ಶ್ರೀರಾಮುಲು ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರ ಬೆಂಬಲಿಗರು ಜಯಘೋಷ ಹಾಕಿದರು. ‘ಬಿಜೆಪಿ ಅಧಿಕಾರಕ್ಕೆ ಬಂದರೆ ರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಲಾಗುವುದು ಎಂದು ಆ ಪಕ್ಷದ ಮುಖಂಡರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದರು. ಆದರೆ, ಈಗ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಇದು ರಾಮುಲು ಅವರಿಗೆ ಮಾಡಿರುವ ಅವಮಾನ ಅಲ್ಲ. ಇಡೀ ಉತ್ತರ ಕರ್ನಾಟಕಕ್ಕೆ ಮಾಡಿರುವ ಅಪಮಾನ’ ಎಂದು ಆರೋಪಿಸಿದರು.