<p><strong>ತೆಕ್ಕಲಕೋಟೆ</strong>: ತುಂಗಭದ್ರಾ ನದಿಪಾತ್ರದ ಜಿಲ್ಲೆಗಳಲ್ಲಿ ಎರಡನೇ (ಬೇಸಿಗೆ) ಬೆಳೆಗೆ ನೀರು ಬಿಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಸಿರುಗುಪ್ಪ ತಾಲ್ಲೂಕಿನ ಕರೂರು ಗ್ರಾಮದಿಂದ ಹೊಸಪೇಟೆವರೆಗಿನ ಪಾದಯಾತ್ರೆಗೆ ಬುಧವಾರ ಚಾಲನೆ ನೀಡಲಾಯಿತು.</p>.<p>‘ತುಂಗಭದ್ರಾ ಜಲಾಶಯದ ನಾಲ್ಕು ಜಿಲ್ಲೆಗಳಿಗೆ ಎರಡನೇ ಬೆಳೆಗೆ ನೀರು ಬಿಡದಂತೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕುತಂತ್ರ ನಡೆಸಿದ್ದಾರೆ’ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಕರೂರು ಆರ್. ಮಾಧವ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಜಲಾಶಯದಲ್ಲಿ 65 ಟಿಎಂಸಿ ಅಡಿ ನೀರು ಇದ್ದಾಗ ಎರಡನೇ ಬೆಳೆಗೆ ನೀರು ಒದಗಿಸಲಾಗಿದೆ. ಆದರೆ ಈಗ 79 ಟಿಎಂಸಿ ಅಡಿ ನೀರು ಇದ್ದಾಗಲೂ ನೀರು ಬಿಡುವುದಿಲ್ಲ ಎಂದರೆ ಹೇಗೆ’ ಎಂದು ಪ್ರಶ್ನಿಸಿದರು.</p>.<p>‘ಎಲ್ಲ 33 ಗೇಟ್ಗಳನ್ನು ಬದಲಾಯಿಸಲಾಗುತ್ತಿದೆ. ಆದರೆ ಕೇವಲ 14 ಗೇಟ್ ಸಿದ್ಧಗೊಂಡಿವೆ ಎಂದು ತುಂಗಭದ್ರಾ ಮಂಡಳಿ ಕಾರ್ಯದರ್ಶಿ ರಾಮಕೃಷ್ಣಾರೆಡ್ಡಿ ಹೇಳುತ್ತಾರೆ. ಉಳಿದವು ಯಾವಾಗ ಸಿದ್ಧಗೊಳ್ಳುತ್ತವೆ ಎಂಬ ಮಾಹಿತಿ ಇಲ್ಲ’ ಎಂದು ಅನುಮಾನ ವ್ಯಕ್ತಪಡಿಸಿದರು.</p>.<div><blockquote>ಪಾದಯಾತ್ರೆಯು ಕರೂರು ದರೂರು ದರೂರು ಕ್ಯಾಂಪ್ ಸಿರಿಗೇರಿ ಕ್ರಾಸ್ ಶಾನವಾಸಪುರ ಕುರುಗೋಡು ಕಂಪ್ಲಿ ಮೂಲಕ ಸಾಗಿ ನ.17ಕ್ಕೆ ತುಂಗಭದ್ರಾ ಜಲಾಶಯದ ಎದುರು ಸಮಾವೇಶಗೊಳ್ಳಲಿದೆ. ಬಳಿಕ ಅನಿರ್ದಿಷ್ಟಾವಧಿ ಧರಣಿ ನಡೆಯಲಿದೆ. </blockquote><span class="attribution">ಆರ್. ಮಾಧವ ರೆಡ್ಡಿ, ರಾಜ್ಯ ರೈತಸಂಘದ ಅಧ್ಯಕ್ಷ</span></div>.<p>‘ತುಂಗಭದ್ರ ಅಣೆಕಟ್ಟೆಯ ಎಚ್.ಎಲ್.