<p><strong>ಬಳ್ಳಾರಿ</strong>: ‘ದರ್ಶನ್ ಅವರನ್ನು ಬಳ್ಳಾರಿ ಜೈಲಿನಲ್ಲಿ ಇರಿಸುವ ಬಗ್ಗೆ ನಮಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ’ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ತಿಳಿಸಿದ್ದಾರೆ. </p><p>ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ಗೆ ಮಂಜೂರಾಗಿದ್ದ ಜಾಮೀನು ರದ್ದುಪಡಿಸಿ ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ಪ್ರಕಟಿಸುತ್ತಿದ್ದಂತೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ದರ್ಶನ್ ಅವರನ್ನು ಬಳ್ಳಾರಿ ಜೈಲಿನಲ್ಲಿ ಇರಿಸುವ ಬಗ್ಗೆ ಈ ವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ವಿಷಯದಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದರು. </p><p>ಯಾವುದಾದರೂ ಸಿದ್ಧತೆಗಳನ್ನು ಜೈಲಿನಲ್ಲಿ ಆಗಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ದರ್ಶನ್ಗಾಗಿ ಯಾವುದೇ ವಿಶೇಷ ವ್ಯವಸ್ಥೆಗಳು ಆಗಿಲ್ಲ. ಇಲ್ಲಿಗೇ ಕಳುಹಿಸಿದರೂ, ಹಿಂದಿನ ಕೊಠಡಿಯಲ್ಲೇ ಇರಿಸುತ್ತೇವೆ. ಅವರಿಗೆಂದು ಕೊಡಲಾಗಿದ್ದ ಮೆಡಿಕಲ್ ಚೇರ್ ಕೂಡ ಅದೇ ಕೊಠಡಿಯಲ್ಲೇ ಇದೆ’ ಎಂದು ಅವರು ತಿಳಿಸಿದರು. </p><p>ಇನ್ನು, ಕಾರಾಗೃಹ ಇಲಾಖೆಯ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷಾದ್ರಿ ಪ್ರತಿಕ್ರಿಯಿಸಿ, ‘ಕೋರ್ಟ್ ಆದೇಶವನ್ನು ಪರಿಶೀಲಿಸಿದ ಬಳಿಕವೇ ಅವರನ್ನು ಎಲ್ಲಿ ಇರಿಸಬೇಕು ಎಂಬುದು ಸ್ಪಷ್ಟವಾಗಲಿದೆ’ ಎಂದು ತಿಳಿಸಿದರು.</p>.ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ವಶಕ್ಕೆ SC ನಿರ್ದೇಶನ.ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ದರ್ಶನ್ ಅವರನ್ನು ಬಳ್ಳಾರಿ ಜೈಲಿನಲ್ಲಿ ಇರಿಸುವ ಬಗ್ಗೆ ನಮಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ’ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ತಿಳಿಸಿದ್ದಾರೆ. </p><p>ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ಗೆ ಮಂಜೂರಾಗಿದ್ದ ಜಾಮೀನು ರದ್ದುಪಡಿಸಿ ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ಪ್ರಕಟಿಸುತ್ತಿದ್ದಂತೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ದರ್ಶನ್ ಅವರನ್ನು ಬಳ್ಳಾರಿ ಜೈಲಿನಲ್ಲಿ ಇರಿಸುವ ಬಗ್ಗೆ ಈ ವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ವಿಷಯದಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದರು. </p><p>ಯಾವುದಾದರೂ ಸಿದ್ಧತೆಗಳನ್ನು ಜೈಲಿನಲ್ಲಿ ಆಗಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ದರ್ಶನ್ಗಾಗಿ ಯಾವುದೇ ವಿಶೇಷ ವ್ಯವಸ್ಥೆಗಳು ಆಗಿಲ್ಲ. ಇಲ್ಲಿಗೇ ಕಳುಹಿಸಿದರೂ, ಹಿಂದಿನ ಕೊಠಡಿಯಲ್ಲೇ ಇರಿಸುತ್ತೇವೆ. ಅವರಿಗೆಂದು ಕೊಡಲಾಗಿದ್ದ ಮೆಡಿಕಲ್ ಚೇರ್ ಕೂಡ ಅದೇ ಕೊಠಡಿಯಲ್ಲೇ ಇದೆ’ ಎಂದು ಅವರು ತಿಳಿಸಿದರು. </p><p>ಇನ್ನು, ಕಾರಾಗೃಹ ಇಲಾಖೆಯ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷಾದ್ರಿ ಪ್ರತಿಕ್ರಿಯಿಸಿ, ‘ಕೋರ್ಟ್ ಆದೇಶವನ್ನು ಪರಿಶೀಲಿಸಿದ ಬಳಿಕವೇ ಅವರನ್ನು ಎಲ್ಲಿ ಇರಿಸಬೇಕು ಎಂಬುದು ಸ್ಪಷ್ಟವಾಗಲಿದೆ’ ಎಂದು ತಿಳಿಸಿದರು.</p>.ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ವಶಕ್ಕೆ SC ನಿರ್ದೇಶನ.ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>