<p><strong>ಕಂಪ್ಲಿ:</strong> ‘ಪೌತಿಯಾದ ಕುಟುಂಬದ ಸದಸ್ಯರಿಗೆ ಖಾತೆಯಾಗದಿರುವುದನ್ನು ಗಮನಿಸಿ ಸರ್ಕಾರವೇ ಪೌತಿ ಖಾತೆ ಆಂದೋಲನದ ಮೂಲಕ ಅನುಕೂಲ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು’ ಎಂದು ತಹಶೀಲ್ದಾರ್ ಜೂಗಲ ಮಂಜುನಾಯಕ ಹೇಳಿದರು. </p>.<p>ತಾಲ್ಲೂಕಿನ ಮೆಟ್ರಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಇ-ಪೌತಿ ಆಂದೋಲನ ಮತ್ತು ಪಿಂಚಣಿ ಅದಾಲತ್ಗೆ ಚಾಲನೆ ನೀಡಿ, ಅಗತ್ಯ ದಾಖಲೆಗಳನ್ನು ಸ್ಥಳೀಯವಾಗಿಯೇ ಹಾಜರುಪಡಿಸಿ ಕುಟುಂಬದ ಎಲ್ಲರೂ ಒಮ್ಮತದಿಂದ ನಿರ್ಧಾರ ಮಾಡಿ ಆಸ್ತಿಯ ಇ-ಪೌತಿ ಖಾತೆ ಮಾಡಿಸಿಕೊಳ್ಳುವುದರಿಂದ ಕಚೇರಿಗೆ ಅಲೆಯುವುದು ತಪ್ಪುತ್ತದೆ ಎಂದರು.</p>.<p>ಪ್ರಸ್ತುತ ಗ್ರಾಮದಲ್ಲಿ 29 ಪೌತಿ ಅರ್ಜಿ ಸ್ವೀಕರಿಸಿದ್ದು, 11 ಅರ್ಜಿಗಳು ಸ್ಥಳದಲ್ಲಿಯೇ ಪರಿಶೀಲಿಸಿ ಪೌತಿ ಖಾತೆಗೆ ಅಳವಡಿಸಲಾಯಿತು. ಉಳಿದ 18 ಅರ್ಜಿಗಳು ಮರಣ ಪ್ರಮಾಣಪತ್ರ ಇಲ್ಲದ ಕಾರಣ ಮಹಜರ್ ಮಾಡಲು ಸೂಕ್ತ ದಾಖಲೆ ಪಡೆಯಲಾಗಿದೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ ನಾಗರಾಜ ಮತ್ತು ಸದಸ್ಯರು, ಕಂದಾಯ ನಿರೀಕ್ಷಕ ವೈ.ಎಂ. ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ಕೆ.ಎಂ. ಶಿವರುದ್ರಯ್ಯ, ಮುಖಂಡರಾದ ಹೊನ್ನಳ್ಳಿ ಗಂಗಾಧರ, ಹೊನ್ನಳ್ಳಿ ಶಿವಪುತ್ರಪ್ಪ, ಹೊಸಕೋಟೆ ಜಗದೀಶ್, ಸಿ.ಡಿ. ಮಹದೇವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ‘ಪೌತಿಯಾದ ಕುಟುಂಬದ ಸದಸ್ಯರಿಗೆ ಖಾತೆಯಾಗದಿರುವುದನ್ನು ಗಮನಿಸಿ ಸರ್ಕಾರವೇ ಪೌತಿ ಖಾತೆ ಆಂದೋಲನದ ಮೂಲಕ ಅನುಕೂಲ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು’ ಎಂದು ತಹಶೀಲ್ದಾರ್ ಜೂಗಲ ಮಂಜುನಾಯಕ ಹೇಳಿದರು. </p>.<p>ತಾಲ್ಲೂಕಿನ ಮೆಟ್ರಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಇ-ಪೌತಿ ಆಂದೋಲನ ಮತ್ತು ಪಿಂಚಣಿ ಅದಾಲತ್ಗೆ ಚಾಲನೆ ನೀಡಿ, ಅಗತ್ಯ ದಾಖಲೆಗಳನ್ನು ಸ್ಥಳೀಯವಾಗಿಯೇ ಹಾಜರುಪಡಿಸಿ ಕುಟುಂಬದ ಎಲ್ಲರೂ ಒಮ್ಮತದಿಂದ ನಿರ್ಧಾರ ಮಾಡಿ ಆಸ್ತಿಯ ಇ-ಪೌತಿ ಖಾತೆ ಮಾಡಿಸಿಕೊಳ್ಳುವುದರಿಂದ ಕಚೇರಿಗೆ ಅಲೆಯುವುದು ತಪ್ಪುತ್ತದೆ ಎಂದರು.</p>.<p>ಪ್ರಸ್ತುತ ಗ್ರಾಮದಲ್ಲಿ 29 ಪೌತಿ ಅರ್ಜಿ ಸ್ವೀಕರಿಸಿದ್ದು, 11 ಅರ್ಜಿಗಳು ಸ್ಥಳದಲ್ಲಿಯೇ ಪರಿಶೀಲಿಸಿ ಪೌತಿ ಖಾತೆಗೆ ಅಳವಡಿಸಲಾಯಿತು. ಉಳಿದ 18 ಅರ್ಜಿಗಳು ಮರಣ ಪ್ರಮಾಣಪತ್ರ ಇಲ್ಲದ ಕಾರಣ ಮಹಜರ್ ಮಾಡಲು ಸೂಕ್ತ ದಾಖಲೆ ಪಡೆಯಲಾಗಿದೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ ನಾಗರಾಜ ಮತ್ತು ಸದಸ್ಯರು, ಕಂದಾಯ ನಿರೀಕ್ಷಕ ವೈ.ಎಂ. ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ಕೆ.ಎಂ. ಶಿವರುದ್ರಯ್ಯ, ಮುಖಂಡರಾದ ಹೊನ್ನಳ್ಳಿ ಗಂಗಾಧರ, ಹೊನ್ನಳ್ಳಿ ಶಿವಪುತ್ರಪ್ಪ, ಹೊಸಕೋಟೆ ಜಗದೀಶ್, ಸಿ.ಡಿ. ಮಹದೇವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>