<p><strong>ಬಳ್ಳಾರಿ:</strong> ‘ಬೀದಿಗೆ ಇಳಿದಾದರೂ, ರಕ್ತ ಚೆಲ್ಲಿಯಾದರೂ ನಾವು ಒಳಮೀಸಲಾತಿಯನ್ನು ಪಡೆದೇ ತೀರುತ್ತೇವೆ’ ಎಂದು ಮಾದಿಗ ಸಮುದಾಯದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. </p>.<p>ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದ ಮುಖಂಡರು ರಾಜ್ಯದಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ನಿವಾಸಗಳ ಎದುರು ಭಾನುವಾರ ತಮಟೆ ಚಳವಳಿ ನಡೆಸಿದರು. ಅದರ ಭಾಗವಾಗಿ ಬಳ್ಳಾರಿಯಲ್ಲಿ ಶಾಸಕ ನಾರಾ ಭರತ್ ರೆಡ್ಡಿ ನಿವಾಸದ ಎದುರು ಪ್ರತಿಭಟನೆ ನಡೆಯಿತು. </p>.<p>ಕರ್ನಾಟಕ ಮಾದಿಗ ಮತ್ತು ಉಪ ಜಾತಿಗಳ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಹನುಮಂತಪ್ಪ ಮಾತನಾಡಿ, ‘ಹಲವು ವರ್ಷಗಳಿಂದ ಒಳಮೀಸಲಾತಿ ಹೋರಾಟ ನಡೆಯುತ್ತಿದೆ. ಒಳಮೀಸಲಾತಿ ಕುರಿತು ಚರ್ಚಿಸಲು 19ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಸರ್ಕಾರ ನಿಗದಿ ಮಾಡಿದೆ. ಈ ಸಭೆಯಲ್ಲಿ ಸರ್ಕಾರ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು. ಅದಕ್ಕಾಗಿಯೇ ರಾಜ್ಯದಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ಮನೆಗಳ ಎದುರು ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ’ ಎಂದರು. </p>.<p>‘ಒಳಮೀಸಲಾತಿ ಜಾರಿ ಮಾಡುವ ಕುರಿತು 19ರಂದು ತೀರ್ಮಾನ ಕೈಗೊಳ್ಳಲೇಬೇಕು. ಶಾಸಕರು, ಸಚಿವರಿಗೆ ಅದನ್ನೇ ಮನವರಿಕೆ ಮಾಡುತ್ತಿದ್ದೇವೆ. ಒಂದು ವೇಳೆ ಸೂಕ್ತ ತೀರ್ಮಾ ಕೈಗೊಳ್ಳದೇ ಹೋದರೆ, ಮಾದಿಗ ಸಮುದಾಯ ಬೀದಿಗೆ ಇಳಿಯಲಿದೆ. ರಕ್ತ ಚೆಲ್ಲಿಯಾದರೂ ಒಳಮೀಸಲಾತಿ ಪಡೆಯಲಿದೆ’ ಎಂದು ಎಚ್ಚರಿಸಿದರು. </p>.<p>ಶಾಸಕರ ಮನೆ ಎದುರು ತಮಟೆ ಚಳವಳಿ ನಡೆಸಿದ ಹೋರಾಟಗಾರರು, ‘ಜೈ ಮಾದಿಗ, ಜೈ ಜೈ ಮಾದಿಗ’ ಎಂಬ ಘೋಷಣೆ ಕೂಗಿದರು. ಅನುಮತಿ ಇಲ್ಲದೆ ಪ್ರತಿಭಟನೆ ಹಮ್ಮಿಕೊಂಡಿದ್ದಕ್ಕಾಗಿ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದರು. </p>.