<p><strong>ಬಳ್ಳಾರಿ:</strong> ರೇಣುಕಸ್ವಾಮಿ ಕೊಲೆ ಬಳಿಕ ಮೃತದೇಹದ ವಿಲೇವಾರಿಗೆ ಆರೋಪಿ, ನಟ ದರ್ಶನ್ ಬಾರಿ ಪ್ರಮಾಣದ ಹಣದ ಖರ್ಚು ಮಾಡಿರುವುದಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (ಐಟಿ) ಐವರು ಅಧಿಕಾರಿಗಳು ಗುರುವಾರ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿದರು.</p>.<p>ಮಧ್ಯಾಹ್ನ 12 ರಿಂದ ಸಂಜೆ 7.30ರವರೆಗೆ ವಿಚಾರಣೆ ನಡೆಯಿತು. ಶುಕ್ರವಾರವೂ ವಿಚಾರಣೆ ಮುಂದುವರೆಯಲಿದೆ.</p>.<p>‘ದರ್ಶನ್ ಪರ ಇಬ್ಬರು ಲೆಕ್ಕ ಪರಿಶೋಧಕರು ಹಾಜರಿದ್ದರೂ, ಅವರನ್ನು ಕೊಠಡಿಯಿಂದ ಹೊರಗೆ ಇರಿಸಲಾಗಿತ್ತು. ದರ್ಶನ್ಗೆ ಅಗತ್ಯವೆನಿಸಿದಾಗ ಮಾತ್ರ ಇಬ್ಬರೂ ಲೆಕ್ಕ ಪರಿಶೋಧಕರು ಐಟಿ ಅಧಿಕಾರಿಗಳಿಗೆ ದಾಖಲೆ ಒದಗಿಸುತ್ತಿದ್ದರು’ ಎಂದು ಮೂಲಗಳು ತಿಳಿಸಿವೆ</p>.<p>ದರ್ಶನ್ ನಟಿಸುತ್ತಿರುವ ‘ಡೆವಿಲ್’ ಚಿತ್ರದ ನಿರ್ಮಾಪಕ ಜೆ.ಬಿ.ಪ್ರಕಾಶ್ ಮತ್ತು ಸುನೀಲ್ ಕುಮಾರ್, ಶ್ರೀನಿವಾಸ ಎಂಬುವರು ವಿಚಾರಣೆ ಮಧ್ಯೆಯೇ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು. ಅವರನ್ನು ಭೇಟಿಯಾಗಲು ಐಟಿ ಅಧಿಕಾರಿಗಳು ದರ್ಶನ್ಗೆ ಅವಕಾಶ ಕಲ್ಪಿಸಿಕೊಟ್ಟರು. 25 ನಿಮಿಷ ಮಾತನಾಡಿದ ಬಳಿಕ ಅವರು ನಿರ್ಗಮಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ರೇಣುಕಸ್ವಾಮಿ ಕೊಲೆ ಬಳಿಕ ಮೃತದೇಹದ ವಿಲೇವಾರಿಗೆ ಆರೋಪಿ, ನಟ ದರ್ಶನ್ ಬಾರಿ ಪ್ರಮಾಣದ ಹಣದ ಖರ್ಚು ಮಾಡಿರುವುದಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (ಐಟಿ) ಐವರು ಅಧಿಕಾರಿಗಳು ಗುರುವಾರ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿದರು.</p>.<p>ಮಧ್ಯಾಹ್ನ 12 ರಿಂದ ಸಂಜೆ 7.30ರವರೆಗೆ ವಿಚಾರಣೆ ನಡೆಯಿತು. ಶುಕ್ರವಾರವೂ ವಿಚಾರಣೆ ಮುಂದುವರೆಯಲಿದೆ.</p>.<p>‘ದರ್ಶನ್ ಪರ ಇಬ್ಬರು ಲೆಕ್ಕ ಪರಿಶೋಧಕರು ಹಾಜರಿದ್ದರೂ, ಅವರನ್ನು ಕೊಠಡಿಯಿಂದ ಹೊರಗೆ ಇರಿಸಲಾಗಿತ್ತು. ದರ್ಶನ್ಗೆ ಅಗತ್ಯವೆನಿಸಿದಾಗ ಮಾತ್ರ ಇಬ್ಬರೂ ಲೆಕ್ಕ ಪರಿಶೋಧಕರು ಐಟಿ ಅಧಿಕಾರಿಗಳಿಗೆ ದಾಖಲೆ ಒದಗಿಸುತ್ತಿದ್ದರು’ ಎಂದು ಮೂಲಗಳು ತಿಳಿಸಿವೆ</p>.<p>ದರ್ಶನ್ ನಟಿಸುತ್ತಿರುವ ‘ಡೆವಿಲ್’ ಚಿತ್ರದ ನಿರ್ಮಾಪಕ ಜೆ.ಬಿ.ಪ್ರಕಾಶ್ ಮತ್ತು ಸುನೀಲ್ ಕುಮಾರ್, ಶ್ರೀನಿವಾಸ ಎಂಬುವರು ವಿಚಾರಣೆ ಮಧ್ಯೆಯೇ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು. ಅವರನ್ನು ಭೇಟಿಯಾಗಲು ಐಟಿ ಅಧಿಕಾರಿಗಳು ದರ್ಶನ್ಗೆ ಅವಕಾಶ ಕಲ್ಪಿಸಿಕೊಟ್ಟರು. 25 ನಿಮಿಷ ಮಾತನಾಡಿದ ಬಳಿಕ ಅವರು ನಿರ್ಗಮಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>