<p><strong>ಸಿರುಗುಪ್ಪ:</strong> ರೈತರ ಏಳಿಗೆಗಾಗಿ ಸರ್ಕಾರ ನೀಡುವ ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ಬಿ.ಎಂ. ನಾಗರಾಜ ಹೇಳಿದರು.</p>.<p>ನಗರದ ತಾಲ್ಲೂಕು ಮೈದಾನದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ಮತ್ತು 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯ ₹2.5ಲಕ್ಷ ಸಹಾಯ ಧನದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಮತ್ತು ಅತಿಸಣ್ಣ ರೈತರ ಫಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ಶುಕ್ರವಾರ ವಿತರಿಸಿ ಮಾತನಾಡಿದರು.</p>.<p>58 ರೈತರಿಗೆ ಪಂಪ್ಸೆಟ್, ಪೈಪ್ಗಳು, ವಿದ್ಯುತ್ ಉಪಕರಣಗಳಿಂದ ನೀರಾವರಿ ಸೌಲಭ್ಯ ಕಲ್ಪಿಸಿಕೊಳ್ಳಲು ಸಾಮಗ್ರಿ ನೆರವಾಗಲಿವೆ ಎಂದರು.</p>.<p>ನಗರಸಭೆ ಅಧ್ಯಕ್ಷೆ ರೇಣುಕಮ್ಮ ವೆಂಕಟೇಶ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನಿಯಮಿತ ಜಿಲ್ಲಾ ವ್ಯವಸ್ಥಾಪಕ ಎಚ್. ಮಲ್ಲಿಕಾರ್ಜುನ, ತಾಲ್ಲೂಕು ಅಧಿಕಾರಿ ರೇವಣ್ಣ ಸಿದ್ದಪ್ಪ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕರಿಬಸಪ್ಪ, ನಗರಸಭೆ ಸದಸ್ಯ ಗಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ರೈತರ ಏಳಿಗೆಗಾಗಿ ಸರ್ಕಾರ ನೀಡುವ ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ಬಿ.ಎಂ. ನಾಗರಾಜ ಹೇಳಿದರು.</p>.<p>ನಗರದ ತಾಲ್ಲೂಕು ಮೈದಾನದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ಮತ್ತು 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯ ₹2.5ಲಕ್ಷ ಸಹಾಯ ಧನದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಮತ್ತು ಅತಿಸಣ್ಣ ರೈತರ ಫಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ಶುಕ್ರವಾರ ವಿತರಿಸಿ ಮಾತನಾಡಿದರು.</p>.<p>58 ರೈತರಿಗೆ ಪಂಪ್ಸೆಟ್, ಪೈಪ್ಗಳು, ವಿದ್ಯುತ್ ಉಪಕರಣಗಳಿಂದ ನೀರಾವರಿ ಸೌಲಭ್ಯ ಕಲ್ಪಿಸಿಕೊಳ್ಳಲು ಸಾಮಗ್ರಿ ನೆರವಾಗಲಿವೆ ಎಂದರು.</p>.<p>ನಗರಸಭೆ ಅಧ್ಯಕ್ಷೆ ರೇಣುಕಮ್ಮ ವೆಂಕಟೇಶ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನಿಯಮಿತ ಜಿಲ್ಲಾ ವ್ಯವಸ್ಥಾಪಕ ಎಚ್. ಮಲ್ಲಿಕಾರ್ಜುನ, ತಾಲ್ಲೂಕು ಅಧಿಕಾರಿ ರೇವಣ್ಣ ಸಿದ್ದಪ್ಪ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕರಿಬಸಪ್ಪ, ನಗರಸಭೆ ಸದಸ್ಯ ಗಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>