<p><strong>ಹೊಸಪೇಟೆ:</strong> ಮಾಜಿ ದೇವದಾಸಿಯರು ಹಾಗೂ ಅವರ ಕುಟುಂಬದವರ ಸರ್ವೇ ನಡೆಸಿ, ಅವರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದವರು ಬುಧವಾರ ಸತತ ಮೂರನೇ ದಿನ ಇಲ್ಲಿನ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.</p>.<p>ತಾಲ್ಲೂಕಿನ ನರಸಾಪುರ, ಬಸವನದುರ್ಗ, ನಾಗೇನಹಳ್ಳಿ, ಹೊಸಮಲಪನಗುಡಿ, ಕಡ್ಡಿರಾಂಪುರ, ವೆಂಕಟಾಪುರ, ಬುಕ್ಕಸಾಗರ, ಕಮಲಾಪುರ, ರಾಮಸಾಗರ, 10–ಮುದ್ಲಾಪುರ, ಕಂಪ್ಲಿ, ಬೆಳಗೋಡ್ಹಾಳ್, ಡಣಾಪುರ, ಇಟಗಿ, ಚಿಕ್ಕಜಾಯಿಗನೂರು, ಜೌಕು, ಹಂಪಾದೇವನಹಳ್ಳಿ, ಹೊನ್ನಳ್ಳಿ, ಮಾವಿನಹಳ್ಳಿ, ಮೆಟ್ರಿ, ದೇವಲಾಪುರ, ಉಪ್ಪಾರಹಳ್ಳಿ, ನಲ್ಲಾಪುರ ಹಾಗೂ ಚಿನ್ನಾಪುರದವರು ಮೂರನೇ ದಿನದ ಧರಣಿಯಲ್ಲಿ ಪಾಲ್ಗೊಂಡಿದ್ದರು.</p>.<p>ಎಲ್ಲ ಮಾಜಿ ದೇವದಾಸಿಯರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಬೇಕು. ಐದು ಎಕರೆ ಜಮೀನು ಕೊಡಬೇಕು. ಪಿಂಚಣಿ ಹೆಚ್ಚಿಸಬೇಕು. ಯುವಕರಿಗೆ ನಿರುದ್ಯೋಗ ಭತ್ಯೆ ನೀಡಬೇಕು. ಗಣತಿಯಲ್ಲಿ ಬಿಟ್ಟು ಹೋದ ದೇವದಾಸಿಯರ ಹೆಸರು ಮರು ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಅಧ್ಯಕ್ಷೆ ಕೆ. ನಾಗರತ್ನಮ್ಮ, ತಾಲ್ಲೂಕು ಅಧ್ಯಕ್ಷ ಕೆ. ಹಂಪಮ್ಮ, ಕಾರ್ಯದರ್ಶಿ ಎಸ್. ಯಲ್ಲಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಮಾಜಿ ದೇವದಾಸಿಯರು ಹಾಗೂ ಅವರ ಕುಟುಂಬದವರ ಸರ್ವೇ ನಡೆಸಿ, ಅವರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದವರು ಬುಧವಾರ ಸತತ ಮೂರನೇ ದಿನ ಇಲ್ಲಿನ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.</p>.<p>ತಾಲ್ಲೂಕಿನ ನರಸಾಪುರ, ಬಸವನದುರ್ಗ, ನಾಗೇನಹಳ್ಳಿ, ಹೊಸಮಲಪನಗುಡಿ, ಕಡ್ಡಿರಾಂಪುರ, ವೆಂಕಟಾಪುರ, ಬುಕ್ಕಸಾಗರ, ಕಮಲಾಪುರ, ರಾಮಸಾಗರ, 10–ಮುದ್ಲಾಪುರ, ಕಂಪ್ಲಿ, ಬೆಳಗೋಡ್ಹಾಳ್, ಡಣಾಪುರ, ಇಟಗಿ, ಚಿಕ್ಕಜಾಯಿಗನೂರು, ಜೌಕು, ಹಂಪಾದೇವನಹಳ್ಳಿ, ಹೊನ್ನಳ್ಳಿ, ಮಾವಿನಹಳ್ಳಿ, ಮೆಟ್ರಿ, ದೇವಲಾಪುರ, ಉಪ್ಪಾರಹಳ್ಳಿ, ನಲ್ಲಾಪುರ ಹಾಗೂ ಚಿನ್ನಾಪುರದವರು ಮೂರನೇ ದಿನದ ಧರಣಿಯಲ್ಲಿ ಪಾಲ್ಗೊಂಡಿದ್ದರು.</p>.<p>ಎಲ್ಲ ಮಾಜಿ ದೇವದಾಸಿಯರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಬೇಕು. ಐದು ಎಕರೆ ಜಮೀನು ಕೊಡಬೇಕು. ಪಿಂಚಣಿ ಹೆಚ್ಚಿಸಬೇಕು. ಯುವಕರಿಗೆ ನಿರುದ್ಯೋಗ ಭತ್ಯೆ ನೀಡಬೇಕು. ಗಣತಿಯಲ್ಲಿ ಬಿಟ್ಟು ಹೋದ ದೇವದಾಸಿಯರ ಹೆಸರು ಮರು ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಅಧ್ಯಕ್ಷೆ ಕೆ. ನಾಗರತ್ನಮ್ಮ, ತಾಲ್ಲೂಕು ಅಧ್ಯಕ್ಷ ಕೆ. ಹಂಪಮ್ಮ, ಕಾರ್ಯದರ್ಶಿ ಎಸ್. ಯಲ್ಲಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>