ಶನಿವಾರ ಮುಂಜಾನೆ 6.30ಕ್ಕೆ ಬಳ್ಳಾರಿಗೆ ಬಂದಿದ್ದ ಇ.ಡಿ ಅಧಿಕಾರಿಗಳ ತಂಡ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿತ್ತು.
ನಗರದ ಮೋಕಾ ರಸ್ತೆಯಲ್ಲಿರುವ ರಾಘವೇಂದ್ರ ಎಂಟರ್ಪ್ರೈಸ್ ಹಾಗೂ ಗ್ರಾನೈಟ್ ಕಂಪನಿಯಲ್ಲೂ ಶೋಧ ನಡೆಯುತ್ತಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರ ತನಿಖೆಯ ಭಾಗವಾಗಿ ಭರತ್ ರೆಡ್ಡಿ ಮೇಲೆ ಇ.ಡಿ ದಾಳಿ ನಡೆಸಿರುವುದಾಗಿ ಉನ್ನತ ಮೂಲಗಳು ಮಾಹಿತಿ ನೀಡಿವೆ.