ಮಂಗಳವಾರ ಬೆಳಿಗ್ಗೆ ಅಣೆಕಟ್ಟೆಯ ಎಡದಂಡೆ ಮುಖ್ಯ ಕಾಲುವೆಯ ಒಂದು ಭಾಗ ಒಡೆದು, ಅಪಾರ ಪ್ರಮಾಣದ ನೀರು ಮುನಿರಾಬಾದ್ನ ಪಂಪಾವನ ಆವರಿಸಿಕೊಂಡಿತ್ತು. ಕೆಲವೇ ಕ್ಷಣಗಳಲ್ಲಿ ಈ ಸುದ್ದಿ, ಅದರ ಚಿತ್ರಗಳು ಸಾಮಾಜಿಕ ಹರಿದಾಡಿದವು. ‘ಮುನಿರಾಬಾದ್ ತೊರೆಯಲು ಜನ ಮುಂದಾಗಿದ್ದಾರೆ. ಜಲಾಶಯ ಮುಂಭಾಗದ ಊರುಗಳ ಜನ ಬೇರೆ ಕಡೆಗೆ ಹೋಗುತ್ತಿದ್ದಾರೆ. ಇದು ನಿಜವಾದ ಸುದ್ದಿಯೇ’ ಎಂದು ಕೇಳಿ ಜನ ಕರೆ ಮಾಡಿದ್ದರು. ಎಲ್ಲೆಡೆ ಒಂದು ರೀತಿಯಲ್ಲಿ ಆತಂಕ ಮನೆ ಮಾಡಿತ್ತು.