<p><strong>ಹೊಸಪೇಟೆ(ವಿಜಯನಗರ):</strong> ನಗರ ಹೊರವಲಯದ ಅನಂತಶಯನಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಬೇಕೆಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಆಗ್ರಹಿಸಿದೆ.</p>.<p>ನಗರದ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಪರಿಶೀಲನೆಗೆ ಬಂದಿದ್ದ ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅರವಿಂದ ಮಳಖೇಡ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.</p>.<p>ಎರಡು ವರ್ಷಗಳ ಹಿಂದೆ ಸಂಚಾರ ಆರಂಭಿಸಿರುವ ಹೊಸಪೇಟೆ-ಕೊಟ್ಟೂರು-ದಾವಣಗೆರೆ ರೈಲು ಮಾರ್ಗದಲ್ಲಿ ಏಕಕಾಲಕ್ಕೆ ಎರಡು ಕಡೆಯಿಂದ ನಿತ್ಯ ರೈಲು ಸೌಲಭ್ಯ ಕಲ್ಪಿಸಬೇಕು. ಅದಿರು ಸಾಗಾಣಿಕೆ ರೈಲುಗಳನ್ನು ಓಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು. ಈ ಮಾರ್ಗದಿಂದ ಇಲಾಖೆಗೆ ವಾರ್ಷಿಕ ₹200 ಕೋಟಿ ಆದಾಯವಿದ್ದರೂ ಪ್ರಯಾಣಿಕರ ಬೇಡಿಕೆಗೆ ಸ್ಪಂದನೆ ಸಿಗುತ್ತಿಲ್ಲ. ಹಗರಿಬೊಮ್ಮನಹಳ್ಳಿ ಎಲ್.ಸಿ. ಗೇಟ್ ನಿರ್ಮಿಸಬೇಕೆಂದು ಆಗ್ರಹಿಸಿದರು.</p>.<p>ಸಮಿತಿ ಅಧ್ಯಕ್ಷ ವೈ.ಯಮುನೇಶ್, ಕಾರ್ಯದರ್ಶಿ ಕೆ.ಮಹೇಶ್, ವಿಶ್ವನಾಥ ಕೌತಾಳ್, ಪ.ಯ.ಗಣೇಶ್, ಬಿ.ಕೆ.ಆಚಾರ್, ಲೋಗನಾಥನ್, ಹಗರಿಬೊಮ್ಮನಹಳ್ಳಿ ವಾಣಿಜ್ಯೋದಮ ಸಂಘದ ಅಧ್ಯಕ್ಷ ಎಸ್.ಎಂ.ಚಂದ್ರಯ್ಯ, ಕಾರ್ಯದರ್ಶಿ ಕೆ.ಗಿರಿರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ನಗರ ಹೊರವಲಯದ ಅನಂತಶಯನಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಬೇಕೆಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಆಗ್ರಹಿಸಿದೆ.</p>.<p>ನಗರದ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಪರಿಶೀಲನೆಗೆ ಬಂದಿದ್ದ ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅರವಿಂದ ಮಳಖೇಡ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.</p>.<p>ಎರಡು ವರ್ಷಗಳ ಹಿಂದೆ ಸಂಚಾರ ಆರಂಭಿಸಿರುವ ಹೊಸಪೇಟೆ-ಕೊಟ್ಟೂರು-ದಾವಣಗೆರೆ ರೈಲು ಮಾರ್ಗದಲ್ಲಿ ಏಕಕಾಲಕ್ಕೆ ಎರಡು ಕಡೆಯಿಂದ ನಿತ್ಯ ರೈಲು ಸೌಲಭ್ಯ ಕಲ್ಪಿಸಬೇಕು. ಅದಿರು ಸಾಗಾಣಿಕೆ ರೈಲುಗಳನ್ನು ಓಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು. ಈ ಮಾರ್ಗದಿಂದ ಇಲಾಖೆಗೆ ವಾರ್ಷಿಕ ₹200 ಕೋಟಿ ಆದಾಯವಿದ್ದರೂ ಪ್ರಯಾಣಿಕರ ಬೇಡಿಕೆಗೆ ಸ್ಪಂದನೆ ಸಿಗುತ್ತಿಲ್ಲ. ಹಗರಿಬೊಮ್ಮನಹಳ್ಳಿ ಎಲ್.ಸಿ. ಗೇಟ್ ನಿರ್ಮಿಸಬೇಕೆಂದು ಆಗ್ರಹಿಸಿದರು.</p>.<p>ಸಮಿತಿ ಅಧ್ಯಕ್ಷ ವೈ.ಯಮುನೇಶ್, ಕಾರ್ಯದರ್ಶಿ ಕೆ.ಮಹೇಶ್, ವಿಶ್ವನಾಥ ಕೌತಾಳ್, ಪ.ಯ.ಗಣೇಶ್, ಬಿ.ಕೆ.ಆಚಾರ್, ಲೋಗನಾಥನ್, ಹಗರಿಬೊಮ್ಮನಹಳ್ಳಿ ವಾಣಿಜ್ಯೋದಮ ಸಂಘದ ಅಧ್ಯಕ್ಷ ಎಸ್.ಎಂ.ಚಂದ್ರಯ್ಯ, ಕಾರ್ಯದರ್ಶಿ ಕೆ.ಗಿರಿರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>