<p><strong>ಮರಿಯಮ್ಮನಹಳ್ಳಿ:</strong> ಬೈಕ್ ಅಪಘಾತದಲ್ಲಿ ತೀವ್ರಗಾಯಗೊಂಡ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಿಂದ ಬಳ್ಳಾರಿ ವಿಮ್ಸ್ಗೆ ಸಾಗಿಸುವ ಮಾರ್ಗ ಮದ್ಯೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.</p>.<p>ಸಂಡೂರು ತಾಲ್ಲೂಕಿನ ಕುಡಿತಿನಿ ಗ್ರಾಮದ ನಿವಾಸಿ ಹಾಗೂ ಹೊಸಪೇಟೆಯ ಪಿಡಿಐಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಪ್ರಸನ್ನ(22) ಮೃತಪಟ್ಟವರು.</p>.<p>ವಿದ್ಯಾರ್ಥಿ ಪ್ರಸನ್ನ ಕೂಡ್ಲಿಗಿಯ ವಿಂಡ್ ಫ್ಯಾನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ಹೊಸಪೇಟೆಯ ಪಿಡಿಐಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದನು. ಮಂಗಳವಾರ ಬೆಳಿಗ್ಗೆ ಕೂಡ್ಲಿಗಿಯಿಂದ ಹೊಸಪೇಟೆಗೆ ಯಮಹ ಬೈಕ್ನಲ್ಲಿ ಬರುತ್ತಿದ್ದಾಗ, ಪಟ್ಟಣ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರ ಗುಂಡಾ ಸಸ್ಯೋದ್ಯಾನದ ಬಳಿಯ ತುಂಗಭದ್ರ ಜಲಾಶಯದ ಹಿನ್ನೀರಿನ ಸುರಂಗ ಮಾರ್ಗದ(ಟನಲ್) ಬಳಿ ಅಜಾಗರೂಕತೆ ಹಾಗೂ ಅತಿವೇಗದಿಂದ ಬೈಕ್ ಅನ್ನು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು 10ಅಡಿಗೂ ಹೆಚ್ಚು ಆಳವಾದ ಗುಂಡಿಗೆ ಬಿದ್ದಿದ್ದಾನೆ.</p>.<p>ಅಪಘಾತದಲ್ಲಿ ತೀವ್ರಗಾಯಗೊಂಡ ಪ್ರಸನ್ನ ಅವರನ್ನು ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ಗೆ ಸಾಗಿಸುವ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ:</strong> ಬೈಕ್ ಅಪಘಾತದಲ್ಲಿ ತೀವ್ರಗಾಯಗೊಂಡ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಿಂದ ಬಳ್ಳಾರಿ ವಿಮ್ಸ್ಗೆ ಸಾಗಿಸುವ ಮಾರ್ಗ ಮದ್ಯೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.</p>.<p>ಸಂಡೂರು ತಾಲ್ಲೂಕಿನ ಕುಡಿತಿನಿ ಗ್ರಾಮದ ನಿವಾಸಿ ಹಾಗೂ ಹೊಸಪೇಟೆಯ ಪಿಡಿಐಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಪ್ರಸನ್ನ(22) ಮೃತಪಟ್ಟವರು.</p>.<p>ವಿದ್ಯಾರ್ಥಿ ಪ್ರಸನ್ನ ಕೂಡ್ಲಿಗಿಯ ವಿಂಡ್ ಫ್ಯಾನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ಹೊಸಪೇಟೆಯ ಪಿಡಿಐಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದನು. ಮಂಗಳವಾರ ಬೆಳಿಗ್ಗೆ ಕೂಡ್ಲಿಗಿಯಿಂದ ಹೊಸಪೇಟೆಗೆ ಯಮಹ ಬೈಕ್ನಲ್ಲಿ ಬರುತ್ತಿದ್ದಾಗ, ಪಟ್ಟಣ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರ ಗುಂಡಾ ಸಸ್ಯೋದ್ಯಾನದ ಬಳಿಯ ತುಂಗಭದ್ರ ಜಲಾಶಯದ ಹಿನ್ನೀರಿನ ಸುರಂಗ ಮಾರ್ಗದ(ಟನಲ್) ಬಳಿ ಅಜಾಗರೂಕತೆ ಹಾಗೂ ಅತಿವೇಗದಿಂದ ಬೈಕ್ ಅನ್ನು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು 10ಅಡಿಗೂ ಹೆಚ್ಚು ಆಳವಾದ ಗುಂಡಿಗೆ ಬಿದ್ದಿದ್ದಾನೆ.</p>.<p>ಅಪಘಾತದಲ್ಲಿ ತೀವ್ರಗಾಯಗೊಂಡ ಪ್ರಸನ್ನ ಅವರನ್ನು ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ಗೆ ಸಾಗಿಸುವ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>