<p><strong>ಕಂಪ್ಲಿ:</strong> ತಾಲ್ಲೂಕಿನ ಎಮ್ಮಿಗನೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿರುವುದಾಗಿ ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.</p>.<p>ಎಮ್ಮಿಗನೂರು ಗ್ರಾಮದಲ್ಲಿ ಗ್ರಾಮಪಥ ಯೋಜನೆಯಡಿ ₹ 6.10ಕೋಟಿ ವೆಚ್ಚದ ಎಮ್ಮಿಗನೂರು-ಇಟಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ, ಗ್ರಾಮದಲ್ಲಿ ಎಪಿಎಂಸಿ ಮಾರುಕಟ್ಟೆ ಮತ್ತು 30 ಹಾಸಿಗೆಗಳ ಸೌಲಭ್ಯವಿರುವ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.</p>.<p>‘ಗ್ರಾಮದ ಇಟಗಿ ರಸ್ತೆಯನ್ನು 1 ಕಿ.ಮೀ.ನಷ್ಟು ಸಿಸಿ ರಸ್ತೆಯಾಗಿ ಈಗಾಗಲೇ ಅಭಿವೃದ್ಧಿಗೊಳಿಸಿದ್ದು, ಉಳಿದ ರಸ್ತೆಯನ್ನು ಬಿ.ಟಿ ರಸ್ತೆಯಾಗಿ ನಿರ್ಮಿಸಲಾಗುವುದು’ ಎಂದರು.</p>.<p>‘ರೈತರ ಅನುಕೂಲಕ್ಕಾಗಿ ₹ 34 ಕೋಟಿ ವೆಚ್ಚದಲ್ಲಿ ಮಾಗಾಣಿ ರಸ್ತೆಯ ಅಭಿವೃದ್ಧಿ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಜೆ. ಶಾರದಾ, ಉಪಾಧ್ಯಕ್ಷ ಗಾದಿಲಿಂಗಪ್ಪ, ಸದಸ್ಯರಾದ ಸಾಯಿಬಣ್ಣ, ಜಯರಾಮ್, ಪಿಎಂಜಿಎಸ್ವೈ ಜೆಇ ಪ್ರಸನ್ನಾ, ಪಿಡಿಒ ತಾರು ಲಕ್ಷ್ಮಣನಾಯ್ಕ, ಕಾರ್ಯದರ್ಶಿ ದೊಡ್ಡಬಸಪ್ಪ, ಮುಖಂಡರಾದ ಎಳ್ಳಾರ್ಥಿ ರಾಘವೇಂದ್ರ ರೆಡ್ಡಿ, ಎಚ್. ಜಡೆಪ್ಪ, ವೆಂಕಟರಾಜು, ರಾಮಾಂಜನಿ, ವಿ. ವೀರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತಾಲ್ಲೂಕಿನ ಎಮ್ಮಿಗನೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿರುವುದಾಗಿ ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.</p>.<p>ಎಮ್ಮಿಗನೂರು ಗ್ರಾಮದಲ್ಲಿ ಗ್ರಾಮಪಥ ಯೋಜನೆಯಡಿ ₹ 6.10ಕೋಟಿ ವೆಚ್ಚದ ಎಮ್ಮಿಗನೂರು-ಇಟಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ, ಗ್ರಾಮದಲ್ಲಿ ಎಪಿಎಂಸಿ ಮಾರುಕಟ್ಟೆ ಮತ್ತು 30 ಹಾಸಿಗೆಗಳ ಸೌಲಭ್ಯವಿರುವ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.</p>.<p>‘ಗ್ರಾಮದ ಇಟಗಿ ರಸ್ತೆಯನ್ನು 1 ಕಿ.ಮೀ.ನಷ್ಟು ಸಿಸಿ ರಸ್ತೆಯಾಗಿ ಈಗಾಗಲೇ ಅಭಿವೃದ್ಧಿಗೊಳಿಸಿದ್ದು, ಉಳಿದ ರಸ್ತೆಯನ್ನು ಬಿ.ಟಿ ರಸ್ತೆಯಾಗಿ ನಿರ್ಮಿಸಲಾಗುವುದು’ ಎಂದರು.</p>.<p>‘ರೈತರ ಅನುಕೂಲಕ್ಕಾಗಿ ₹ 34 ಕೋಟಿ ವೆಚ್ಚದಲ್ಲಿ ಮಾಗಾಣಿ ರಸ್ತೆಯ ಅಭಿವೃದ್ಧಿ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಜೆ. ಶಾರದಾ, ಉಪಾಧ್ಯಕ್ಷ ಗಾದಿಲಿಂಗಪ್ಪ, ಸದಸ್ಯರಾದ ಸಾಯಿಬಣ್ಣ, ಜಯರಾಮ್, ಪಿಎಂಜಿಎಸ್ವೈ ಜೆಇ ಪ್ರಸನ್ನಾ, ಪಿಡಿಒ ತಾರು ಲಕ್ಷ್ಮಣನಾಯ್ಕ, ಕಾರ್ಯದರ್ಶಿ ದೊಡ್ಡಬಸಪ್ಪ, ಮುಖಂಡರಾದ ಎಳ್ಳಾರ್ಥಿ ರಾಘವೇಂದ್ರ ರೆಡ್ಡಿ, ಎಚ್. ಜಡೆಪ್ಪ, ವೆಂಕಟರಾಜು, ರಾಮಾಂಜನಿ, ವಿ. ವೀರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>