<p><strong>ಬಳ್ಳಾರಿ</strong>: ‘ಡೆಂಗಿ ಜ್ವರ ಹಾಗೂ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ನಾಗರಿಕರ ಆರೋಗ್ಯದೃಷ್ಟಿಯಿಂದ ಎಲ್ಲರೂ ಕಡ್ಡಾಯವಾಗಿ ತಮ್ಮ ಮನೆ ಒಳಗೆ, ಹೊರಗೆ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅರಿವು ಮೂಡಿಸಬೇಕು’ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಾಲಿಕೆಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ನಗರದಲ್ಲಿ ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ ನಡೆಯುತ್ತಿದ್ದು, ತಂಡವು ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸಹಕರಿಸಬೇಕು. ಪಾಲಿಕೆ ವತಿಯಿಂದ ಧೂಮೀಕರಣ ಮಾಡಲು ಕ್ರಮ ವಹಿಸಲಾಗುವುದು’ ಎಂದರು.</p>.<p>‘ಡೆಂಗಿ ಜ್ವರ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಬೆಳೆಯುವುದರಿಂದ ಸಾರ್ವಜನಿಕರು ತಮ್ಮ ಮನೆಯಲ್ಲಿ ಯಾವುದೇ ರೀತಿಯ ನೀರು ಸಂಗ್ರಹಣೆ ಇದ್ದಲ್ಲಿ ಸರಿಯಾಗಿ ಮುಚ್ಚಬೇಕು. ನೀರಿನಲ್ಲಿ ಸೊಳ್ಳೆ ಮರಿಗಳು ಇರುವುದು ಕಂಡುಬಂದಲ್ಲಿ ತಕ್ಷಣವೇ ಸ್ವಚ್ಛಗೊಳಿಸಲು ತಿಳಿಸಬೇಕು’ ಎಂದರು.</p>.<p>‘ಕಟ್ಟಡ ನಿರ್ಮಾಣ, ಅಂಗಡಿ , ಟೈರ್, ಎಳೆನೀರು ಚಿಪ್ಪುಗಳಲ್ಲಿ ನಿಂತ ನೀರು ಇದ್ದರೆತೆರುವುಗೊಳಿಸಿ ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಎಚ್ಚರವಹಿಸಬೇಕು' ಎಂದು ತಿಳಿಸಿದರು.</p>.<p>‘ಈಡಿಸ್ ಎಂಬುದು ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆಗಳಾಗಿದ್ದು, ಸಾಧ್ಯವಾದಷ್ಟು ಮನೆಯ ಒಳಗೆ ಸೊಳ್ಳೆಗಳನ್ನು ನಿಯಂತ್ರಿಸುವ ಧೂಪ ಹಾಗೂ ಇತ್ಯಾದಿಗಳನ್ನು ಬಳಸಲು ಸೂಚಿಸಬೇಕು’ ಎಂದರು.</p>.<p>‘ಜ್ವರ, ಮೈ–ಕೈ ನೋವು, ಸುಸ್ತಿನ ಲಕ್ಷಣಗಳು ಕಂಡು ಬಂದಲ್ಲಿ, ಇಲ್ಲವೇ ಯಾವುದೇ ರೀತಿಯ ರೋಗಲಕ್ಷಣ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು. ಡೆಂಗಿ ಕುರಿತು ಸಾರ್ವಜನಿಕರು ಭಯಪಡದೆ ಜಾಗೃತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು. </p>.<p>ಉಪಮೇಯರ್ ಡಿ.ಸುಕುಂ, ಪಾಲಿಕೆ ಆಯುಕ್ತ ಜಿ.ಖಲೀಲ್ಸಾಬ್, ಆರೋಗ್ಯ ಸ್ಥಾಯಿಸಮಿತಿ ಅಧ್ಯಕ್ಷರು, ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಪಾಲಿಕೆಯ ಆರೋಗ್ಯ ಶಾಖೆ ಸಿಬ್ಬಂದಿ ಉಪಸ್ಥಿತರಿದ್ದರು. </p>.