ಪ್ರತಿ ಎಕರೆಗೆ ₹70 ಸಾವಿರ ಖರ್ಚು ಈರುಳ್ಳಿ ಬೆಳೆ ಬಿತ್ತನೆ ಮಾಡಲಾಗಿತ್ತು. ಆದರೆ, ಈಚೆಗೆ ಸುರಿದ ಮಳೆಯಿಂದಾಗಿ ಬೆಳೆಗೆ ಕೊಳೆರೋಗ ತಗುಲಿದೆ. ಕಳೆದ ವರ್ಷ ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದೆವು. ಈ ಬಾರಿ ಉತ್ತಮ ಇಳುವರಿ ಬಂದಿತ್ತು. ಲಾಭ ಗಳಿಸುವ ನಿರೀಕ್ಷೆಯೂ ಇತ್ತು. ಆದರೆ, ಕೊಳೆರೋಗದಿಂದಾಗಿ ಮತ್ತೆ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿದೆ ಎಂದು ರೈತ ಮೈನಳ್ಳಿ ಕೊಟ್ರೇಶಪ್ಪ ಅಳಲು ತೋಡಿಕೊಂಡರು.