<p><strong>ಹೊಸಪೇಟೆ:</strong> ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಇನ್ನರ್ ವೀಲ್ ಕ್ಲಬ್ನಿಂದ ಸೋಮವಾರ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು.</p>.<p>ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ, ವೈದ್ಯರಾದ ಸೋಮಶೇಖರ್, ಹರಿಪ್ರಸಾದ್, ಮಹಾಂತಪ್ಪ, ಲಕ್ಷ್ಮಿದೇವಿ, ಮೆಹಬೂಬ್ ಬಿ, ಶ್ರೀನಿವಾಸ್, ಆಶಾ ಕೋರಿ, ಅರುಣ್, ಇತ್ತೀಚೆಗೆ ಕೆಲಸದಿಂದ ನಿವೃತ್ತರಾದ ವೈದ್ಯ ಪ್ರಕಾಶ್ ರೆಡ್ಡಿ ಅವರನ್ನು ಕ್ಲಬ್ ಸದಸ್ಯರು ಸನ್ಮಾನಿಸಿದರು.</p>.<p>ಡಾ. ಸೋಮಶೇಖರ ಮಾತನಾಡಿ, ‘ಬಿ.ಸಿ. ರಾಯ್ ಅವರ ಸವಿನೆನಪಿನಲ್ಲಿ ವೈದ್ಯರ ದಿನ ಆಚರಿಸಲಾಗುತ್ತದೆ. ವೈದ್ಯರ ಜತೆಗೆ ಅವರು ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿದ್ದರು. ಅಂದಿನಿಂದ ಪ್ರತಿವರ್ಷ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಗುರುತಿಸಿ ಸತ್ಕರಿಸಲಾಗುತ್ತದೆ’ ಎಂದು ಹೇಳಿದರು.</p>.<p>ನೂರು ಹಾಸಿಗೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ ಮಾತನಾಡಿ, ‘ಜೀವರಕ್ಷಕ ತರಬೇತಿಯನ್ನು ಎಲ್ಲ ಇನ್ನರ್ ವೀಲ್ ಕ್ಲಬ್ ಸದಸ್ಯರಿಗೆ ನೀಡಲಾಗುವುದು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ವೈದ್ಯರು ಉತ್ತಮ ಸೇವೆ ನೀಡುತ್ತಿದ್ದಾರೆ. ಜನದಟ್ಟಣೆ ಸಂದರ್ಭದಲ್ಲಿ ಜನ ಸಹಕರಿಸಬೇಕು’ ಎಂದರು.</p>.<p>ಕ್ಲಬ್ ಅಧ್ಯಕ್ಷೆ ಅನ್ನಪೂರ್ಣಾರೆಡ್ಡಿ, ಕಾರ್ಯದರ್ಶಿ ರಜಿನಿ ಶ್ರೀನಿವಾಸ್,ಎನ್.ಎಸ್. ರೇವಣಸಿದ್ದಪ್ಪ, ಮೇಘನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಇನ್ನರ್ ವೀಲ್ ಕ್ಲಬ್ನಿಂದ ಸೋಮವಾರ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು.</p>.<p>ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ, ವೈದ್ಯರಾದ ಸೋಮಶೇಖರ್, ಹರಿಪ್ರಸಾದ್, ಮಹಾಂತಪ್ಪ, ಲಕ್ಷ್ಮಿದೇವಿ, ಮೆಹಬೂಬ್ ಬಿ, ಶ್ರೀನಿವಾಸ್, ಆಶಾ ಕೋರಿ, ಅರುಣ್, ಇತ್ತೀಚೆಗೆ ಕೆಲಸದಿಂದ ನಿವೃತ್ತರಾದ ವೈದ್ಯ ಪ್ರಕಾಶ್ ರೆಡ್ಡಿ ಅವರನ್ನು ಕ್ಲಬ್ ಸದಸ್ಯರು ಸನ್ಮಾನಿಸಿದರು.</p>.<p>ಡಾ. ಸೋಮಶೇಖರ ಮಾತನಾಡಿ, ‘ಬಿ.ಸಿ. ರಾಯ್ ಅವರ ಸವಿನೆನಪಿನಲ್ಲಿ ವೈದ್ಯರ ದಿನ ಆಚರಿಸಲಾಗುತ್ತದೆ. ವೈದ್ಯರ ಜತೆಗೆ ಅವರು ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿದ್ದರು. ಅಂದಿನಿಂದ ಪ್ರತಿವರ್ಷ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಗುರುತಿಸಿ ಸತ್ಕರಿಸಲಾಗುತ್ತದೆ’ ಎಂದು ಹೇಳಿದರು.</p>.<p>ನೂರು ಹಾಸಿಗೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ ಮಾತನಾಡಿ, ‘ಜೀವರಕ್ಷಕ ತರಬೇತಿಯನ್ನು ಎಲ್ಲ ಇನ್ನರ್ ವೀಲ್ ಕ್ಲಬ್ ಸದಸ್ಯರಿಗೆ ನೀಡಲಾಗುವುದು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ವೈದ್ಯರು ಉತ್ತಮ ಸೇವೆ ನೀಡುತ್ತಿದ್ದಾರೆ. ಜನದಟ್ಟಣೆ ಸಂದರ್ಭದಲ್ಲಿ ಜನ ಸಹಕರಿಸಬೇಕು’ ಎಂದರು.</p>.<p>ಕ್ಲಬ್ ಅಧ್ಯಕ್ಷೆ ಅನ್ನಪೂರ್ಣಾರೆಡ್ಡಿ, ಕಾರ್ಯದರ್ಶಿ ರಜಿನಿ ಶ್ರೀನಿವಾಸ್,ಎನ್.ಎಸ್. ರೇವಣಸಿದ್ದಪ್ಪ, ಮೇಘನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>