<p><strong>ಬಳ್ಳಾರಿ</strong>: ‘ವಿದ್ಯುತ್ ಖಾಸಗೀಕರಣ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಯ ವಿರುದ್ಧ ಇದೇ 26 ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ವಲಯದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ‘ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘ’ದ ರಾಜ್ಯ ಕಾರ್ಯದರ್ಶಿ ವಿ.ಜ್ಞಾನಮೂರ್ತಿ ಹೇಳಿದರು. </p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ ದೇಶಾದ್ಯಂತ ಗ್ರಾಹಕರ ಆಂದೋಲವನ್ನು ಬೆಳೆಸುತ್ತಿದೆ. ಅದರ ಭಾಗವಾಗಿ ನಾಲ್ಕು ಭಾಗಗಳಲ್ಲಿ ವಲಯವಾರು ಸಮಾವೇಶವನ್ನು ಸಂಘಟಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಜರುಗುವ ಸಮಾವೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ಪುದುಚೇರಿ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳ ಗ್ರಾಹಕರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಆಲ್ ಇಂಡಿಯಾ ಎಲೆಕ್ಟ್ರಿಸಿಟಿ ಕನ್ಸ್ಯೂಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಸ್ವಪನ್ ಘೋಷ್ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹರಿಯಾಣ ವಿದ್ಯುತ್ ಮಂಡಳಿಯ ಮಾಜಿ ಅಧ್ಯಕ್ಷ ಎಂ.ಜಿ.ದೇವಸಹಾಯಂ, ಆಂಧ್ರಪ್ರದೇಶದ ಮಾಜಿ ಸಂಸದ ಹಾಗೂ ಸಂಯುಕ್ತ ಕೃಷಿ ಮೋರ್ಚಾ ಸಂಚಾಲಕ ವಡ್ಡೆ ಸೋಭನಾದ್ರೀಶ್ವರ ಸೇರಿದಂತೆ ವಿವಿಧ ರಾಜ್ಯಗಳ ಹೋರಾಟಗಾರರು ಭಾಗವಹಿಸುವರು’ ಎಂದು ತಿಳಿಸಿದರು.</p>.<p>‘ವಿದ್ಯುತ್ ಜನರ ಹಕ್ಕು ಹಾಗೂ ಅಗತ್ಯ ಸೇವೆ. ಅದನ್ನು ಲಾಭಕೋರರ ವ್ಯಾಪಾರ ಸರಕಾಗಲು ಬಿಡಬಾರದು. ದೇಶ ಸ್ವಾತಂತ್ರ್ಯಗೊಂಡ ಬಳಿಕ ವಿದ್ಯುತ್ನ್ನು ಉತ್ಪಾದಿಸಿ ಲಾಭ ಮತ್ತು ನಷ್ಟ ನೋಡದೆ ಅದನ್ನು ಕಟ್ಟಕಡೆಯ ಗ್ರಾಹಕರಿಗೂ ಲಭಿಸುವಂತೆ ಕನಿಷ್ಠ ದರದಲ್ಲಿ ಒದಗಿಸುವುದು ಸರ್ಕಾರಗಳ ಆದ್ಯತೆಯಾಗಿತ್ತು. ಆದರೆ, 90ರ ದಶಕದಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಜಾಗತೀಕರಣ ಹಾಗೂ ಉದಾರೀಕರಣ ನೀತಿಗಳನ್ನು ಜಾರಿಗೊಳಿಸಿದ ಬಳಿಕ ವಿದ್ಯುತ್ ಬಳಕೆಯ ಧೋರಣೆಯೇ ಬದಲಾಯಿತು’ ಎಂದರು. </p>.