ಹೊಸಪೇಟೆ (ವಿಜಯನಗರ): ನಗರದ ವಿಜಯ ವಿಠ್ಠಲ ರುಖುಮಾಯಿ ದೇವಸ್ಥಾನದಲ್ಲಿ ಭಾವಸಾರ ಕ್ಷತ್ರಿಯ ಸಮಾಜದಿಂದ ದಿಂಡಿ ಮಹೋತ್ಸವ ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು.
ದಿಂಡಿ ಅಂಗವಾಗಿ ವಿಜಯ ವಿಠ್ಠಲ ರುಖುಮಾಯಿ ಮೂರ್ತಿಗಳಿಗೆ ವಿವಿಧ ತರಕಾರಿಗಳಿಂದ ಅಲಂಕಾರ ಮಾಡಲಾಯಿತು. ಅನಂತರ ಪಾಂಡುರಂಗ ಸಂಗೀತ ಶಾಲೆಯಿಂದ ಗಾಯನ ಕಾರ್ಯಕ್ರಮ ನಡೆಯಿತು. ಏಕಾದಶಿ ಅಂಗವಾಗಿ ಸಂಜೆ ನಗರದ ಪ್ರಮುಖ ಬೀದಿಗಳಲ್ಲಿ ದಿಂಡಿ ಮೆರವಣಿಗೆ ಜರುಗಿತು. ವಾರಕರಿಗಳು, ಸಮಾಜದ ಮುಖಂಡರು ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದರು. ಬಳಿಕ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 2023ರ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.