<p><strong>ಕಂಪ್ಲಿ: ‘</strong>ರೈತ ಮತ್ತು ಸೈನಿಕರು ದೇಶದ ಬೆನ್ನೆಲುಬು ಇದ್ದಂತೆ. ಇವರನ್ನು ಆದರಿಸುವುದು ಎಲ್ಲರ ಆದ್ಯ ಕರ್ತವ್ಯ’ ಎಂದು ಎಮ್ಮಿಗನೂರಿನ ಹಂಪಿಸಾವಿರ ಮಠದ ವಾಮದೇವ ಮಹಾಂತ ಶಿವಾಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಹಂಪಿಸಾವಿರ ದೇವರ ಮಹಾಂತರ ಮಠದಲ್ಲಿ ಲಿಂಗೈಕ್ಯ ಸಿದ್ಧಲಿಂಗ ಮಹಾಂತ ಶಿವಾಚಾರ್ಯರ 24ನೇ ಸಂಸ್ಮರಣೋತ್ಸವ ಅಂಗವಾಗಿ ನಡೆದ ರೈತ, ಸೈನಿಕ, ಮಠಾಧೀಶರ ತುಲಾಭಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಸೈನಿಕರು ದೇಶದ ಗಡಿ ಸಂರಕ್ಷಿಸಿದರೆ, ರೈತರು ನಮ್ಮೆಲ್ಲರ ಹೊಟ್ಟೆ ತುಂಬಿಸುತ್ತಾರೆ. ಇವರಿಬ್ಬರ ಪರಿಶ್ರಮದಿಂದ ದೇಶದ ಜನತೆ ಶಾಂತಿ, ನೆಮ್ಮದಿ, ಸಂತೃಪ್ತಿಯಿಂದ ಬಾಳಲು ಸಾಧ್ಯವಾಗಿದೆ’ ಎಂದರು.</p>.<p>‘ರೈತನಿಗೆ ಕೇವಲ ಗೊಬ್ಬರ, ಬೀಜ ಒದಗಿಸಿದರೆ ಸಾಲದು, ಅವರು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸಕಾಲಕ್ಕೆ ಯೋಗ್ಯ ಬೆಲೆ ದೊರೆಯುವಂತಾಗಬೇಕು’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಜಂಗಮ ವಟುಗಳಿಗೆ ಅಯ್ಯಾಚಾರ ದೀಕ್ಷೆ ಮತ್ತು ಶಿವಶಕ್ತಿ ಅಕ್ಕನ ಬಳಗಕ್ಕೆ ಚಾಲನೆ ನೀಡಲಾಯಿತು. </p>.<p>ಕೃಷಿ ಸೇವೆಗೆ ಶಾಲಿಗನೂರು ರೈತ ಶ್ರೀನಿವಾಸ ತಿಪ್ಪಣ್ಣ ವಡ್ಡರ, ದೇಶಸೇವೆಗೆ ಮಾಜಿ ಯೋಧ ಎಮ್ಮಿಗನೂರಿನ ಶೇಖ್ಸಾಬ್, ಈಶ ಸೇವೆಗೆ ಚೌಡಯ್ಯದಾನಪುರದ ಚಿತ್ರಶೇಖರ ಶಿವಾಚಾರ್ಯರನ್ನು ಗೌರವಿಸಲಾಯಿತು.</p>.<p>ಬೆಂಗಳೂರಿನ ವಿಮಲ ರೇಣುಕ ವೀರಮುಕ್ತಿ ಶಿವಾಚಾರ್ಯರು, ಉರವಕೊಂಡ ಕರಿಬಸವರಾಜೇಂದ್ರ ಸ್ವಾಮೀಜಿ, ಹೆಬ್ಬಾಳ ನಾಗಭೂಷಣ ಶಿವಾಚಾರ್ಯರು, ಮರಿಯಮ್ಮನಹಳ್ಳಿ ಮಲ್ಲಿಕಾರ್ಜುನ ಶಿವಾಚಾರ್ಯರನ್ನು ಶ್ರೀಮಠದಿಂದ ತುಲಾಭಾರ ಮತ್ತು ವಾಮದೇವ ಶಿವಾಚಾರ್ಯರಿಗೆ ಭಕ್ತರು ತುಲಾಭಾರ ನೆರವೇರಿಸಿದರು.</p>.<p>ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಗಾಲಿ ಸೋಮಶೇಖರರೆಡ್ಡಿ, ಪ್ರಮುಖರಾದ ಹರ್ಲಾಪುರದ ಮಲ್ಲಿಕಾರ್ಜುನ, ಮಸೀದಿಪುರದ ಚಂದ್ರಶೇಖರಗೌಡ, ಎಸ್. ಮಲ್ಲನಗೌಡ, ರಾಜಶೇಖರಗೌಡ, ಬಿ. ಸದಾಶಿವಪ್ಪ, ವಿವಿಧ ಮಠಾಧೀಶರು, ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ: ‘</strong>ರೈತ ಮತ್ತು ಸೈನಿಕರು ದೇಶದ ಬೆನ್ನೆಲುಬು ಇದ್ದಂತೆ. ಇವರನ್ನು ಆದರಿಸುವುದು ಎಲ್ಲರ ಆದ್ಯ ಕರ್ತವ್ಯ’ ಎಂದು ಎಮ್ಮಿಗನೂರಿನ ಹಂಪಿಸಾವಿರ ಮಠದ ವಾಮದೇವ ಮಹಾಂತ ಶಿವಾಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಹಂಪಿಸಾವಿರ ದೇವರ ಮಹಾಂತರ ಮಠದಲ್ಲಿ ಲಿಂಗೈಕ್ಯ ಸಿದ್ಧಲಿಂಗ ಮಹಾಂತ ಶಿವಾಚಾರ್ಯರ 24ನೇ ಸಂಸ್ಮರಣೋತ್ಸವ ಅಂಗವಾಗಿ ನಡೆದ ರೈತ, ಸೈನಿಕ, ಮಠಾಧೀಶರ ತುಲಾಭಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಸೈನಿಕರು ದೇಶದ ಗಡಿ ಸಂರಕ್ಷಿಸಿದರೆ, ರೈತರು ನಮ್ಮೆಲ್ಲರ ಹೊಟ್ಟೆ ತುಂಬಿಸುತ್ತಾರೆ. ಇವರಿಬ್ಬರ ಪರಿಶ್ರಮದಿಂದ ದೇಶದ ಜನತೆ ಶಾಂತಿ, ನೆಮ್ಮದಿ, ಸಂತೃಪ್ತಿಯಿಂದ ಬಾಳಲು ಸಾಧ್ಯವಾಗಿದೆ’ ಎಂದರು.</p>.<p>‘ರೈತನಿಗೆ ಕೇವಲ ಗೊಬ್ಬರ, ಬೀಜ ಒದಗಿಸಿದರೆ ಸಾಲದು, ಅವರು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸಕಾಲಕ್ಕೆ ಯೋಗ್ಯ ಬೆಲೆ ದೊರೆಯುವಂತಾಗಬೇಕು’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಜಂಗಮ ವಟುಗಳಿಗೆ ಅಯ್ಯಾಚಾರ ದೀಕ್ಷೆ ಮತ್ತು ಶಿವಶಕ್ತಿ ಅಕ್ಕನ ಬಳಗಕ್ಕೆ ಚಾಲನೆ ನೀಡಲಾಯಿತು. </p>.<p>ಕೃಷಿ ಸೇವೆಗೆ ಶಾಲಿಗನೂರು ರೈತ ಶ್ರೀನಿವಾಸ ತಿಪ್ಪಣ್ಣ ವಡ್ಡರ, ದೇಶಸೇವೆಗೆ ಮಾಜಿ ಯೋಧ ಎಮ್ಮಿಗನೂರಿನ ಶೇಖ್ಸಾಬ್, ಈಶ ಸೇವೆಗೆ ಚೌಡಯ್ಯದಾನಪುರದ ಚಿತ್ರಶೇಖರ ಶಿವಾಚಾರ್ಯರನ್ನು ಗೌರವಿಸಲಾಯಿತು.</p>.<p>ಬೆಂಗಳೂರಿನ ವಿಮಲ ರೇಣುಕ ವೀರಮುಕ್ತಿ ಶಿವಾಚಾರ್ಯರು, ಉರವಕೊಂಡ ಕರಿಬಸವರಾಜೇಂದ್ರ ಸ್ವಾಮೀಜಿ, ಹೆಬ್ಬಾಳ ನಾಗಭೂಷಣ ಶಿವಾಚಾರ್ಯರು, ಮರಿಯಮ್ಮನಹಳ್ಳಿ ಮಲ್ಲಿಕಾರ್ಜುನ ಶಿವಾಚಾರ್ಯರನ್ನು ಶ್ರೀಮಠದಿಂದ ತುಲಾಭಾರ ಮತ್ತು ವಾಮದೇವ ಶಿವಾಚಾರ್ಯರಿಗೆ ಭಕ್ತರು ತುಲಾಭಾರ ನೆರವೇರಿಸಿದರು.</p>.<p>ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಗಾಲಿ ಸೋಮಶೇಖರರೆಡ್ಡಿ, ಪ್ರಮುಖರಾದ ಹರ್ಲಾಪುರದ ಮಲ್ಲಿಕಾರ್ಜುನ, ಮಸೀದಿಪುರದ ಚಂದ್ರಶೇಖರಗೌಡ, ಎಸ್. ಮಲ್ಲನಗೌಡ, ರಾಜಶೇಖರಗೌಡ, ಬಿ. ಸದಾಶಿವಪ್ಪ, ವಿವಿಧ ಮಠಾಧೀಶರು, ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>