<p>‘2003ರಲ್ಲಿ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಖಾಸಗಿ ಕಂಪನಿಗಳಿಗೆ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಅವಕಾಶ ನೀಡಲಾಯಿತು. ಇದರ ಪರಿಣಾಮವಾಗಿ ದೇಶದ ಶೇ.50ಕ್ಕೂ ಹೆಚ್ಚು ವಿದ್ಯುತ್ ಕಂಪನಿಗಳು ಖಾಸಗಿಯವರ ಹಿಡಿತ ಸೇರಿದವು. ಇತ್ತೀಚೆಗೆ ವಿದ್ಯುತ್ ಮಸೂದೆ 2022 ಮೂಲಕ ಹೊಸ ತಿದ್ದುಪಡಿ ಮಾಡಿ ಜನರ ವಿರೋಧದ ನಡುವೆಯೂ ಸಂಸತ್ತಿನಲ್ಲಿ ತರಾತುರಿಯಲ್ಲಿ ಮಂಡಿಸಿ ವಿದ್ಯುತ್ ಸರಬರಾಜನ್ನು ಸಹ ಖಾಸಗಿ ಕಂಪನಿಗಳ ಕೈಗೆ ಒಪ್ಪಿಸಲು ಕೇಂದ್ರ ಸರ್ಕಾರ ಹೊರಟಿದೆ. ಇದರಿಂದ ಸ್ಮಾರ್ಟ್ ಮೀಟರ್, ಪ್ರಿಪೇಡ್ ಮೀಟರ್ ಎಂಬ ಹೊಸ ಕ್ರಮಗಳನ್ನು ಜಾರಿಗೆ ತರಲು ಬಹುತೇಕ ಎಲ್ಲ ರಾಜ್ಯಗಳು ಸಜ್ಜಾಗಿವೆ. ರಾಜ್ಯ ಸರ್ಕಾರವೂ ಸ್ಮಾರ್ಟ್ ಮೀಟರ್ ಅಳವಡಿಕೆ, ವಾಣಿಜ್ಯ ದರ ಏರಿಕೆ ಕ್ರಮಕ್ಕೆ ಮುಂದಾಗಿದೆ. ನೌಕರರಿಗೆ ಗ್ರಾಚ್ಯೂಟಿ ಕೊಡಬೇಕಾದ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು ಅದನ್ನು ಪ್ರತಿ ಯೂನಿಟ್ಗೆ 0.36 ಪೈಸೆ ದರ ವಿಧಿಸುವ ಮೂಲಕ ಗ್ರಾಹಕರ ಹೆಗಲಿಗೆ ವರ್ಗಾಯಿಸಿದೆ. ಹೀಗಾಗಿ ಸರ್ಕಾರದ ಸ್ಮಾರ್ಟ್ ಮೀಟರ್ ಅಳವಡಿಕೆ ನೀತಿಯನ್ನು ಖಂಡಿಸಿ, ಬೆಂಗಳೂರಿನಲ್ಲಿ ದಕ್ಷಿಣ ಭಾರತ ವಲಯದ ವಿದ್ಯುತ್ ಬಳಕೆದಾರರ ಸಮಾವೇಶವನ್ನು ನಡಸಲಾಗುತ್ತಿದೆ’ ಎಂದು ಜ್ಞಾನಮೂರ್ತಿ ತಿಳಿಸಿದರು.</p>.<p>ಸಂಘಟನೆಯ ಪ್ರಮುಖರಾದ ಕೆ.ಸೋಮಶೇಖರಗೌಡ ಹಾಗೂ ಗುರಳ್ಳಿ ರಾಜ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ವಿದ್ಯುತ್ ಖಾಸಗೀಕರಣ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಯ ವಿರುದ್ಧ ಇದೇ 26 ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ವಲಯದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ‘ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘ’ದ ರಾಜ್ಯ ಕಾರ್ಯದರ್ಶಿ ವಿ.ಜ್ಞಾನಮೂರ್ತಿ ಹೇಳಿದರು. </p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ ದೇಶಾದ್ಯಂತ ಗ್ರಾಹಕರ ಆಂದೋಲವನ್ನು ಬೆಳೆಸುತ್ತಿದೆ. ಅದರ ಭಾಗವಾಗಿ ನಾಲ್ಕು ಭಾಗಗಳಲ್ಲಿ ವಲಯವಾರು ಸಮಾವೇಶವನ್ನು ಸಂಘಟಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಜರುಗುವ ಸಮಾವೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ಪುದುಚೇರಿ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳ ಗ್ರಾಹಕರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಆಲ್ ಇಂಡಿಯಾ ಎಲೆಕ್ಟ್ರಿಸಿಟಿ ಕನ್ಸ್ಯೂಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಸ್ವಪನ್ ಘೋಷ್ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹರಿಯಾಣ ವಿದ್ಯುತ್ ಮಂಡಳಿಯ ಮಾಜಿ ಅಧ್ಯಕ್ಷ ಎಂ.