<p><strong>ಬಳ್ಳಾರಿ</strong>: ನಗರದ 21ನೇ ವಾರ್ಡ್ನ ಕೆಇಬಿ ವೃತ್ತದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಖ್ಯ ಕಚೇರಿವರೆಗಿನ 350 ಮೀಟರ್ ಉದ್ದದ ರಸ್ತೆ ವಿಸ್ತರಣೆ ಕಾಮಗಾರಿ 8 ತಿಂಗಳಿಂದ ಕುಂಟುತ್ತಿದ್ದು, ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಮೇಕಲ ಈಶ್ವರ ರೆಡ್ಡಿ ಆಗ್ರಹಿಸಿದ್ದಾರೆ. </p>.<p>ಈ ಕುರಿತು ಜಿಲ್ಲಾಧಿಕಾರಿ, ನಗರ ಶಾಸಕ, ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ‘ಎಸ್ಎಚ್ 132 ರಸ್ತೆ ವಿಸ್ತರಣೆ ಆರಂಭವಾಗಿ 8 ತಿಂಗಳ ಮೇಲಾಯಿತು. ಕಾಮಗಾರಿ ಪೂರ್ಣವಾಗಿಲ್ಲ. ರಸ್ತೆ ಪೂರ್ತಿ ಗುಂಡಿಗಳಾಗಿವೆ. ವ್ಯಾಪಾರಸ್ಥರು ಕಂಗಾಲಾಗಿದ್ಗಾರೆ. ಸುತ್ತಲ ಪ್ರದೇಶಕ್ಕೆ ನಿತ್ಯ ದೂಳಿನ ಮಜ್ಜನವಾಗುತ್ತಿದ್ದು, ಜನರಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ’ ಎಂದಿದ್ದಾರೆ. </p>.<p>‘ಗುತ್ತಿಗೆದಾರರನ್ನು ಈ ವಿಚಾರವಾಗಿ ಪ್ರಶ್ನೆ ಮಾಡಿದರೆ ‘ಹಣ ಬಿಡುಗಡೆಯಾಗಿಲ್ಲ ಹಾಗಾಗಿ ಕಾಮಗಾರಿ ನಿಲ್ಲಿಸಿದ್ದೇವೆ’ ಎನ್ನುತ್ತಾರೆ. ಕಾಮಗಾರಿ ಪೂರ್ಣವಾಗುವ ವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳು ಸಂಚರಿಸಬಾರದು. ಎರಡೂ ಬದಿಯಲ್ಲಿ ಕಮಾನು ಹಾಕುಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ನಗರದ 21ನೇ ವಾರ್ಡ್ನ ಕೆಇಬಿ ವೃತ್ತದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಖ್ಯ ಕಚೇರಿವರೆಗಿನ 350 ಮೀಟರ್ ಉದ್ದದ ರಸ್ತೆ ವಿಸ್ತರಣೆ ಕಾಮಗಾರಿ 8 ತಿಂಗಳಿಂದ ಕುಂಟುತ್ತಿದ್ದು, ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಮೇಕಲ ಈಶ್ವರ ರೆಡ್ಡಿ ಆಗ್ರಹಿಸಿದ್ದಾರೆ. </p>.<p>ಈ ಕುರಿತು ಜಿಲ್ಲಾಧಿಕಾರಿ, ನಗರ ಶಾಸಕ, ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ‘ಎಸ್ಎಚ್ 132 ರಸ್ತೆ ವಿಸ್ತರಣೆ ಆರಂಭವಾಗಿ 8 ತಿಂಗಳ ಮೇಲಾಯಿತು. ಕಾಮಗಾರಿ ಪೂರ್ಣವಾಗಿಲ್ಲ. ರಸ್ತೆ ಪೂರ್ತಿ ಗುಂಡಿಗಳಾಗಿವೆ. ವ್ಯಾಪಾರಸ್ಥರು ಕಂಗಾಲಾಗಿದ್ಗಾರೆ. ಸುತ್ತಲ ಪ್ರದೇಶಕ್ಕೆ ನಿತ್ಯ ದೂಳಿನ ಮಜ್ಜನವಾಗುತ್ತಿದ್ದು, ಜನರಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ’ ಎಂದಿದ್ದಾರೆ. </p>.<p>‘ಗುತ್ತಿಗೆದಾರರನ್ನು ಈ ವಿಚಾರವಾಗಿ ಪ್ರಶ್ನೆ ಮಾಡಿದರೆ ‘ಹಣ ಬಿಡುಗಡೆಯಾಗಿಲ್ಲ ಹಾಗಾಗಿ ಕಾಮಗಾರಿ ನಿಲ್ಲಿಸಿದ್ದೇವೆ’ ಎನ್ನುತ್ತಾರೆ. ಕಾಮಗಾರಿ ಪೂರ್ಣವಾಗುವ ವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳು ಸಂಚರಿಸಬಾರದು. ಎರಡೂ ಬದಿಯಲ್ಲಿ ಕಮಾನು ಹಾಕುಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>