<p><strong>ಬಳ್ಳಾರಿ:</strong> ಆದಿಮಾನವರು ನೆಲೆಸಿದ್ದರು ಎನ್ನಲಾದ, ಸಂಡೂರು ತಾಲ್ಲೂಕಿನ ರಣಜಿತ್ಪುರ ಸಮೀಪದ ಗುಹೆಗೆ ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಮತ್ತು ಸಂಶೋಧಕ ರವಿ ಕೋರಿಶೆಟ್ಟರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<p>ಇವರ ಜತೆಗೆ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಹ್ಯಾರಿಸ್ ಸುಮೇರ್, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ್, ಪರಿಸರ ತಜ್ಞ ಸಮದ್ ಕೊಟ್ಟೂರು, ತಹಶೀಲ್ದಾರ್ ಅನಿಲ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳೂ ಇದ್ದರು.</p>.<p>ಗುಹೆಯಲ್ಲಿ ಲಭ್ಯವಾಗುತ್ತಿರುವ ಆದಿಮಾನವರ ಪಳೆಯುಳಿಕೆ, ಪರಿಕರಗಳ ಕಾರ್ಬನ್ ಡೇಟಿಂಗ್ ನಡೆಸಲು ಉದ್ದೇಶಿಸಿರುವ ಪ್ರೊ.ರವಿ ಕೋರಿಶೆಟ್ಟರ್ ಅವರು ತಮ್ಮ ತಂಡದೊಂದಿಗೆ ಬಂದಿದ್ದರು ಎನ್ನಲಾಗಿದ್ದು, ಇವರಿಗೆ ಜಿಲ್ಲಾಡಳಿತವೂ ಜತೆಯಾಗಿದೆ. </p>.<p>ಗುಹೆಗೆ ಭೇಟಿ ನೀಡಿದಾಗ ಅಲ್ಲಿ ಬಿಳಿ ಸ್ಫಟಿಕ ಶಿಲೆ, ಬೂದಿ, ಸೂಕ್ಷ್ಮ ಶಿಲಾಯುಗ, ನವಶಿಲಾಯುಗಕ್ಕೆ ಸೇರಿದ ಪರಿಕರಗಳು, ಮಾನವ, ಪ್ರಾಣಿಯ ಮೂಳೆಗಳು ಗೋಚರಿಸಿದವು ಎಂದು ಹೇಳಲಾಗಿದೆ. ಕೋರಿಶೆಟ್ಟರ್ ಅವರ ತಂಡ ಇದರ ಮಾದರಿಗಳನ್ನು ಸಂಗ್ರಹಿಸಿದೆ ಎನ್ನಲಾಗಿದ್ದು, ಅಧ್ಯಯನಕ್ಕಾಗಿ ಅಹಮದಾಬಾದ್ಗೆ ಕಳುಹಿಸುವ ಸಾಧ್ಯತೆಗಳಿವೆ.</p>.<p>ಭೇಟಿ ಕುರಿತು ‘ಪ್ರಜಾವಾಣಿ’ ಜತೆಗೆ ಮಾತನಾಡಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ‘ಬಳ್ಳಾರಿಯೂ ಸೇರಿದಂತೆ ಅದರ ಸುತ್ತಮುತ್ತಲ ಜಿಲ್ಲೆಗಳಲ್ಲಿ ಆದಿ ಮಾನವರ ನೆಲೆಗಳಿವೆ. ಅವುಗಳ ರಕ್ಷಣೆ ಆಗಬೇಕಾಗಿದೆ. ಸಂಡೂರು ಗುಹೆ ಭೇಟಿಯು ಅತ್ಯಂತ ವಿಶೇಷವಾಗಿತ್ತು. ಅಲ್ಲಿ ಇನ್ನೂ ಅಧ್ಯಯನಗಳು ನಡೆಯಬೇಕಾಗಿದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ, ‘ಗುಹೆ ಇರುವ ಪ್ರದೇಶವನ್ನು ಸಂರಕ್ಷಿತ ತಾಣವಾಗಿ ಮಾಡುವ ಚಿಂತನೆ ಜಿಲ್ಲಾಡಳಿತಕ್ಕೆ ಇದೆ. ಇಂಥ ನೆಲೆಗಳ ಸಂರಕ್ಷಣೆ ಇಂದಿನ ಅಗತ್ಯ ಕೂಡ. ಜನರಿಗೆ ಇಂಥ ವಿಷಯಗಳ ಬಗ್ಗೆ ಜಾಗೃತಿ ಮೂಡಬೇಕು’ ಎಂದು ಹೇಳಿದರು.</p>.<div><blockquote>ಕೋರಿಶೆಟ್ಟರ್ ತಂಡ ಗುಹೆಯಲ್ಲಿ ಮಾದರಿಗಳನ್ನು ಸಂಗ್ರಹಿಸಿದೆ. ಅವುಗಳ ಅಧ್ಯಯನದಲ್ಲಿ ಮಹತ್ವದ ಸಂಗತಿಗಳು ಸಿಕ್ಕರೆ ಗುಹೆಯ ಸುತ್ತಲಿನ ಪ್ರದೇಶವನ್ನು ಸಂರಕ್ಷಿಸಲು ಖಚಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು </blockquote><span class="attribution">– ನಾಗೇಂದ್ರ ಪ್ರಸಾದ್, ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಆದಿಮಾನವರು