<p>ಮರಿಯಮ್ಮನಹಳ್ಳಿ: ರಂಗಭೂಮಿ ಪರಂಪರೆಗೆ ತನ್ನದೇ ಆದ ಆಳವಾದ ಬೇರುಗಳಿದ್ದು, ಹೊಸ ಹೊಸ ಪ್ರಯೋಗಗಳ ಮೂಲಕ ಆ ಬೇರುಗಳನ್ನು ಗಟ್ಟಿಗಳಿಸುತ್ತಾ ಹೋಗಬೇಕಿದೆ ಎಂದು ಸಾಹಿತಿ ಪಿ.ಪೀರ್ ಬಾಷ ಹೇಳಿದರು.</p>.<p>ಸ್ಥಳೀಯ ದುರ್ಗಾದಾಸ್ ರಂಗಮಂದಿರದಲ್ಲಿ ಶುಕ್ರವಾರ ರಾತ್ರಿ ರಂಗಚೌಕಿ ಕಲಾ ಟ್ರಸ್ಟ್ನ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನೋಡುಗರಿಗೆ ತಿಳುವಳಿಕೆ ನೀಡುವ ಹಾಗೂ ಜಾಗೃತಿ ಮೂಡಿಸುವಂತಹ ಕೆಲಸವನ್ನು ನಾಟಕ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಾಟಕ ನೋಡುತ್ತಾ ವಾಸ್ತವಕ್ಕೆ, ವರ್ತಮಾನಕ್ಕೆ ಬರಬೇಕು ಎನ್ನುವ ರೀತಿಯಲ್ಲಿ ಹೊಸ ಅಲೆಯ ನಾಟಕಗಳು ಬರುತ್ತಿರುವುದು ಸ್ವಾಗತಾರ್ಹ ಸಂಗತಿ ಎಂದರು.</p>.<p>ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಂಗ ನಿರ್ದೇಶಕ ಬಿ.ಎಂ.ಎಸ್.ಪ್ರಭು, ಹಿರಿಯ ಕಲಾವಿದ ಕೆ.ಹನುಮಂತಪ್ಪ, ಪೌರಕಾರ್ಮಿಕ ಮಹಿಳೆ ಎಚ್.ಪದ್ಮಾವತಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.</p>.<p>ಕೆಪಿಸಿಪಿ ಸದಸ್ಯ ಕೆ.ಶಿವಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಜಾನಪದ ಕಲಾವಿದೆ ಪದ್ಮಶ್ರೀ ಮಂಜಮ್ಮ ಜೋಗತಿ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯ್ತಿ ಅಧ್ಯಕ್ಷ ಆದಿಮನಿ ಹುಸೇನ್ ಬಾಷಾ, ಸದಸ್ಯ ಕೆ.ಮಂಜುನಾಥ, ಪೂಜಾರ್ ಬಸವರಾಜ, ಟ್ರಸ್ಟ್ನ ಅಧ್ಯಕ್ಷ ಸರದಾರ್, ಕಾರ್ಯದರ್ಶಿ ಪಿ.ಪುಷ್ಪ ಇದ್ದರು.</p>.<p>ನಂತರ ಬೆಂಗಳೂರಿನ ಜಂಗಮ ಕಲೆಕ್ಟಿವ್ ಸಂಘಟನೆಯ ಕಲಾವಿದರು ‘ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ’ ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರಿಯಮ್ಮನಹಳ್ಳಿ: ರಂಗಭೂಮಿ ಪರಂಪರೆಗೆ ತನ್ನದೇ ಆದ ಆಳವಾದ ಬೇರುಗಳಿದ್ದು, ಹೊಸ ಹೊಸ ಪ್ರಯೋಗಗಳ ಮೂಲಕ ಆ ಬೇರುಗಳನ್ನು ಗಟ್ಟಿಗಳಿಸುತ್ತಾ ಹೋಗಬೇಕಿದೆ ಎಂದು ಸಾಹಿತಿ ಪಿ.ಪೀರ್ ಬಾಷ ಹೇಳಿದರು.</p>.<p>ಸ್ಥಳೀಯ ದುರ್ಗಾದಾಸ್ ರಂಗಮಂದಿರದಲ್ಲಿ ಶುಕ್ರವಾರ ರಾತ್ರಿ ರಂಗಚೌಕಿ ಕಲಾ ಟ್ರಸ್ಟ್ನ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನೋಡುಗರಿಗೆ ತಿಳುವಳಿಕೆ ನೀಡುವ ಹಾಗೂ ಜಾಗೃತಿ ಮೂಡಿಸುವಂತಹ ಕೆಲಸವನ್ನು ನಾಟಕ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಾಟಕ ನೋಡುತ್ತಾ ವಾಸ್ತವಕ್ಕೆ, ವರ್ತಮಾನಕ್ಕೆ ಬರಬೇಕು ಎನ್ನುವ ರೀತಿಯಲ್ಲಿ ಹೊಸ ಅಲೆಯ ನಾಟಕಗಳು ಬರುತ್ತಿರುವುದು ಸ್ವಾಗತಾರ್ಹ ಸಂಗತಿ ಎಂದರು.</p>.<p>ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಂಗ ನಿರ್ದೇಶಕ ಬಿ.ಎಂ.ಎಸ್.ಪ್ರಭು, ಹಿರಿಯ ಕಲಾವಿದ ಕೆ.ಹನುಮಂತಪ್ಪ, ಪೌರಕಾರ್ಮಿಕ ಮಹಿಳೆ ಎಚ್.ಪದ್ಮಾವತಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.</p>.<p>ಕೆಪಿಸಿಪಿ ಸದಸ್ಯ ಕೆ.ಶಿವಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಜಾನಪದ ಕಲಾವಿದೆ ಪದ್ಮಶ್ರೀ ಮಂಜಮ್ಮ ಜೋಗತಿ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯ್ತಿ ಅಧ್ಯಕ್ಷ ಆದಿಮನಿ ಹುಸೇನ್ ಬಾಷಾ, ಸದಸ್ಯ ಕೆ.ಮಂಜುನಾಥ, ಪೂಜಾರ್ ಬಸವರಾಜ, ಟ್ರಸ್ಟ್ನ ಅಧ್ಯಕ್ಷ ಸರದಾರ್, ಕಾರ್ಯದರ್ಶಿ ಪಿ.ಪುಷ್ಪ ಇದ್ದರು.</p>.<p>ನಂತರ ಬೆಂಗಳೂರಿನ ಜಂಗಮ ಕಲೆಕ್ಟಿವ್ ಸಂಘಟನೆಯ ಕಲಾವಿದರು ‘ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ’ ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>