<p><strong>ಹೊಸಪೇಟೆ(ವಿಜಯನಗರ):</strong> ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಲವು ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಸ್ಎಫ್ಐ ಸಂಘಟನೆಯ ಪದಾಧಿಕಾರಿಗಳು ನಗರದ ಶಂಕರ್ ಆನಂದ್ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು, ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಲವು ಶೈಕ್ಷಣಿಕ ಸಮಸ್ಯೆಗಳಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡುವುದರ ಜೊತೆಗೆ ವಿದ್ಯಾರ್ಥಿಗಳ ದೋಷಪೂರಿತ ಫಲಿತಾಂಶ ಸರಿಪಡಿಸಿ ಸರಿಯಾದ ಫಲಿತಾಂದ ಪ್ರಕಟಿಸಬೇಕು.</p>.<p>ಅಲ್ಲದೆ ವಿದ್ಯಾರ್ಥಿಗಳ ಅಂಕಪಟ್ಟಿ ನೀಡುವುದರ ಜೊತೆಗೆ ವಿದ್ಯಾರ್ಥಿಗಳು ಮೊದಲು ಉತ್ತೀರ್ಣರಾಗಿ ನಂತರ ಅನುತ್ತೀರ್ಣ ಎಂದು ತೋರಿಸುವ ವಿಷಯಗಳಿಗೆ ಪರೀಕ್ಷಾ ಶುಲ್ಕವನ್ನು ಕಟ್ಟುವುದರ ಬಗ್ಗೆ ಕೂಲೇ ಸ್ಪಷ್ಟತೆ ನೀಡುವುದರ ಜೊತೆಗ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕ ಸಭೆ ಕರೆಯಬೇಕೆಂದು ಒತ್ತಾಯಿಸಿದರು.</p>.<p>ಸಂಘಟನೆಯ ಲಕ್ಷ್ಮಿ ಬೂನಹಳ್ಳಿ, ಅನಿಲ್ಕುಮಾರ್, ಶಿವಾರೆಡ್ಡಿ, ಶಾರದ, ಖುಷಿ, ಲೋಕೇಶ್, ಪವನ್, ಸಹನಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಲವು ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಸ್ಎಫ್ಐ ಸಂಘಟನೆಯ ಪದಾಧಿಕಾರಿಗಳು ನಗರದ ಶಂಕರ್ ಆನಂದ್ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು, ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಲವು ಶೈಕ್ಷಣಿಕ ಸಮಸ್ಯೆಗಳಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡುವುದರ ಜೊತೆಗೆ ವಿದ್ಯಾರ್ಥಿಗಳ ದೋಷಪೂರಿತ ಫಲಿತಾಂಶ ಸರಿಪಡಿಸಿ ಸರಿಯಾದ ಫಲಿತಾಂದ ಪ್ರಕಟಿಸಬೇಕು.</p>.<p>ಅಲ್ಲದೆ ವಿದ್ಯಾರ್ಥಿಗಳ ಅಂಕಪಟ್ಟಿ ನೀಡುವುದರ ಜೊತೆಗೆ ವಿದ್ಯಾರ್ಥಿಗಳು ಮೊದಲು ಉತ್ತೀರ್ಣರಾಗಿ ನಂತರ ಅನುತ್ತೀರ್ಣ ಎಂದು ತೋರಿಸುವ ವಿಷಯಗಳಿಗೆ ಪರೀಕ್ಷಾ ಶುಲ್ಕವನ್ನು ಕಟ್ಟುವುದರ ಬಗ್ಗೆ ಕೂಲೇ ಸ್ಪಷ್ಟತೆ ನೀಡುವುದರ ಜೊತೆಗ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕ ಸಭೆ ಕರೆಯಬೇಕೆಂದು ಒತ್ತಾಯಿಸಿದರು.</p>.<p>ಸಂಘಟನೆಯ ಲಕ್ಷ್ಮಿ ಬೂನಹಳ್ಳಿ, ಅನಿಲ್ಕುಮಾರ್, ಶಿವಾರೆಡ್ಡಿ, ಶಾರದ, ಖುಷಿ, ಲೋಕೇಶ್, ಪವನ್, ಸಹನಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>