<p>ದಲಿತ ಮುಖಂಡರಾದ ಈಶ್ವರಪ್ಪ, ಸೋಮಶೇಖರ್, ನಾರಾಯಣಸ್ವಾಮಿ, ತಿಪ್ಪೇಸ್ವಾಮಿ, ಶಿವರಾಜ್, ಅನಿಲ್, ಮೇಘನಾಥ್, ಪ್ರೇಮಕುಮಾರ್, ರಾಮು ರಮೇಶ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಬೀದಿಗೆ ಇಳಿದಾದರೂ, ರಕ್ತ ಚೆಲ್ಲಿಯಾದರೂ ನಾವು ಒಳಮೀಸಲಾತಿಯನ್ನು ಪಡೆದೇ ತೀರುತ್ತೇವೆ’ ಎಂದು ಮಾದಿಗ ಸಮುದಾಯದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. </p>.<p>ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದ ಮುಖಂಡರು ರಾಜ್ಯದಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ನಿವಾಸಗಳ ಎದುರು ಭಾನುವಾರ ತಮಟೆ ಚಳವಳಿ ನಡೆಸಿದರು. ಅದರ ಭಾಗವಾಗಿ ಬಳ್ಳಾರಿಯಲ್ಲಿ ಶಾಸಕ ನಾರಾ ಭರತ್ ರೆಡ್ಡಿ ನಿವಾಸದ ಎದುರು ಪ್ರತಿಭಟನೆ ನಡೆಯಿತು. </p>.<p>ಕರ್ನಾಟಕ ಮಾದಿಗ ಮತ್ತು ಉಪ ಜಾತಿಗಳ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಹನುಮಂತಪ್ಪ ಮಾತನಾಡಿ, ‘ಹಲವು ವರ್ಷಗಳಿಂದ ಒಳಮೀಸಲಾತಿ ಹೋರಾಟ ನಡೆಯುತ್ತಿದೆ. ಒಳಮೀಸಲಾತಿ ಕುರಿತು ಚರ್ಚಿಸಲು 19ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಸರ್ಕಾರ ನಿಗದಿ ಮಾಡಿದೆ. ಈ ಸಭೆಯಲ್ಲಿ ಸರ್ಕಾರ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು. ಅದಕ್ಕಾಗಿಯೇ ರಾಜ್ಯದಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ಮನೆಗಳ ಎದುರು ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ’ ಎಂದರು. </p>.<p>‘ಒಳಮೀಸಲಾತಿ ಜಾರಿ ಮಾಡುವ ಕುರಿತು 19ರಂದು ತೀರ್ಮಾನ ಕೈಗೊಳ್ಳಲೇಬೇಕು. ಶಾಸಕರು, ಸಚಿವರಿಗೆ ಅದನ್ನೇ ಮನವರಿಕೆ ಮಾಡುತ್ತಿದ್ದೇವೆ. ಒಂದು ವೇಳೆ ಸೂಕ್ತ ತೀರ್ಮಾ ಕೈಗೊಳ್ಳದೇ ಹೋದರೆ, ಮಾದಿಗ ಸಮುದಾಯ ಬೀದಿಗೆ ಇಳಿಯಲಿದೆ. ರಕ್ತ ಚೆಲ್ಲಿಯಾದರೂ ಒಳಮೀಸಲಾತಿ ಪಡೆಯಲಿದೆ’ ಎಂದು ಎಚ್ಚರಿಸಿದರು. </p>.<p>ಶಾಸಕರ ಮನೆ ಎದುರು ತಮಟೆ ಚಳವಳಿ ನಡೆಸಿದ ಹೋರಾಟಗಾರರು, ‘ಜೈ ಮಾದಿಗ, ಜೈ ಜೈ ಮಾದಿಗ’ ಎಂಬ ಘೋಷಣೆ ಕೂಗಿದರು. ಅನುಮತಿ ಇಲ್ಲದೆ ಪ್ರತಿಭಟನೆ ಹಮ್ಮಿಕೊಂಡಿದ್ದಕ್ಕಾಗಿ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದರು. </p>.<p>ದಲಿತ ಮುಖಂಡರಾದ ಈಶ್ವರಪ್ಪ, ಸೋಮಶೇಖರ್, ನಾರಾಯಣಸ್ವಾಮಿ, ತಿಪ್ಪೇಸ್ವಾಮಿ, ಶಿವರಾಜ್, ಅನಿಲ್, ಮೇಘನಾಥ್, ಪ್ರೇಮಕುಮಾರ್, ರಾಮು ರಮೇಶ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>