<div><blockquote> ಗೌರಿ ಗಣೇಶ ಹಬ್ಬಕ್ಕೆ ನಗರದಲ್ಲಿ ಈ ಬಾರಿ ಪಿಒಪಿ ಮೂರ್ತಿಗಳ ತಯಾರಿಕೆ ಪ್ರದರ್ಶನ ಹಾಗೂ ಮಾರಾಟ ನಿಷೇಧಿಸಿಲಾಗಿದೆ. ನಿಷೇಧ ಉಲ್ಲಂಘಿಸಿದರೆ ಜಪ್ತಿ ಮಾಡಿ ದಂಡ ವಿಧಿಸಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು. </blockquote><span class="attribution">ನಂದೀಶ್ ಬಳ್ಳಾರಿ ಮೇಯರ್</span></div>. <p><strong>‘ಪ್ಲಾಸ್ಟಿಕ್ ಬಳಕೆ ನಿಷೇಧ’‘</strong></p><p>ನಗರದೆಲ್ಲೆಡೆ ಅಂಗಡಿ ಮಾಲೀಕರು ಬೀದಿಬಿದಿ ವ್ಯಾಪಾರಸ್ಥರು ಕಡ್ಡಾಯವಾಗಿ ತಮ್ಮ ಅಂಗಡಿಗಳ ಮುಂದೆ ಅವಶ್ಯಕತೆಗೆ ತಕ್ಕಂತೆ ಕನಿಷ್ಟ 50 ಲೀಟರ್ ಸಾಮರ್ಥ್ಯದ ಕಸದ ಬುಟ್ಟಿ ಇಡಬೇಕು. ಅಂಗಡಿಗಳ ಮುಂದೆ ಕಸ ಚೆಲ್ಲುವಂತಿಲ್ಲ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವಂತಿಲ್ಲ. ಉಲ್ಲಂಘನೆಯಾದರೆ ₹500 ರಿಂದ ₹10000ದವರೆಗೆ ದಂಡ ವಿಧಿಸಿ ಜಲ ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಜರುಗಿಸಬೇಕು’ ಎಂದು ಮೇಯರ್ ನಂದಿಶ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಡೆಂಗಿ ಜ್ವರ ಹಾಗೂ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ನಾಗರಿಕರ ಆರೋಗ್ಯದೃಷ್ಟಿಯಿಂದ ಎಲ್ಲರೂ ಕಡ್ಡಾಯವಾಗಿ ತಮ್ಮ ಮನೆ ಒಳಗೆ, ಹೊರಗೆ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅರಿವು ಮೂಡಿಸಬೇಕು’ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಾಲಿಕೆಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ನಗರದಲ್ಲಿ ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ ನಡೆಯುತ್ತಿದ್ದು, ತಂಡವು ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸಹಕರಿಸಬೇಕು. ಪಾಲಿಕೆ ವತಿಯಿಂದ ಧೂಮೀಕರಣ ಮಾಡಲು ಕ್ರಮ ವಹಿಸಲಾಗುವುದು’ ಎಂದರು.</p>.<p>‘ಡೆಂಗಿ ಜ್ವರ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಬೆಳೆಯುವುದರಿಂದ ಸಾರ್ವಜನಿಕರು ತಮ್ಮ ಮನೆಯಲ್ಲಿ ಯಾವುದೇ ರೀತಿಯ ನೀರು ಸಂಗ್ರಹಣೆ ಇದ್ದಲ್ಲಿ ಸರಿಯಾಗಿ ಮುಚ್ಚಬೇಕು. ನೀರಿನಲ್ಲಿ ಸೊಳ್ಳೆ ಮರಿಗಳು ಇರುವುದು ಕಂಡುಬಂದಲ್ಲಿ ತಕ್ಷಣವೇ ಸ್ವಚ್ಛಗೊಳಿಸಲು ತಿಳಿಸಬೇಕು’ ಎಂದರು.