ಸಿ. ಭಾಗದಲ್ಲಿ ಸುಮಾರು 2 ಲಕ್ಷ ಎಕರೆ ಪ್ರದೇಶದಲ್ಲಿ ಒಣಮೆಣಸಿನಕಾಯಿ, ಜೋಳ, ತೊಗರಿ, ಹತ್ತಿ ಫಸಲು ಇರುವುದರಿಂದ ಡಿಸೆಂಬರ್ವರೆಗೆ ಮುಂಗಾರು ಬೆಳೆಗೆ ನೀರು ಉಣಿಸಬೇಕು. ಜತೆಗೆ ಹಿಂಗಾರು ಅವಧಿಯಲ್ಲಿ ಎಚ್ಎಲ್ಸಿ (ಮೇಲ್ಮಟ್ಟದ ಕಾಲುವೆ) ಮತ್ತು ಎಲ್ಎಲ್ಸಿ (ಕೆಳಮಟ್ಟದ) ಕಾಲುವೆಗೆ 5 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆಯಲಾಗುವ ಭತ್ತಕ್ಕೆ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ನೀರು ಬಿಡಬೇಕು. ಎಲ್ಲ ಗೇಟ್ಗಳನ್ನು ಮುಂದಿನ ಜೂನ್ ವೇಳೆಗೆ ಅಳವಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ರೈತ ಮುಖಂಡರಾದ ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಬಸವರಾಜ ಸ್ವಾಮಿ ಸುರೇಂದ್ರ, ಓಂಕಾರಿಗೌಡ, ವಿಶ್ವನಾಥ ನಾಗಲೀಕರ, ಲೇಪಾಕ್ಷಿ ಅಸುಂಡಿ, ಬಸವರೆಡ್ಡಿ, ದೊಡ್ಡನಗೌಡ, ವಿರುಪಾಕ್ಷಿ, ಗಣೇಶ್ ಸ್ವಾಮಿ ವಿವಿಧ ಗ್ರಾಮಗಳ ರೈತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong>: ತುಂಗಭದ್ರಾ ನದಿಪಾತ್ರದ ಜಿಲ್ಲೆಗಳಲ್ಲಿ ಎರಡನೇ (ಬೇಸಿಗೆ) ಬೆಳೆಗೆ ನೀರು ಬಿಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಸಿರುಗುಪ್ಪ ತಾಲ್ಲೂಕಿನ ಕರೂರು ಗ್ರಾಮದಿಂದ ಹೊಸಪೇಟೆವರೆಗಿನ ಪಾದಯಾತ್ರೆಗೆ ಬುಧವಾರ ಚಾಲನೆ ನೀಡಲಾಯಿತು.</p>.<p>‘ತುಂಗಭದ್ರಾ ಜಲಾಶಯದ ನಾಲ್ಕು ಜಿಲ್ಲೆಗಳಿಗೆ ಎರಡನೇ ಬೆಳೆಗೆ ನೀರು ಬಿಡದಂತೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕುತಂತ್ರ ನಡೆಸಿದ್ದಾರೆ’ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಕರೂರು ಆರ್. ಮಾಧವ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಜಲಾಶಯದಲ್ಲಿ 65 ಟಿಎಂಸಿ ಅಡಿ ನೀರು ಇದ್ದಾಗ ಎರಡನೇ ಬೆಳೆಗೆ ನೀರು ಒದಗಿಸಲಾಗಿದೆ. ಆದರೆ ಈಗ 79 ಟಿಎಂಸಿ ಅಡಿ ನೀರು ಇದ್ದಾಗಲೂ ನೀರು ಬಿಡುವುದಿಲ್ಲ ಎಂದರೆ ಹೇಗೆ’ ಎಂದು ಪ್ರಶ್ನಿಸಿದರು.