<p><strong>ಹೂವಿನಹಡಗಲಿ: </strong>ತಾಲ್ಲೂಕಿನ ಬ್ಯಾಲಹುಣ್ಸಿಯಲ್ಲಿ ಮೂರು ದಿನಗಳಿಂದ ಕುಡಿಯುವ ನೀರು ಪೂರೈಕೆ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದಾರೆ.</p>.<p>ಕತ್ತೆಬೆನ್ನೂರು ಇತರೆ ಐದು ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ವೆಲ್ಗೆ ಜೋಡಣೆ ಇರುವ ವಿದ್ಯುತ್ ಪರಿವರ್ತಕ ಸುಟ್ಟಿದ್ದು, ಮೂರು ದಿನಗಳಿಂದ ಯೋಜನೆ ಬಂದ್ ಆಗಿದೆ. ಯೋಜನೆ ವ್ಯಾಪ್ತಿಯ ಗ್ರಾಮಗಳಲ್ಲಿ ಕೊಳವೆಬಾವಿಯಿಂದ ನೀರು ಪೂರೈಸಲಾಗುತ್ತಿದ್ದು, ಬ್ಯಾಲಹುಣ್ಸಿಯಲ್ಲಿ ಬೋರ್ ವೆಲ್ ಸಂಪರ್ಕವನ್ನು ಈ ಹಿಂದೆ ಕಡಿತಗೊಳಿಸಿರುವುದರಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಉದ್ಬವಿಸಿದೆ.</p>.<p>ಗ್ರಾಮದ ಪಕ್ಕದಲ್ಲೇ ಹರಿಯುವ ತುಂಗಭದ್ರಾ ನದಿಗೆ ತೆರಳಿ ಜನರು ಕೊಡ, ಬಿಂದಿಗೆಗಳಲ್ಲಿ ನೀರು ತರುತ್ತಿದ್ದಾರೆ. ‘ಗ್ರಾಮಸ್ಥರು ನದಿಯ ಕಚ್ಚಾ ನೀರನ್ನೇ ಸೇವಿಸುತ್ತಿದ್ದಾರೆ. ಏನಾದರೂ ಅನಾರೋಗ್ಯ ಸಮಸ್ಯೆ ಉಂಟಾದರೆ ಯಾರು ಹೊಣೆ’ ಎಂದು ಗ್ರಾಮದ ಮುಖಂಡ ಬಿ.ಲಕ್ಷ್ಮಣ ಪ್ರಶ್ನಿಸಿದ್ದಾರೆ.</p>.<p>ಕೂಡಲೇ ಬಹುಗ್ರಾಮ ಯೋಜನೆಯ ವಿದ್ಯುತ್ ಪರಿವರ್ತಕ ದುರಸ್ತಿಗೊಳಿಸಿ ಶುದ್ದೀಕರಿಸಿದ ನೀರನ್ನು ಗ್ರಾಮಗಳಿಗೆ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ: </strong>ತಾಲ್ಲೂಕಿನ ಬ್ಯಾಲಹುಣ್ಸಿಯಲ್ಲಿ ಮೂರು ದಿನಗಳಿಂದ ಕುಡಿಯುವ ನೀರು ಪೂರೈಕೆ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದಾರೆ.</p>.<p>ಕತ್ತೆಬೆನ್ನೂರು ಇತರೆ ಐದು ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ವೆಲ್ಗೆ ಜೋಡಣೆ ಇರುವ ವಿದ್ಯುತ್ ಪರಿವರ್ತಕ ಸುಟ್ಟಿದ್ದು, ಮೂರು ದಿನಗಳಿಂದ ಯೋಜನೆ ಬಂದ್ ಆಗಿದೆ. ಯೋಜನೆ ವ್ಯಾಪ್ತಿಯ ಗ್ರಾಮಗಳಲ್ಲಿ ಕೊಳವೆಬಾವಿಯಿಂದ ನೀರು ಪೂರೈಸಲಾಗುತ್ತಿದ್ದು, ಬ್ಯಾಲಹುಣ್ಸಿಯಲ್ಲಿ ಬೋರ್ ವೆಲ್ ಸಂಪರ್ಕವನ್ನು ಈ ಹಿಂದೆ ಕಡಿತಗೊಳಿಸಿರುವುದರಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಉದ್ಬವಿಸಿದೆ.</p>.<p>ಗ್ರಾಮದ ಪಕ್ಕದಲ್ಲೇ ಹರಿಯುವ ತುಂಗಭದ್ರಾ ನದಿಗೆ ತೆರಳಿ ಜನರು ಕೊಡ, ಬಿಂದಿಗೆಗಳಲ್ಲಿ ನೀರು ತರುತ್ತಿದ್ದಾರೆ. ‘ಗ್ರಾಮಸ್ಥರು ನದಿಯ ಕಚ್ಚಾ ನೀರನ್ನೇ ಸೇವಿಸುತ್ತಿದ್ದಾರೆ. ಏನಾದರೂ ಅನಾರೋಗ್ಯ ಸಮಸ್ಯೆ ಉಂಟಾದರೆ ಯಾರು ಹೊಣೆ’ ಎಂದು ಗ್ರಾಮದ ಮುಖಂಡ ಬಿ.ಲಕ್ಷ್ಮಣ ಪ್ರಶ್ನಿಸಿದ್ದಾರೆ.</p>.<p>ಕೂಡಲೇ ಬಹುಗ್ರಾಮ ಯೋಜನೆಯ ವಿದ್ಯುತ್ ಪರಿವರ್ತಕ ದುರಸ್ತಿಗೊಳಿಸಿ ಶುದ್ದೀಕರಿಸಿದ ನೀರನ್ನು ಗ್ರಾಮಗಳಿಗೆ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>