‘ಧಾರವಾಡ,ಕಲಬುರ್ಗಿ, ಮೈಸೂರು, ರಾಯಚೂರು ಜಿಲ್ಲೆಯ ಸಿಂಧನೂರು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಹಾಗೂ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿಯಲ್ಲಿರುವ ಸಂಸ್ಥೆಗಳನ್ನು ಮುಚ್ಚಲು ಶಿಫಾರಸು ಮಾಡಲಾಗಿದೆ. ಇದರ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಸೇವಾ ಪೂರ್ವ ತರಬೇತಿ ನೀಡುತ್ತಿದ್ದ ಸಂಸ್ಥೆಗಳನ್ನೂ ತಾತ್ಕಾಲಿಕವಾಗಿ ಮುಚ್ಚಲು ಹೊರಟಿರುವುದು ಸರಿಯಲ್ಲ. ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ಕೊಡುವುದರ ಬದಲು ಅದನ್ನು ಬಲಹೀನ ಮಾಡಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.