ನೆಲೆಸಿದ್ದರು ಎನ್ನಲಾದ, ಸಂಡೂರು ತಾಲ್ಲೂಕಿನ ರಣಜಿತ್ಪುರ ಸಮೀಪದ ಗುಹೆಗೆ ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಮತ್ತು ಸಂಶೋಧಕ ರವಿ ಕೋರಿಶೆಟ್ಟರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<p>ಇವರ ಜತೆಗೆ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಹ್ಯಾರಿಸ್ ಸುಮೇರ್, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ್, ಪರಿಸರ ತಜ್ಞ ಸಮದ್ ಕೊಟ್ಟೂರು, ತಹಶೀಲ್ದಾರ್ ಅನಿಲ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳೂ ಇದ್ದರು.</p>.<p>ಗುಹೆಯಲ್ಲಿ ಲಭ್ಯವಾಗುತ್ತಿರುವ ಆದಿಮಾನವರ ಪಳೆಯುಳಿಕೆ, ಪರಿಕರಗಳ ಕಾರ್ಬನ್ ಡೇಟಿಂಗ್ ನಡೆಸಲು ಉದ್ದೇಶಿಸಿರುವ ಪ್ರೊ.ರವಿ ಕೋರಿಶೆಟ್ಟರ್ ಅವರು ತಮ್ಮ ತಂಡದೊಂದಿಗೆ ಬಂದಿದ್ದರು ಎನ್ನಲಾಗಿದ್ದು, ಇವರಿಗೆ ಜಿಲ್ಲಾಡಳಿತವೂ ಜತೆಯಾಗಿದೆ. </p>.<p>ಗುಹೆಗೆ ಭೇಟಿ ನೀಡಿದಾಗ ಅಲ್ಲಿ ಬಿಳಿ ಸ್ಫಟಿಕ ಶಿಲೆ, ಬೂದಿ, ಸೂಕ್ಷ್ಮ ಶಿಲಾಯುಗ, ನವಶಿಲಾಯುಗಕ್ಕೆ ಸೇರಿದ ಪರಿಕರಗಳು, ಮಾನವ, ಪ್ರಾಣಿಯ ಮೂಳೆಗಳು ಗೋಚರಿಸಿದವು ಎಂದು ಹೇಳಲಾಗಿದೆ. ಕೋರಿಶೆಟ್ಟರ್ ಅವರ ತಂಡ ಇದರ ಮಾದರಿಗಳನ್ನು ಸಂಗ್ರಹಿಸಿದೆ ಎನ್ನಲಾಗಿದ್ದು, ಅಧ್ಯಯನಕ್ಕಾಗಿ ಅಹಮದಾಬಾದ್ಗೆ ಕಳುಹಿಸುವ ಸಾಧ್ಯತೆಗಳಿವೆ.</p>.<p>ಭೇಟಿ ಕುರಿತು ‘ಪ್ರಜಾವಾಣಿ’ ಜತೆಗೆ ಮಾತನಾಡಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ‘ಬಳ್ಳಾರಿಯೂ ಸೇರಿದಂತೆ ಅದರ ಸುತ್ತಮುತ್ತಲ ಜಿಲ್ಲೆಗಳಲ್ಲಿ ಆದಿ ಮಾನವರ ನೆಲೆಗಳಿವೆ. ಅವುಗಳ ರಕ್ಷಣೆ ಆಗಬೇಕಾಗಿದೆ. ಸಂಡೂರು ಗುಹೆ ಭೇಟಿಯು ಅತ್ಯಂತ ವಿಶೇಷವಾಗಿತ್ತು. ಅಲ್ಲಿ ಇನ್ನೂ ಅಧ್ಯಯನಗಳು ನಡೆಯಬೇಕಾಗಿದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ, ‘ಗುಹೆ ಇರುವ ಪ್ರದೇಶವನ್ನು ಸಂರಕ್ಷಿತ ತಾಣವಾಗಿ ಮಾಡುವ ಚಿಂತನೆ ಜಿಲ್ಲಾಡಳಿತಕ್ಕೆ ಇದೆ. ಇಂಥ ನೆಲೆಗಳ ಸಂರಕ್ಷಣೆ ಇಂದಿನ ಅಗತ್ಯ ಕೂಡ. ಜನರಿಗೆ ಇಂಥ ವಿಷಯಗಳ ಬಗ್ಗೆ ಜಾಗೃತಿ ಮೂಡಬೇಕು’ ಎಂದು ಹೇಳಿದರು.</p>.<div><blockquote>ಕೋರಿಶೆಟ್ಟರ್ ತಂಡ ಗುಹೆಯಲ್ಲಿ ಮಾದರಿಗಳನ್ನು ಸಂಗ್ರಹಿಸಿದೆ. ಅವುಗಳ ಅಧ್ಯಯನದಲ್ಲಿ ಮಹತ್ವದ ಸಂಗತಿಗಳು ಸಿಕ್ಕರೆ ಗುಹೆಯ ಸುತ್ತಲಿನ ಪ್ರದೇಶವನ್ನು ಸಂರಕ್ಷಿಸಲು ಖಚಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು </blockquote><span class="attribution">– ನಾಗೇಂದ್ರ ಪ್ರಸಾದ್, ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>