ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ದಿವಾಕರ್ ಬಾಬು

Last Updated 24 ಮಾರ್ಚ್ 2023, 9:03 IST
ಅಕ್ಷರ ಗಾತ್ರ

ಬಳ್ಳಾರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬಳ್ಳಾರಿಯಿಂದ ಸ್ಪರ್ಧಿಸುವಂತೆ ಮಾಜಿ ಸಚಿವ ದಿವಾಕರ್ ಬಾಬು ಆಹ್ವಾನ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಅಕಾಂಕ್ಷಿಗಳು ಬಹಳ ಇದ್ದಾರೆ. ಗೆಲ್ಲುವ ವಾತಾವರಣ ವಿರುವುದರಿಂದ ಎಲ್ಲರೂ ಪಕ್ಷದ ಟಿಕೆಟ್ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಬಳ್ಳಾರಿ ನಗರದಿಂದ ಸ್ಪರ್ಧೆ ಮಾಡಬೇಕು ಎಂಬುದು ನಮ್ಮ ಒತ್ತಾಸೆಯಾಗಿದೆ ಎಂದು ಅವರು ಹೇಳಿದ್ದಾರೆ.

ಬಳ್ಳಾರಿ ಅಭಿವೃದ್ಧಿ ವಂಚಿತವಾಗಿದೆ. ಕೈಗಾರಿಕೆಗಳು ಸೇರಿದಂತೆ ಅಭಿವೃದ್ಧಿ ಸ್ಥಗಿತವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಪಕ್ಷದ ದೊಡ್ಡ ನಾಯಕರು ಸ್ಪರ್ಧಿಸಿದಾಗ ಕೆಪಿಸಿಎಲ್ ಸೇರಿದಂತೆ ಅಭಿವೃದ್ಧಿ ಕಾರ್ಯಗಳಾಗಿವೆ.

ಬಳ್ಳಾರಿ ಪಾದಯಾತ್ರೆ ಮಾಡಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಇದೀಗ, ಇಲ್ಲಿ ಸ್ಪರ್ಧಿಸುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಗಳಾಗಲಿ ಎಂದು ದಿವಾಕರ್‌ ಬಾಬು ಹಾರೈಸಿದ್ದಾರೆ.

ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಕ್ಷೇತ್ರ ಇಲ್ಲ ಅಂತಲ್ಲ. ಅಭಿವೃದ್ಧಿಗಾಗಿ ಇಲ್ಲಿಗೆ ಬರಲು ಕೇಳುತ್ತಿದ್ದೇವೆ. ನನಗೆ ಟಿಕೆಟ್ ಖಾಯಂ ಅಂತ ಹೇಳಿದ ಮೇಲೂ ಸಿದ್ದರಾಮಯ್ಯ ಅವರನ್ನು ಬಳ್ಳಾರಿಗೆ ಕರೆಯುತ್ತಿದ್ದೇವೆ. ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ಮಾಡಿದ್ದೇವೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT