಪರಾಧಗಳು ಹೆಚ್ಚಾಗುತ್ತವೆ. ಸೈಬರ್ ಅಪರಾಧ ಮಾಹಿತಿ ಪಡೆದುಕೊಂಡಲ್ಲಿ ಪ್ರಕರಣ ದಾಖಲಿಸಲು ಸಹಾಯವಾಗುತ್ತದೆ. ಒಬ್ಬ ವಕೀಲ ನೂರು ಅಪರಾಧಗಳನ್ನು ತಡೆಯಲು ಸಾಧ್ಯ ಎಂದರು.</p>.<p>ಡಿವೈಎಸ್ಪಿ ಡಾ.ಸಂತೋಷ ಚವ್ಹಾಣ ಮಾತನಾಡಿ, ಮೊಬೈಲ್ ಕಳೆದು ತಕ್ಷಣ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಬೇಕು. ಸಾರ್ವಜನಿಕರು ತಮ್ಮ ಬ್ಯಾಂಕಿನ ವೈಯಕ್ತಿಕ ಮಾಹಿತಿಗಳಾದ ಅಕೌಂಟ್ ನಂಬರ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಕಾರ್ಡ ಹಿಂಭಾಗದಲ್ಲಿರುವ ಸಿವಿವಿ ನಂಬರ್ ಮತ್ತು 4 ಸಂಖ್ಯೆಯ ಓಟಿಪಿ ನಂಬರಗಳನ್ನು ಅಪರಿಚಿತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳಬಾರದು ಎಂದರು.</p>.<p>ಸೈಬರ್ ಕ್ರೈಂ ಮೂಲಕ ನೀವು ಹಣವನ್ನು ಕಳೆದುಕೊಂಡಲ್ಲಿ ಕೂಡಲೇ ಸೈಬರ್ ಸಹಾಯವಾಣಿ 1930 ಅಥವಾ 112 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ಮಾಹಿತಿ ನೀಡಿದರು.</p>.<p>ಸರರ್ಕಾರಿ ಸಹಾಯಕ ಅಭಿಯೋಜನ ಶಿವರಾಜ ಪಾಟೀಲ್, ವಕೀಲರ ಸಂಘದ ಕಾರ್ಯದರ್ಶಿ ಎಂ.ಶಿವಕುಮಾರ ಸ್ವಾಮಿ, ಸಿ.ಪಿ.ಐ ಚಂದನಗೋಪಾಲ, ಪಿಎಸ್ಐ ಪರಶುರಾಮ ಹಾಗೂ ವಕೀಲರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ತಂತ್ರಜ್ಞಾನ ಬಳಸಿಕೊಂಡು ಕಾನೂನುಬಾಹಿರವಾಗಿ ನಡೆಸುವ ಅಪರಾಧಗಳು ಹೆಚ್ಚಾಗಿವೆ. ಸೈಬರ್ ಅಪರಾಧದಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆಗಳು ಅಗತ್ಯ ಎಂದು ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಅಶೋಕ್ ಆರ್.ಎಚ್. ಹೇಳಿದರು.</p>.<p>ನಗರದ ನ್ಯಾಯಾಲಯದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆಯ ವತಿಯಿಂದ ಗುರುವಾರ ಹಮ್ಮಿಕೊಂಡ ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೊಬ ಮಾತನಾಡಿ, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಅಪರಾಧಗಳು ಹೆಚ್ಚಾಗುತ್ತವೆ. ಸೈಬರ್ ಅಪರಾಧ ಮಾಹಿತಿ ಪಡೆದುಕೊಂಡಲ್ಲಿ ಪ್ರಕರಣ ದಾಖಲಿಸಲು ಸಹಾಯವಾಗುತ್ತದೆ. ಒಬ್ಬ ವಕೀಲ ನೂರು ಅಪರಾಧಗಳನ್ನು ತಡೆಯಲು ಸಾಧ್ಯ ಎಂದರು.</p>.<p>ಡಿವೈಎಸ್ಪಿ ಡಾ.ಸಂತೋಷ ಚವ್ಹಾಣ ಮಾತನಾಡಿ, ಮೊಬೈಲ್ ಕಳೆದು ತಕ್ಷಣ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಬೇಕು. ಸಾರ್ವಜನಿಕರು ತಮ್ಮ ಬ್ಯಾಂಕಿನ ವೈಯಕ್ತಿಕ ಮಾಹಿತಿಗಳಾದ ಅಕೌಂಟ್ ನಂಬರ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಕಾರ್ಡ ಹಿಂಭಾಗದಲ್ಲಿರುವ ಸಿವಿವಿ ನಂಬರ್ ಮತ್ತು 4 ಸಂಖ್ಯೆಯ ಓಟಿಪಿ ನಂಬರಗಳನ್ನು ಅಪರಿಚಿತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳಬಾರದು ಎಂದರು.</p>.<p>ಸೈಬರ್ ಕ್ರೈಂ ಮೂಲಕ ನೀವು ಹಣವನ್ನು ಕಳೆದುಕೊಂಡಲ್ಲಿ ಕೂಡಲೇ ಸೈಬರ್ ಸಹಾಯವಾಣಿ 1930 ಅಥವಾ 112 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ಮಾಹಿತಿ ನೀಡಿದರು.</p>.<p>ಸರರ್ಕಾರಿ ಸಹಾಯಕ ಅಭಿಯೋಜನ ಶಿವರಾಜ ಪಾಟೀಲ್, ವಕೀಲರ ಸಂಘದ ಕಾರ್ಯದರ್ಶಿ ಎಂ.ಶಿವಕುಮಾರ ಸ್ವಾಮಿ, ಸಿ.ಪಿ.ಐ ಚಂದನಗೋಪಾಲ, ಪಿಎಸ್ಐ ಪರಶುರಾಮ ಹಾಗೂ ವಕೀಲರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>