<p><strong>ಬಳ್ಳಾರಿ:</strong> ಕಲುಷಿತ ನೀರಿನಿಂದ ಮತ್ತು ಕಲುಷಿತ ಆಹಾರ ಸೇವನೆಯಿಂದ ವಾಂತಿ–ಬೇಧಿ, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಕುದಿಸಿ, ಆರಿಸಿ, ಸೋಸಿದ ನೀರು ಕುಡಿಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದರು.</p>.<p>ಬಳ್ಳಾರಿ ತಾಲ್ಲೂಕಿನ ವೈ. ಕಗ್ಗಲ್ ಗ್ರಾಮದಲ್ಲಿ ಇತ್ತೀಚೆಗೆ ಶಂಕಿತ ವಾಂತಿ ಬೇಧಿ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು. </p>.<p>ವಾಂತಿ ಭೇದಿ ಪ್ರಕರಣಗಳು ಕಾಣಿಸಿಕೊಂಡಾಗ ಒಂದು ಲೀಟರ್ ನೀರಿಗೆ ಒಆರ್ಎಸ್ ಪುಡಿ ಹಾಕಿ, ಮಿಶ್ರಣ ಮಾಡಿ ಕುಡಿಯಬೇಕು ಎಂದು ಅವರು ಹೇಳಿದರು.</p>.<p>ಕಲುಷಿತ ನೀರಿನ ಸೇವನೆಯಿಂದ ಸಾಮಾನ್ಯವಾಗಿ ವಾಂತಿ-ಬೇದಿ, ಕಾಲರಾ, ಟೈಪಾಯಿಡ್, ಹೆಪಟೈಟಸ್-ಎ, ಗಿಯಾರ್ಡಿಯಾ, ಸಾಲ್ಮೋನೆಲ್ಲಾ ಶಿಗೆಲ್ಲೋಸಿಸ್, ಅಮೀಬಿಯಾಸಿಸ್, ಇ-ಕೋಲಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ತಿಳಿಸಿದರು. </p>.<p>ತಂಗಳು ಆಹಾರ ಸೇವಿಸಬಾರದು. ತಯಾರಿಸಿದ ಅಹಾರದ ಮೇಲೆ ಮುಚ್ಚಳ ಮುಚ್ಚಬೇಕು. ಕುಡಿಯುವ ನೀರು ತುಂಬಿದ ನಂತರ ಪಾತ್ರೆಗಳಿಗೆ ಮುಚ್ಚಳ ಹಾಕಬೇಕು. ಆದಷ್ಟು ನಳ ಇರುವ ಪಾತ್ರೆಗಳನ್ನು ಬಳಸಿ. ನೀರಿನಲ್ಲಿ ಕೈ ಇಡಬಾರದು. ಮಲ-ಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನೇ ಬಳಸಬೇಕು ಎಂದು ಅವರು ಇದೇ ವೇಳೆ ಸಲಹೆ ನೀಡಿದರು. </p>.<p>ವಾಂತಿ-ಭೇದಿ ಅಥವಾ ಕಾಲರಾ ಸೋಂಕಿತರಿಗೆ ಮನೆಯಲ್ಲಿಯೆ ತಯಾರಿಸಿದ ಗಂಜಿ, ಬೇಳೆ ತಿಳಿ, ನಿಂಬೆ ಪಾನಕ ಹಾಗೂ ಎಳೆನೀರು ಕೊಡುವುದನ್ನು ನಿಲ್ಲಿಸಬಾರದು. ಊಟದ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತಪ್ಪದೇ ತೊಳೆಯಬೇಕು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕಲುಷಿತ ನೀರಿನಿಂದ ಮತ್ತು ಕಲುಷಿತ ಆಹಾರ ಸೇವನೆಯಿಂದ ವಾಂತಿ–ಬೇಧಿ, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಕುದಿಸಿ, ಆರಿಸಿ, ಸೋಸಿದ ನೀರು ಕುಡಿಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದರು.</p>.<p>ಬಳ್ಳಾರಿ ತಾಲ್ಲೂಕಿನ ವೈ. ಕಗ್ಗಲ್ ಗ್ರಾಮದಲ್ಲಿ ಇತ್ತೀಚೆಗೆ ಶಂಕಿತ ವಾಂತಿ ಬೇಧಿ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು. </p>.<p>ವಾಂತಿ ಭೇದಿ ಪ್ರಕರಣಗಳು ಕಾಣಿಸಿಕೊಂಡಾಗ ಒಂದು ಲೀಟರ್ ನೀರಿಗೆ ಒಆರ್ಎಸ್ ಪುಡಿ ಹಾಕಿ, ಮಿಶ್ರಣ ಮಾಡಿ ಕುಡಿಯಬೇಕು ಎಂದು ಅವರು ಹೇಳಿದರು.</p>.<p>ಕಲುಷಿತ ನೀರಿನ ಸೇವನೆಯಿಂದ ಸಾಮಾನ್ಯವಾಗಿ ವಾಂತಿ-ಬೇದಿ, ಕಾಲರಾ, ಟೈಪಾಯಿಡ್, ಹೆಪಟೈಟಸ್-ಎ, ಗಿಯಾರ್ಡಿಯಾ, ಸಾಲ್ಮೋನೆಲ್ಲಾ ಶಿಗೆಲ್ಲೋಸಿಸ್, ಅಮೀಬಿಯಾಸಿಸ್, ಇ-ಕೋಲಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ತಿಳಿಸಿದರು. </p>.<p>ತಂಗಳು ಆಹಾರ ಸೇವಿಸಬಾರದು. ತಯಾರಿಸಿದ ಅಹಾರದ ಮೇಲೆ ಮುಚ್ಚಳ ಮುಚ್ಚಬೇಕು. ಕುಡಿಯುವ ನೀರು ತುಂಬಿದ ನಂತರ ಪಾತ್ರೆಗಳಿಗೆ ಮುಚ್ಚಳ ಹಾಕಬೇಕು. ಆದಷ್ಟು ನಳ ಇರುವ ಪಾತ್ರೆಗಳನ್ನು ಬಳಸಿ. ನೀರಿನಲ್ಲಿ ಕೈ ಇಡಬಾರದು. ಮಲ-ಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನೇ ಬಳಸಬೇಕು ಎಂದು ಅವರು ಇದೇ ವೇಳೆ ಸಲಹೆ ನೀಡಿದರು. </p>.<p>ವಾಂತಿ-ಭೇದಿ ಅಥವಾ ಕಾಲರಾ ಸೋಂಕಿತರಿಗೆ ಮನೆಯಲ್ಲಿಯೆ ತಯಾರಿಸಿದ ಗಂಜಿ, ಬೇಳೆ ತಿಳಿ, ನಿಂಬೆ ಪಾನಕ ಹಾಗೂ ಎಳೆನೀರು ಕೊಡುವುದನ್ನು ನಿಲ್ಲಿಸಬಾರದು. ಊಟದ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತಪ್ಪದೇ ತೊಳೆಯಬೇಕು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>