ತೋರಣಗಲ್ಲು: ಇಲ್ಲಿಗೆ ಸಮೀಪದ ಕುಡುತಿಯ ಬಿಟಿಪಿಎಸ್ನ ಯುಸಿಬಿ ಬಾಯ್ಲರ್ ಘಟಕದ ಸೇಫ್ಟಿವಾಲ್ ವಿದ್ಯುತ್ ಅವಘಡದಿಂದ ಸ್ಫೋಟಗೊಂಡು ಏಳುಬೆಂಚಿ ಗ್ರಾಮದ ಗುತ್ತಿಗೆ ಕಾರ್ಮಿಕ ಮಂಜುನಾಥ (೨೭) ಎನ್ನುವವರ ತಲೆಯ ಭಾಗದಲ್ಲಿ ಗಂಭೀರವಾಗಿ ಗಾಯವಾಗಿದೆ. ಘಟನೆಯು ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಬಿಟಿಪಿಎಸ್ ಘಟಕದಲ್ಲಿ ಪ್ರಥಮ ಚಿಕಿತ್ಸೆ ನೀಡಿ ತೋರಣಗಲ್ಲಿನ ಜಿಂದಾಲ್ ಸಂಜೀವಿನಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ ಎನ್ನುವ ಮಾಹಿತಿಯು ಮೂಲಗಳಿಂದ ತಿಳಿದುಬಂದಿದೆ.