<p><strong>ಸಂಡೂರು:</strong> ‘ರಾಜ್ಯದಲ್ಲಿನ ಒಂಟಿ ಮಹಿಳೆಯರ ಆರ್ಥಿಕ, ಸಾಮಾಜಿಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಯೋಜನೆಗಳನ್ನು ಜಾರಿಗೆ ತರಬೇಕು’ ಎಂದು ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ ಕುರೆಕುಪ್ಪ ಘಟಕದ ಅಧ್ಯಕ್ಷೆ ಪಿ.ಪದ್ಮಾವತಿ ಹೇಳಿದರು.</p>.<p>ತಾಲ್ಲೂಕಿನ ಕುರೆಕುಪ್ಪ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ, ರೈತ, ಕಟ್ಟಡ ಕಾರ್ಮಿಕ ಸಂಘಟನೆಯ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿದರು.</p>.<p>‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಾಜ್ಯದಲ್ಲಿನ ಒಂಟಿ ಮಹಿಳೆಯರಿಗೆ ವಸತಿ, ನಿವೇಶನ ಸೇರಿದಂತೆ ಇತರ ಮೂಲ ಸೌಲಭ್ಯ ಕಲ್ಪಿಸಬೇಕು. ರಾಜಕೀಯ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು. </p>.<p>ಕಟ್ಟಡ ಕಾರ್ಮಿಕ ಫೆಡರೇಶನ್ ಜಿಲ್ಲಾ ಸಹ ಸಂಚಾಲಕ ವಿ.ದೇವಣ್ಣ, ಕರ್ನಾಟಕ ಪ್ರಾಂತ ರೈತ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಜಿ.ಪಂಪನಗೌಡ, ಮುಖಂಡರಾದ ಸರಸ್ವತಿ, ಎರ್ರಿಯಮ್ಮ, ಶಾಂತಮ್ಮ, ತಿಪ್ಪಮ್ಮ, ಮಲ್ಲಮ್ಮ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ‘ರಾಜ್ಯದಲ್ಲಿನ ಒಂಟಿ ಮಹಿಳೆಯರ ಆರ್ಥಿಕ, ಸಾಮಾಜಿಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಯೋಜನೆಗಳನ್ನು ಜಾರಿಗೆ ತರಬೇಕು’ ಎಂದು ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ ಕುರೆಕುಪ್ಪ ಘಟಕದ ಅಧ್ಯಕ್ಷೆ ಪಿ.ಪದ್ಮಾವತಿ ಹೇಳಿದರು.</p>.<p>ತಾಲ್ಲೂಕಿನ ಕುರೆಕುಪ್ಪ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ, ರೈತ, ಕಟ್ಟಡ ಕಾರ್ಮಿಕ ಸಂಘಟನೆಯ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿದರು.</p>.<p>‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಾಜ್ಯದಲ್ಲಿನ ಒಂಟಿ ಮಹಿಳೆಯರಿಗೆ ವಸತಿ, ನಿವೇಶನ ಸೇರಿದಂತೆ ಇತರ ಮೂಲ ಸೌಲಭ್ಯ ಕಲ್ಪಿಸಬೇಕು. ರಾಜಕೀಯ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು. </p>.<p>ಕಟ್ಟಡ ಕಾರ್ಮಿಕ ಫೆಡರೇಶನ್ ಜಿಲ್ಲಾ ಸಹ ಸಂಚಾಲಕ ವಿ.ದೇವಣ್ಣ, ಕರ್ನಾಟಕ ಪ್ರಾಂತ ರೈತ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಜಿ.ಪಂಪನಗೌಡ, ಮುಖಂಡರಾದ ಸರಸ್ವತಿ, ಎರ್ರಿಯಮ್ಮ, ಶಾಂತಮ್ಮ, ತಿಪ್ಪಮ್ಮ, ಮಲ್ಲಮ್ಮ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>