ಜಿ.ದೇವಸಹಾಯಂ, ಆಂಧ್ರಪ್ರದೇಶದ ಮಾಜಿ ಸಂಸದ ಹಾಗೂ ಸಂಯುಕ್ತ ಕೃಷಿ ಮೋರ್ಚಾ ಸಂಚಾಲಕ ವಡ್ಡೆ ಸೋಭನಾದ್ರೀಶ್ವರ ಸೇರಿದಂತೆ ವಿವಿಧ ರಾಜ್ಯಗಳ ಹೋರಾಟಗಾರರು ಭಾಗವಹಿಸುವರು’ ಎಂದು ತಿಳಿಸಿದರು.</p>.<p>‘ವಿದ್ಯುತ್ ಜನರ ಹಕ್ಕು ಹಾಗೂ ಅಗತ್ಯ ಸೇವೆ. ಅದನ್ನು ಲಾಭಕೋರರ ವ್ಯಾಪಾರ ಸರಕಾಗಲು ಬಿಡಬಾರದು. ದೇಶ ಸ್ವಾತಂತ್ರ್ಯಗೊಂಡ ಬಳಿಕ ವಿದ್ಯುತ್ನ್ನು ಉತ್ಪಾದಿಸಿ ಲಾಭ ಮತ್ತು ನಷ್ಟ ನೋಡದೆ ಅದನ್ನು ಕಟ್ಟಕಡೆಯ ಗ್ರಾಹಕರಿಗೂ ಲಭಿಸುವಂತೆ ಕನಿಷ್ಠ ದರದಲ್ಲಿ ಒದಗಿಸುವುದು ಸರ್ಕಾರಗಳ ಆದ್ಯತೆಯಾಗಿತ್ತು. ಆದರೆ, 90ರ ದಶಕದಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಜಾಗತೀಕರಣ ಹಾಗೂ ಉದಾರೀಕರಣ ನೀತಿಗಳನ್ನು ಜಾರಿಗೊಳಿಸಿದ ಬಳಿಕ ವಿದ್ಯುತ್ ಬಳಕೆಯ ಧೋರಣೆಯೇ ಬದಲಾಯಿತು’ ಎಂದರು. </p>.<p>‘2003ರಲ್ಲಿ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಖಾಸಗಿ ಕಂಪನಿಗಳಿಗೆ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಅವಕಾಶ ನೀಡಲಾಯಿತು. ಇದರ ಪರಿಣಾಮವಾಗಿ ದೇಶದ ಶೇ.50ಕ್ಕೂ ಹೆಚ್ಚು ವಿದ್ಯುತ್ ಕಂಪನಿಗಳು ಖಾಸಗಿಯವರ ಹಿಡಿತ ಸೇರಿದವು. ಇತ್ತೀಚೆಗೆ ವಿದ್ಯುತ್ ಮಸೂದೆ 2022 ಮೂಲಕ ಹೊಸ ತಿದ್ದುಪಡಿ ಮಾಡಿ ಜನರ ವಿರೋಧದ ನಡುವೆಯೂ ಸಂಸತ್ತಿನಲ್ಲಿ ತರಾತುರಿಯಲ್ಲಿ ಮಂಡಿಸಿ ವಿದ್ಯುತ್ ಸರಬರಾಜನ್ನು ಸಹ ಖಾಸಗಿ ಕಂಪನಿಗಳ ಕೈಗೆ ಒಪ್ಪಿಸಲು ಕೇಂದ್ರ ಸರ್ಕಾರ ಹೊರಟಿದೆ. ಇದರಿಂದ ಸ್ಮಾರ್ಟ್ ಮೀಟರ್, ಪ್ರಿಪೇಡ್ ಮೀಟರ್ ಎಂಬ ಹೊಸ ಕ್ರಮಗಳನ್ನು ಜಾರಿಗೆ ತರಲು ಬಹುತೇಕ ಎಲ್ಲ ರಾಜ್ಯಗಳು ಸಜ್ಜಾಗಿವೆ. ರಾಜ್ಯ ಸರ್ಕಾರವೂ ಸ್ಮಾರ್ಟ್ ಮೀಟರ್ ಅಳವಡಿಕೆ, ವಾಣಿಜ್ಯ ದರ ಏರಿಕೆ ಕ್ರಮಕ್ಕೆ ಮುಂದಾಗಿದೆ. ನೌಕರರಿಗೆ ಗ್ರಾಚ್ಯೂಟಿ ಕೊಡಬೇಕಾದ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು ಅದನ್ನು ಪ್ರತಿ ಯೂನಿಟ್ಗೆ 0.36 ಪೈಸೆ ದರ ವಿಧಿಸುವ ಮೂಲಕ ಗ್ರಾಹಕರ ಹೆಗಲಿಗೆ ವರ್ಗಾಯಿಸಿದೆ. ಹೀಗಾಗಿ ಸರ್ಕಾರದ ಸ್ಮಾರ್ಟ್ ಮೀಟರ್ ಅಳವಡಿಕೆ ನೀತಿಯನ್ನು ಖಂಡಿಸಿ, ಬೆಂಗಳೂರಿನಲ್ಲಿ ದಕ್ಷಿಣ ಭಾರತ ವಲಯದ ವಿದ್ಯುತ್ ಬಳಕೆದಾರರ ಸಮಾವೇಶವನ್ನು ನಡಸಲಾಗುತ್ತಿದೆ’ ಎಂದು ಜ್ಞಾನಮೂರ್ತಿ ತಿಳಿಸಿದರು.</p>.<p>ಸಂಘಟನೆಯ ಪ್ರಮುಖರಾದ ಕೆ.ಸೋಮಶೇಖರಗೌಡ ಹಾಗೂ ಗುರಳ್ಳಿ ರಾಜ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>