ನಂತರ ಮಾತನಾಡಿದ ಸಿಪಿಐ (ಎಂ) ತಾಲ್ಲೂಕು ಸಮಿತಿ ಕಾರ್ಯದರ್ಶಿ ಎ. ಸ್ವಾಮಿ, ‘ಪ್ರತಿಯೊಬ್ಬರನ್ನು ಉಚಿತವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಪ್ರತಿಯೊಬ್ಬರಿಗೂ ಮುಂದಿನ ಆರು ತಿಂಗಳವರೆಗೆ ಮಾಸಿಕ ₹ 7,500 ಪರಿಹಾರ ನೀಡಬೇಕು. ಕುಟುಂಬದ ಪ್ರತಿ ಸದಸ್ಯನಿಗೂ ಮಾಸಿಕ 10 ಕೆ.ಜಿ. ಆಹಾರ ಧಾನ್ಯ ವಿತರಿಸಬೇಕು. ಉದ್ಯೋಗ ಖಾತ್ರಿ ವೇತನವನ್ನುಕನಿಷ್ಠ ₹ 600ಕ್ಕೆ ಹೆಚ್ಚಿಸಬೇಕು ಮತ್ತು ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್, ದೂರಸಂಪರ್ಕ, ವಿಮಾ ಕಂಪನಿ, ಬ್ಯಾಂಕ್ಗಳ ಖಾಸಗೀಕರಣ ಪ್ರಕ್ರಿಯೆ ತಡೆಯಬೇಕು. ನಿವೇಶನ ರಹಿತ ದೇವದಾಸಿ ಮಹಿಳೆಯರಿಗೆ ನಿವೇಶನ ನೀಡಬೇಕು. ಸರ್ಕಾರ ಕೂಡಲೆ ಈ ಬೇಡಿಕೆಗಳನ್ನು ಈಡೇರಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.