<p><strong>ಬಳ್ಳಾರಿ</strong>: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸ್ಥಳಾಂತರವಾಗುತ್ತಿರುವ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ನೋಡಲು ಜೈಲು ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. </p><p>ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಮಂಗಳವಾರ ಸಂಜೆ ಅನುಮತಿ ನೀಡಿತ್ತು. ಬಹುತೇಕ ಇಂದು (ಬುಧವಾರ) ಸಂಜೆ ಅಥವಾ ರಾತ್ರಿ ಹೊತ್ತಿಗೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕರೆತರುವ ಸಾಧ್ಯತೆಗಳಿವೆ. </p><p>ಈ ವಿಷಯ ತಿಳಿದ ಅಭಿಮಾನಿಗಳು ಮುಂಜಾನೆಯಿಂದಲೇ ಜೈಲು ಬಳಿಗೆ ಬರುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. </p><p>"ದರ್ಶನ್ ಮೇಲಿನ ಆರೋಪಗಳ ಬಗ್ಗೆ ನಮಗೆ ಗೊತ್ತಿಲ್ಲ. ಅವರನ್ನು ನೋಡಬೇಕಷ್ಟೇ. ಅವರು ಇಲ್ಲಿಗೆ ಬರುತ್ತಿರುವುದೇ ಅದೃಷ್ಟ" ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.</p><p>ಪುನೀತ್ ರಾಜ್ ಕುಮಾರ್ ಅಭಿಮಾನಿಗಳೂ ಜೈಲು ಬಳಿಗೆ ಬರುತ್ತಿರುವುದು ವಿಶೇಷ.</p>.'ವಿಶೇಷಾತಿಥ್ಯ' ಬಹಿರಂಗಕ್ಕೆ ದರ್ಶನ್ ಆತ್ಮೀಯತೆಗಾಗಿ ರೌಡಿ ಗುಂಪುಗಳ ಪೈಪೋಟಿ ಕಾರಣ.ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ: ಉಳಿದವರು ಎಲ್ಲೆಲ್ಲಿಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸ್ಥಳಾಂತರವಾಗುತ್ತಿರುವ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ನೋಡಲು ಜೈಲು ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. </p><p>ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಮಂಗಳವಾರ ಸಂಜೆ ಅನುಮತಿ ನೀಡಿತ್ತು. ಬಹುತೇಕ ಇಂದು (ಬುಧವಾರ) ಸಂಜೆ ಅಥವಾ ರಾತ್ರಿ ಹೊತ್ತಿಗೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕರೆತರುವ ಸಾಧ್ಯತೆಗಳಿವೆ. </p><p>ಈ ವಿಷಯ ತಿಳಿದ ಅಭಿಮಾನಿಗಳು ಮುಂಜಾನೆಯಿಂದಲೇ ಜೈಲು ಬಳಿಗೆ ಬರುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. </p><p>"ದರ್ಶನ್ ಮೇಲಿನ ಆರೋಪಗಳ ಬಗ್ಗೆ ನಮಗೆ ಗೊತ್ತಿಲ್ಲ. ಅವರನ್ನು ನೋಡಬೇಕಷ್ಟೇ. ಅವರು ಇಲ್ಲಿಗೆ ಬರುತ್ತಿರುವುದೇ ಅದೃಷ್ಟ" ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.</p><p>ಪುನೀತ್ ರಾಜ್ ಕುಮಾರ್ ಅಭಿಮಾನಿಗಳೂ ಜೈಲು ಬಳಿಗೆ ಬರುತ್ತಿರುವುದು ವಿಶೇಷ.</p>.'ವಿಶೇಷಾತಿಥ್ಯ' ಬಹಿರಂಗಕ್ಕೆ ದರ್ಶನ್ ಆತ್ಮೀಯತೆಗಾಗಿ ರೌಡಿ ಗುಂಪುಗಳ ಪೈಪೋಟಿ ಕಾರಣ.ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ: ಉಳಿದವರು ಎಲ್ಲೆಲ್ಲಿಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>