<p><strong>ಕೊಟ್ಟೂರು</strong>: ಅಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಕಡಿಮೆ ವೋಲ್ಟೇಜ್ ನಿಂದ ಪಂಪ್ ಸೆಟ್ಗಳು ಚಾಲನೆಗೊಳ್ಳದೆ ರೈತರು ಪರದಾಡುವಂತಹ ಪರಿಸ್ಥಿತಿ ತಾಲ್ಲೂಕಿನಾದ್ಯಂತ ನಿರ್ಮಾಣವಾಗಿದೆ ಎಂದು ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಭರಮಣ್ಣ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಜೆಸ್ಕಾಂ ಇಲಾಖೆಯ ಕೂಡ್ಲಿಗಿ ಉಪವಿಭಾಗದ ಎಇಇ ಪ್ರಕಾಶ್ ಪತ್ತೇನೂರ್ ಇವರಿಗೆ ಗುರುವಾರ ಮನವಿ ಸಲ್ಲಿಸಿ ಮಾತನಾಡಿದರು.</p>.<p>ಕಳೆದ 20 ದಿನಗಳಿಂದ ಮಳೆಯಾಗದ ಕಾರಣ ಬೆಳೆಗಳು ಒಣಗುತ್ತಿವೆ ಹಾಗಾಗಿ ಕೊಳವೆ ಬಾವಿಗಳ ಸೌಲಭ್ಯ ಹೊಂದಿರುವ ರೈತರು ನೀರು ಹಾಯಿಸಲು ಮುಂದಾದರೆ ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಪೂರೈಕೆಯಿಂದ ರೈತರು ರೋಸಿ ಹೋಗಿದ್ದಾರೆ ಎಂದರು.</p>.<p>ಇಲಾಖಾಧಿಕಾರಿಗಳು ಗಮನ ಹರಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಗೆ ಇಳಿಯುವುದಾಗಿ ಎಚ್ಚರಿಸಿದರು.</p>.<p>ಎಇಇ ಪ್ರಕಾಶ್ ಪತ್ತೇನೂರ್ ಮನವಿ ಸ್ವೀಕರಿಸಿ ಮಾತನಾಡಿ, ಕೂಡಲೇ ಅಗತ್ಯ ವೋಲ್ಟೇಜ್ ಹಾಗೂ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.</p>.<p>ರೈತ ಸಂಘದ ಪದಾಧಿಕಾರಿಗಳಾದ ಕೆ.ಎಸ್.ಜಯಪ್ರಕಾಶ್ ನಾಯ್ಕ, ಜಂಬೂರು ಮರುಳಸಿದ್ಧಪ್ಪ, ಶ್ರೀಧರ್ ಒಡೆಯರ್, ಚಪ್ಪರದಹಳ್ಳಿ ಕೊಟ್ರೇಶಪ್ಪ, ಅಯ್ಯನಹಳ್ಳಿ ಭಾಗ್ಯಪ್ಪ, ರಮೇಶ ನಾಯ್ಕ, ಬಸವರಾಜಪ್ಪ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ಅಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಕಡಿಮೆ ವೋಲ್ಟೇಜ್ ನಿಂದ ಪಂಪ್ ಸೆಟ್ಗಳು ಚಾಲನೆಗೊಳ್ಳದೆ ರೈತರು ಪರದಾಡುವಂತಹ ಪರಿಸ್ಥಿತಿ ತಾಲ್ಲೂಕಿನಾದ್ಯಂತ ನಿರ್ಮಾಣವಾಗಿದೆ ಎಂದು ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಭರಮಣ್ಣ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಜೆಸ್ಕಾಂ ಇಲಾಖೆಯ ಕೂಡ್ಲಿಗಿ ಉಪವಿಭಾಗದ ಎಇಇ ಪ್ರಕಾಶ್ ಪತ್ತೇನೂರ್ ಇವರಿಗೆ ಗುರುವಾರ ಮನವಿ ಸಲ್ಲಿಸಿ ಮಾತನಾಡಿದರು.</p>.<p>ಕಳೆದ 20 ದಿನಗಳಿಂದ ಮಳೆಯಾಗದ ಕಾರಣ ಬೆಳೆಗಳು ಒಣಗುತ್ತಿವೆ ಹಾಗಾಗಿ ಕೊಳವೆ ಬಾವಿಗಳ ಸೌಲಭ್ಯ ಹೊಂದಿರುವ ರೈತರು ನೀರು ಹಾಯಿಸಲು ಮುಂದಾದರೆ ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಪೂರೈಕೆಯಿಂದ ರೈತರು ರೋಸಿ ಹೋಗಿದ್ದಾರೆ ಎಂದರು.</p>.<p>ಇಲಾಖಾಧಿಕಾರಿಗಳು ಗಮನ ಹರಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಗೆ ಇಳಿಯುವುದಾಗಿ ಎಚ್ಚರಿಸಿದರು.</p>.<p>ಎಇಇ ಪ್ರಕಾಶ್ ಪತ್ತೇನೂರ್ ಮನವಿ ಸ್ವೀಕರಿಸಿ ಮಾತನಾಡಿ, ಕೂಡಲೇ ಅಗತ್ಯ ವೋಲ್ಟೇಜ್ ಹಾಗೂ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.</p>.<p>ರೈತ ಸಂಘದ ಪದಾಧಿಕಾರಿಗಳಾದ ಕೆ.ಎಸ್.ಜಯಪ್ರಕಾಶ್ ನಾಯ್ಕ, ಜಂಬೂರು ಮರುಳಸಿದ್ಧಪ್ಪ, ಶ್ರೀಧರ್ ಒಡೆಯರ್, ಚಪ್ಪರದಹಳ್ಳಿ ಕೊಟ್ರೇಶಪ್ಪ, ಅಯ್ಯನಹಳ್ಳಿ ಭಾಗ್ಯಪ್ಪ, ರಮೇಶ ನಾಯ್ಕ, ಬಸವರಾಜಪ್ಪ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>