</p>.<p>‘ಕಟ್ಟಡ ನಿರ್ಮಾಣ, ಅಂಗಡಿ , ಟೈರ್, ಎಳೆನೀರು ಚಿಪ್ಪುಗಳಲ್ಲಿ ನಿಂತ ನೀರು ಇದ್ದರೆತೆರುವುಗೊಳಿಸಿ ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಎಚ್ಚರವಹಿಸಬೇಕು' ಎಂದು ತಿಳಿಸಿದರು.</p>.<p>‘ಈಡಿಸ್ ಎಂಬುದು ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆಗಳಾಗಿದ್ದು, ಸಾಧ್ಯವಾದಷ್ಟು ಮನೆಯ ಒಳಗೆ ಸೊಳ್ಳೆಗಳನ್ನು ನಿಯಂತ್ರಿಸುವ ಧೂಪ ಹಾಗೂ ಇತ್ಯಾದಿಗಳನ್ನು ಬಳಸಲು ಸೂಚಿಸಬೇಕು’ ಎಂದರು.</p>.<p>‘ಜ್ವರ, ಮೈ–ಕೈ ನೋವು, ಸುಸ್ತಿನ ಲಕ್ಷಣಗಳು ಕಂಡು ಬಂದಲ್ಲಿ, ಇಲ್ಲವೇ ಯಾವುದೇ ರೀತಿಯ ರೋಗಲಕ್ಷಣ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು. ಡೆಂಗಿ ಕುರಿತು ಸಾರ್ವಜನಿಕರು ಭಯಪಡದೆ ಜಾಗೃತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು. </p>.<p>ಉಪಮೇಯರ್ ಡಿ.ಸುಕುಂ, ಪಾಲಿಕೆ ಆಯುಕ್ತ ಜಿ.ಖಲೀಲ್ಸಾಬ್, ಆರೋಗ್ಯ ಸ್ಥಾಯಿಸಮಿತಿ ಅಧ್ಯಕ್ಷರು, ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಪಾಲಿಕೆಯ ಆರೋಗ್ಯ ಶಾಖೆ ಸಿಬ್ಬಂದಿ ಉಪಸ್ಥಿತರಿದ್ದರು. </p>.<div><blockquote> ಗೌರಿ ಗಣೇಶ ಹಬ್ಬಕ್ಕೆ ನಗರದಲ್ಲಿ ಈ ಬಾರಿ ಪಿಒಪಿ ಮೂರ್ತಿಗಳ ತಯಾರಿಕೆ ಪ್ರದರ್ಶನ ಹಾಗೂ ಮಾರಾಟ ನಿಷೇಧಿಸಿಲಾಗಿದೆ. ನಿಷೇಧ ಉಲ್ಲಂಘಿಸಿದರೆ ಜಪ್ತಿ ಮಾಡಿ ದಂಡ ವಿಧಿಸಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು. </blockquote><span class="attribution">ನಂದೀಶ್ ಬಳ್ಳಾರಿ ಮೇಯರ್</span></div>. <p><strong>‘ಪ್ಲಾಸ್ಟಿಕ್ ಬಳಕೆ ನಿಷೇಧ’‘</strong></p><p>ನಗರದೆಲ್ಲೆಡೆ ಅಂಗಡಿ ಮಾಲೀಕರು ಬೀದಿಬಿದಿ ವ್ಯಾಪಾರಸ್ಥರು ಕಡ್ಡಾಯವಾಗಿ ತಮ್ಮ ಅಂಗಡಿಗಳ ಮುಂದೆ ಅವಶ್ಯಕತೆಗೆ ತಕ್ಕಂತೆ ಕನಿಷ್ಟ 50 ಲೀಟರ್ ಸಾಮರ್ಥ್ಯದ ಕಸದ ಬುಟ್ಟಿ ಇಡಬೇಕು. ಅಂಗಡಿಗಳ ಮುಂದೆ ಕಸ ಚೆಲ್ಲುವಂತಿಲ್ಲ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವಂತಿಲ್ಲ. ಉಲ್ಲಂಘನೆಯಾದರೆ ₹500 ರಿಂದ ₹10000ದವರೆಗೆ ದಂಡ ವಿಧಿಸಿ ಜಲ ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಜರುಗಿಸಬೇಕು’ ಎಂದು ಮೇಯರ್ ನಂದಿಶ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>