</p>.<p>‘ಎಲ್ಲ 33 ಗೇಟ್ಗಳನ್ನು ಬದಲಾಯಿಸಲಾಗುತ್ತಿದೆ. ಆದರೆ ಕೇವಲ 14 ಗೇಟ್ ಸಿದ್ಧಗೊಂಡಿವೆ ಎಂದು ತುಂಗಭದ್ರಾ ಮಂಡಳಿ ಕಾರ್ಯದರ್ಶಿ ರಾಮಕೃಷ್ಣಾರೆಡ್ಡಿ ಹೇಳುತ್ತಾರೆ. ಉಳಿದವು ಯಾವಾಗ ಸಿದ್ಧಗೊಳ್ಳುತ್ತವೆ ಎಂಬ ಮಾಹಿತಿ ಇಲ್ಲ’ ಎಂದು ಅನುಮಾನ ವ್ಯಕ್ತಪಡಿಸಿದರು.</p>.<div><blockquote>ಪಾದಯಾತ್ರೆಯು ಕರೂರು ದರೂರು ದರೂರು ಕ್ಯಾಂಪ್ ಸಿರಿಗೇರಿ ಕ್ರಾಸ್ ಶಾನವಾಸಪುರ ಕುರುಗೋಡು ಕಂಪ್ಲಿ ಮೂಲಕ ಸಾಗಿ ನ.17ಕ್ಕೆ ತುಂಗಭದ್ರಾ ಜಲಾಶಯದ ಎದುರು ಸಮಾವೇಶಗೊಳ್ಳಲಿದೆ. ಬಳಿಕ ಅನಿರ್ದಿಷ್ಟಾವಧಿ ಧರಣಿ ನಡೆಯಲಿದೆ. </blockquote><span class="attribution">ಆರ್. ಮಾಧವ ರೆಡ್ಡಿ, ರಾಜ್ಯ ರೈತಸಂಘದ ಅಧ್ಯಕ್ಷ</span></div>.<p>‘ತುಂಗಭದ್ರ ಅಣೆಕಟ್ಟೆಯ ಎಚ್.ಎಲ್.ಸಿ. ಭಾಗದಲ್ಲಿ ಸುಮಾರು 2 ಲಕ್ಷ ಎಕರೆ ಪ್ರದೇಶದಲ್ಲಿ ಒಣಮೆಣಸಿನಕಾಯಿ, ಜೋಳ, ತೊಗರಿ, ಹತ್ತಿ ಫಸಲು ಇರುವುದರಿಂದ ಡಿಸೆಂಬರ್ವರೆಗೆ ಮುಂಗಾರು ಬೆಳೆಗೆ ನೀರು ಉಣಿಸಬೇಕು. ಜತೆಗೆ ಹಿಂಗಾರು ಅವಧಿಯಲ್ಲಿ ಎಚ್ಎಲ್ಸಿ (ಮೇಲ್ಮಟ್ಟದ ಕಾಲುವೆ) ಮತ್ತು ಎಲ್ಎಲ್ಸಿ (ಕೆಳಮಟ್ಟದ) ಕಾಲುವೆಗೆ 5 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆಯಲಾಗುವ ಭತ್ತಕ್ಕೆ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ನೀರು ಬಿಡಬೇಕು. ಎಲ್ಲ ಗೇಟ್ಗಳನ್ನು ಮುಂದಿನ ಜೂನ್ ವೇಳೆಗೆ ಅಳವಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ರೈತ ಮುಖಂಡರಾದ ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಬಸವರಾಜ ಸ್ವಾಮಿ ಸುರೇಂದ್ರ, ಓಂಕಾರಿಗೌಡ, ವಿಶ್ವನಾಥ ನಾಗಲೀಕರ, ಲೇಪಾಕ್ಷಿ ಅಸುಂಡಿ, ಬಸವರೆಡ್ಡಿ, ದೊಡ್ಡನಗೌಡ, ವಿರುಪಾಕ್ಷಿ, ಗಣೇಶ್ ಸ್ವಾಮಿ ವಿವಿಧ ಗ್ರಾಮಗಳ ರೈತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>