<p><strong>ಬಳ್ಳಾರಿ</strong>: ಬಳ್ಳಾರಿ ನಗರದ ಶ್ರೀಕನಕ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ದಸರಾ ಮಹೋತ್ಸವವನ್ನು ಶಾಸಕ ನಾರಾ ಭರತ್ ರೆಡ್ಡಿ ಸೋಮವಾರ ಉದ್ಘಾಟಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ಕನಕದುರ್ಗಮ್ಮ ದೇವಿಯ ಸಿಡಿ ಬಂಡಿ ಉತ್ಸವ ವೇಳೆ ನಗರದ ಎಲ್ಲ ಜಾತಿ-ಧರ್ಮದವರು ಪಾಲ್ಗೊಳ್ಳುತ್ತಾರೆ, ಜಿಲ್ಲೆಯ ಸರ್ವ ಜನಾಂಗದವರ ಮೇಲೆ ಕನಕದುರ್ಗಮ್ಮ ದೇವಿಯ ಕೃಪೆ ಇದೆ ಎಂದು ಹೇಳಿದರು. </p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ ಮಾತನಾಡಿ, ‘ಬಳ್ಳಾರಿ ಜಿಲ್ಲೆ ರಾಜ್ಯದಲ್ಲಿ ಮಹತ್ವದ ಜಿಲ್ಲೆ. ಈ ಜಿಲ್ಲೆಯಲ್ಲಿ ಸೇವೆ ಮಾಡುವುದು ನನ್ನ ಪುಣ್ಯ. ತಾಯಿ ಕನಕದುರ್ಗಮ್ಮ ನಮ್ಮ ಜಿಲ್ಲೆಯ, ನಾಡಿನ ಜನರಿಗೆ ಸುಖ ಸಮೃದ್ಧಿ ಸಂಪತ್ತು ಸಂಭ್ರಮವನ್ನು ಕರುಣಿಸಲಿ’ ಎಂದು ಹಾರೈಸಿದರು.</p>.<p>ಜಿಲ್ಲಾಡಳಿತದ ವತಿಯಿಂದ ಕನಕದುರ್ಗಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು. ಉತ್ಸವ ಮೂರ್ತಿಯ ಪಲ್ಲಕ್ಕಿ ಮೆರವಣಿಗೆಗೆ ಚಾಲನೆ ನೀಡಲಾಯಿತು.</p>.<p>ಮೇಯರ್ ಮುಲ್ಲಂಗಿ ನಂದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ, ಮುಜರಾಯಿ ಇಲಾಖೆಯ ಇಒ ಹನುಮಂತಪ್ಪ, ವಿಭಾಗಾಧಿಕಾರಿ ಪ್ರಮೋದ್, ಪಾಲಿಕೆಯ ಸದಸ್ಯ ಪಿ.ಗಾದೆಪ್ಪ, ಹನುಮಂತಪ್ಪ ಹಾಗೂ ರಾಮಾಂಜನೇಯ ಸೇರಿದಂತೆ ಹಲವರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬಳ್ಳಾರಿ ನಗರದ ಶ್ರೀಕನಕ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ದಸರಾ ಮಹೋತ್ಸವವನ್ನು ಶಾಸಕ ನಾರಾ ಭರತ್ ರೆಡ್ಡಿ ಸೋಮವಾರ ಉದ್ಘಾಟಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ಕನಕದುರ್ಗಮ್ಮ ದೇವಿಯ ಸಿಡಿ ಬಂಡಿ ಉತ್ಸವ ವೇಳೆ ನಗರದ ಎಲ್ಲ ಜಾತಿ-ಧರ್ಮದವರು ಪಾಲ್ಗೊಳ್ಳುತ್ತಾರೆ, ಜಿಲ್ಲೆಯ ಸರ್ವ ಜನಾಂಗದವರ ಮೇಲೆ ಕನಕದುರ್ಗಮ್ಮ ದೇವಿಯ ಕೃಪೆ ಇದೆ ಎಂದು ಹೇಳಿದರು. </p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ ಮಾತನಾಡಿ, ‘ಬಳ್ಳಾರಿ ಜಿಲ್ಲೆ ರಾಜ್ಯದಲ್ಲಿ ಮಹತ್ವದ ಜಿಲ್ಲೆ. ಈ ಜಿಲ್ಲೆಯಲ್ಲಿ ಸೇವೆ ಮಾಡುವುದು ನನ್ನ ಪುಣ್ಯ. ತಾಯಿ ಕನಕದುರ್ಗಮ್ಮ ನಮ್ಮ ಜಿಲ್ಲೆಯ, ನಾಡಿನ ಜನರಿಗೆ ಸುಖ ಸಮೃದ್ಧಿ ಸಂಪತ್ತು ಸಂಭ್ರಮವನ್ನು ಕರುಣಿಸಲಿ’ ಎಂದು ಹಾರೈಸಿದರು.</p>.<p>ಜಿಲ್ಲಾಡಳಿತದ ವತಿಯಿಂದ ಕನಕದುರ್ಗಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು. ಉತ್ಸವ ಮೂರ್ತಿಯ ಪಲ್ಲಕ್ಕಿ ಮೆರವಣಿಗೆಗೆ ಚಾಲನೆ ನೀಡಲಾಯಿತು.</p>.<p>ಮೇಯರ್ ಮುಲ್ಲಂಗಿ ನಂದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ, ಮುಜರಾಯಿ ಇಲಾಖೆಯ ಇಒ ಹನುಮಂತಪ್ಪ, ವಿಭಾಗಾಧಿಕಾರಿ ಪ್ರಮೋದ್, ಪಾಲಿಕೆಯ ಸದಸ್ಯ ಪಿ.ಗಾದೆಪ್ಪ, ಹನುಮಂತಪ್ಪ ಹಾಗೂ ರಾಮಾಂಜನೇಯ ಸೇರಿದಂತೆ ಹಲವರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>