<p>ತೆಕ್ಕಲಕೋಟೆ : ಸಮೀಪದ ಕೆಂಚನಗುಡ್ಡ ಗ್ರಾಮದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ 10 ಜನರಿಗೆ ಹುಚ್ಚು ನಾಯಿ ಕಡಿದ ಘಟನೆ ನಡೆದಿದೆ.</p>.<p>ಕೆ. ತಾಂಡ ಗ್ರಾಮದ ಗಣೇಶ ವಿಸರ್ಜನೆಗಾಗಿ ಕೆಂಚನಗುಡ್ಡ ಗ್ರಾಮದ ಬಳಿಯ ತುಂಗಭದ್ರಾ ನದಿಗೆ ತೆರಳುವ ಸಂದರ್ಭದಲ್ಲಿ ಹುಚ್ಚುನಾಯಿ ಏಕಾವಕಿ ಗುಂಪಿನ ಮೇಲೆ ದಾಳಿ ಮಾಡಿದೆ.</p>.<p>ಕೆಂಚನಗುಡ್ಡ ಗ್ರಾಮದ ಲಕ್ಷ್ಮಿ, ಕುಪ್ಪಯ್ಯ, ಶಿವಕುಮಾರ, ಕೆ. ತಾಂಡ ಗ್ರಾಮದ ಲಕ್ಷ್ಮಿ ಸೇವಿಯಪ್ಪ , ಗಂಗಾ ನಾಯ್ಕ, ರವಿನಾಯ್ಕ, ಸರಸ್ವತಿ, ಗಣೇಶ, ತಿರುಮಲೇಶಹಾಗೂ ಹೆರಕಲ್ಲು ಗ್ರಾಮದ ಕಾಡಿಸಿದ್ದ ಹುಚ್ಚು ನಾಯಿ ಕಡಿತಕ್ಕೆ ಒಳಗಾದವರು.</p>.<p>ಗುರುವಾರ ಸಿರುಗುಪ್ಪ ತಾಲ್ಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಈರಣ್ಣ ಗ್ರಾಮಕ್ಕೆ ಭೇಟಿ ನೀಡಿ ನಾಯಿ ಕಡಿತಕ್ಕೊಳಗಾದವರ ಆರೋಗ್ಯ ವಿಚಾರಿಸಿದರು.</p>.<p>ಇದೇ ಸಂದರ್ಭದಲ್ಲಿ ಕೆಂಚನಗುಡ್ಡ ಗ್ರಾಮದ ಪಂಚಾಯಿತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.</p>.<p>ಪಂಚಾಯಿತಿ ಅಧಿಕಾರಿಗಳು ಬೀದಿ ನಾಯಿ, ಸಾಕುನಾಯಿ ಸಾಕು ಪ್ರಾಣಿಗಳಿಂದ ಆದಷ್ಟು ದೂರ ಇರುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಹಾಗೂ ಡೆಂಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲಿನ 100 ಮನೆಗಳ ಒಳಾಂಗಣ ಧೂಮೀಕರಣ ಮಾಡುವಂತೆ ಸೂಚಿಸಿದರು.</p>.<p>ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭೀಮರಾಜರೆಡ್ಡಿ, ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಘವೇಂದ್ರ, ಸಮುದಾಯ ಆರೋಗ್ಯ ಅಧಿಕಾರಿ ಹುಸೇನ್ ಭಾಷ, ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿ ಶಿವಗಂಗಮ್ಮ ಹಾಗೂ ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಕ್ಕಲಕೋಟೆ : ಸಮೀಪದ ಕೆಂಚನಗುಡ್ಡ ಗ್ರಾಮದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ 10 ಜನರಿಗೆ ಹುಚ್ಚು ನಾಯಿ ಕಡಿದ ಘಟನೆ ನಡೆದಿದೆ.</p>.<p>ಕೆ. ತಾಂಡ ಗ್ರಾಮದ ಗಣೇಶ ವಿಸರ್ಜನೆಗಾಗಿ ಕೆಂಚನಗುಡ್ಡ ಗ್ರಾಮದ ಬಳಿಯ ತುಂಗಭದ್ರಾ ನದಿಗೆ ತೆರಳುವ ಸಂದರ್ಭದಲ್ಲಿ ಹುಚ್ಚುನಾಯಿ ಏಕಾವಕಿ ಗುಂಪಿನ ಮೇಲೆ ದಾಳಿ ಮಾಡಿದೆ.</p>.<p>ಕೆಂಚನಗುಡ್ಡ ಗ್ರಾಮದ ಲಕ್ಷ್ಮಿ, ಕುಪ್ಪಯ್ಯ, ಶಿವಕುಮಾರ, ಕೆ. ತಾಂಡ ಗ್ರಾಮದ ಲಕ್ಷ್ಮಿ ಸೇವಿಯಪ್ಪ , ಗಂಗಾ ನಾಯ್ಕ, ರವಿನಾಯ್ಕ, ಸರಸ್ವತಿ, ಗಣೇಶ, ತಿರುಮಲೇಶಹಾಗೂ ಹೆರಕಲ್ಲು ಗ್ರಾಮದ ಕಾಡಿಸಿದ್ದ ಹುಚ್ಚು ನಾಯಿ ಕಡಿತಕ್ಕೆ ಒಳಗಾದವರು.</p>.<p>ಗುರುವಾರ ಸಿರುಗುಪ್ಪ ತಾಲ್ಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಈರಣ್ಣ ಗ್ರಾಮಕ್ಕೆ ಭೇಟಿ ನೀಡಿ ನಾಯಿ ಕಡಿತಕ್ಕೊಳಗಾದವರ ಆರೋಗ್ಯ ವಿಚಾರಿಸಿದರು.</p>.<p>ಇದೇ ಸಂದರ್ಭದಲ್ಲಿ ಕೆಂಚನಗುಡ್ಡ ಗ್ರಾಮದ ಪಂಚಾಯಿತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.</p>.<p>ಪಂಚಾಯಿತಿ ಅಧಿಕಾರಿಗಳು ಬೀದಿ ನಾಯಿ, ಸಾಕುನಾಯಿ ಸಾಕು ಪ್ರಾಣಿಗಳಿಂದ ಆದಷ್ಟು ದೂರ ಇರುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಹಾಗೂ ಡೆಂಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲಿನ 100 ಮನೆಗಳ ಒಳಾಂಗಣ ಧೂಮೀಕರಣ ಮಾಡುವಂತೆ ಸೂಚಿಸಿದರು.</p>.<p>ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭೀಮರಾಜರೆಡ್ಡಿ, ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಘವೇಂದ್ರ, ಸಮುದಾಯ ಆರೋಗ್ಯ ಅಧಿಕಾರಿ ಹುಸೇನ್ ಭಾಷ, ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿ ಶಿವಗಂಗಮ್ಮ ಹಾಗೂ ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>